Tel: 7676775624 | Mail: info@yellowandred.in

Language: EN KAN

    Follow us :


ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

Posted date: 11 Mar, 2024

Powered by:     Yellow and Red

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ ನಾಟಕವೆಂದರೆ ಅದು ಪುರುಷರಿಗೆ ಮೀಸಲು. ಕೆಲ ಹೆಣ್ಣು ಪಾತ್ರಧಾರಿಗಳನ್ನು ಮಾತ್ರ ಹೊರಗಿನಿಂದ ಕರೆಸಿ ಪುರುಷರ ಜೊತೆಯಲ್ಲಿ ಅಭಿನಯಿಸಲು ಮಾತ್ರ ಅವಕಾಶ ನೀಡಲಾಗುತ್ತಿತ್ತು. ಆದರೆ ಇಂದು ಇಪ್ಪತ್ತನಾಲ್ಕು ಮಹಿಳೆಯರು ಭಾರತ್ ವಿಕಾಸ ಪರಿಷದ್ ನೇತೃತ್ವದಲ್ಲಿ ಪೌರಾಣಿಕ ನಾಟಕವನ್ನು ಪ್ರಸ್ತುತ ಪಡಿಸುತ್ತಿರುವುದು, ಈ ನಾಟಕವನ್ನು ನೋಡಲು ಸಹಸ್ರಾರು ಮಂದಿ ಕಾದು ನಿಂತಿರುವುದನ್ನು ನೋಡಿದರೆ, ಈ ನಾಟಕವು ಇತಿಹಾಸ ಸೃಷ್ಟಿಸುವುದರಲ್ಲಿ ಅನುಮಾನವೇ ಇಲ್ಲ ಎಂದು ವೈದೇಹಿ ವೈದ್ಯಕೀಯ ಮಹಾ ವಿದ್ಯಾಲಯದ ನಿರ್ದೇಶಕಿ ಡಾ. ತೇಜಸ್ವಿನಿ ತಿಳಿಸಿದರು.


ಅವರು ಭಾನುವಾರ ನಗರದ ಕೊಲ್ಲಾಪುರದಮ್ಮ ದೇವಾಲಯದ ಆವರಣದಲ್ಲಿನ ಡಾ. ರಾಜ್‍ಕುಮಾರ ಬಯಲು ರಂಗ ಮಂದಿರದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿ ಕೊಂಡಿದ್ದ ದ್ರೌಪದಿ ವಿಜಯ ಅಥವಾ ಶ್ರೀ ಕೃಷ್ಣ ಸಂಧಾನ ಎಂಬ ಪೌರಾಣಿಕ ನಾಟಕವನ್ನು ಉದ್ಘಾಟಿಸಿ ಮಾತನಾಡಿದರು.


ನಾನು ಹಲವಾರು ಐತಿಹಾಸಿಕ ಮತ್ತು ಪೌರಾಣಿಕ ನಾಟಕಗಳನ್ನು ನೋಡಿದ್ದೇನೆ. ಸಂಗೀತ, ನೃತ್ಯ ಜೊತೆಗೆ ವೈದ್ಯಕೀಯ ನನಗೆ ಇಷ್ಟವಾದ ವಿದ್ಯೆಗಳು. ಇವುಗಳಲ್ಲಿ ಇಂದು ಮಹಿಳೆಯರೇ ನಿರ್ವಹಿಸುತ್ತಿರುವ ಪೌರಾಣಿಕ ನಾಟಕವನ್ನು ಕಣ್ತುಂಬಿಕೊಳ್ಳಲು ಬಂದಿದ್ದೇನೆ. ಬಹುತೇಕ ಎಲ್ಲಾ ಪಾತ್ರಗಳ ತುಣುಕುಗಳನ್ನು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ನೋಡಿದ್ದೇನೆ. ತುಣುಕುಗಳೇ ಅಷ್ಟೊಂದು ಅದ್ಭುತವಾಗಿರಬೇಕಾದರೆ ನಾಟಕವು, ಜನಮನ ಸೂರೆಗೊಳ್ಳುವುದರಲ್ಲಿ ಅನುಮಾನವೇ ಇಲ್ಲ. ಇಲ್ಲಿ ನೆರೆದಿರುವ ಸಾರ್ವಜನಿಕರನ್ನು ನೋಡಿದರೇ ಇದು ಅರ್ಥವಾಗುತ್ತದೆ. ಈ ನಾಟಕಕ್ಕೆ ಸಹಕಾರ ನೀಡಿರುವ ಹಾಗೂ ಪಾತ್ರಧಾರಿಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತ ವಿಕಾಸ ಪರಿಷದ್‍ನ ದಕ್ಷಿಣ ಪ್ರಾಂತ್ಯದ ರಾಜ್ಯಾಧ್ಯಕ್ಷರಾದ ಅರುಣ್ ಜಿ. ಘಾಟಕೆ ರವರು ಮಾತನಾಡಿ ಮಹಿಳೆಯರು ಅಡುಗೆ ಮನೆಗೆ ಅಷ್ಟೆ ಸೀಮಿತವಲ್ಲ ನಾವು ಏನು ಬೇಕಾದರು ಸಾಧಿಸುತ್ತೇವೆ ಎಂಬ ಛಲ ಈ ಹಿಂದಿನಿಂದಲೂ ನಡೆದು ಬಂದಿದೆ. ವಿಶೇಷವಾಗಿ ಚನ್ನಪಟ್ಟಣ ನೆಲದಲ್ಲಿ ಅಂತಹ ಸತ್ವ ಗುಣವಿದೆ. ಕೇವಲ ಸಾಮಾಜಿಕ ಜಾಲತಾಣಗಳಲ್ಲೆ ಪಾತ್ರದಾರಿಗಳ ವಿಡಿಯೋ ತುಣುಕುಗಳನ್ನು ನೋಡಿ ಇಷ್ಟೊಂದು ಮಂದಿ ಆಗಮಿಸಿರುವುದು ಪಾತ್ರಧಾರಿಗಳ ಛಲವನ್ನು ತೋರಿಸುತ್ತದೆ ಎಂದರು.


ಈ ನಾಟಕದಲ್ಲಿ ಇಪ್ಪತ್ತೈದು ಪಾತ್ರಗಳಿದ್ದು, ಇಪ್ಪತ್ತನಾಲ್ಕು ಸ್ಥಳೀಯ ಮಹಿಳೆಯರು ಪಾತ್ರಗಳನ್ನು ನಿರ್ವಹಿಸಿದರು. ಎಲ್ಲಾ ಪಾತ್ರಧಾರಿಗಳು ಇದೇ ಮೊದಲ ಬಾರಿಗೆ ಪೌರಾಣಿಕ ನಾಟಕಕ್ಕೆ ಬಣ್ಣ ಹಚ್ಚಿದ್ದು, ಮೊದಲ ಪ್ರಯತ್ನದಲ್ಲೆ ತಮ್ಮ ತಮ್ಮ ಪಾತ್ರಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಕೊಲ್ಲಾಪುರದಮ್ಮ ಆವರಣದಲ್ಲಿ ಎರಡೂವರೆ ಸಾವಿರ ಕುರ್ಚಿಗಳನ್ನು ಹಾಕಿಸಲಾಗಿದ್ದು, ಅಷ್ಟೇ ಪ್ರಮಾಣದಲ್ಲಿ ಪ್ರೇಕ್ಷಕರು ನಿಂತು ನಾಟಕವನ್ನು  ವೀಕ್ಷಿಸಿದರು.  ಪ್ರತಿಯೊಬ್ಬ  ಪ್ರೇಕ್ಷಕರಿಗೂ  ನೀರು ಮತ್ತು ಊಟದ ವ್ಯವಸ್ಥೆ ಮಾಡಲಾಗಿತ್ತು.


*ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ:9742424949*

 

ಮಧ್ಯಾಹ್ನ 03.00 ಗಂಟೆಗೆ ಆರಂಭವಾದ ಈ ನಾಟಕವು ಮುಂಜಾನೆ 02.00 ಗಂಟೆವರೆಗೂ ಜರುಗಿತು. ದರ್ಬಾರ್ ಸೀನ್ ಮುಗಿಯುವ ವರೆಗೂ ಪ್ರೇಕ್ಷಕರು ಒಂದಿನಿತು ಕರಗದೆ ನಾಟಕ ವೀಕ್ಷಿಸಿದರು. 

ಶಕುನಿ, ದುರ್ಯೋಧನ, ಭೀಮ, ಅರ್ಜುನ, ಕೃಷ್ಣ, ದ್ರೌಪದಿ ಸೇರಿದಂತೆ ಎಲ್ಲಾ ಪಾತ್ರದಾರಿಗಳು ತಮ್ಮ ತಮ್ಮ ಪಾತ್ರಕ್ಕೆ ಅತ್ಯಂತ ಶ್ರದ್ಧೆಯಿಂದ ನ್ಯಾಯ ಒದಗಿಸಿದರು. ಪ್ರತಿ ಪಾತ್ರಗಳು ಬಂದ ಸಂದರ್ಭದಲ್ಲಿ ಸಂಭಾಷಣೆ ಮತ್ತು ಹಾಡುಗಳು ಬಂದ ಸಂದರ್ಭದಲ್ಲಿ ಪ್ರೇಕ್ಷಕರ ಕರತಾಡನ, ಶಿಳ್ಳೆ ಮತ್ತು ಒನ್ಸ್ ಮೋರ್ ಎಂಬ ಉದ್ಘೋಷಗಳು ಬರುತ್ತಿದ್ದವು.


ಪ್ರತಿ ಪಾತ್ರಧಾರಿಗಳು ಸಂಭಾಷಣೆ ಮುಗಿಸಿ ಬಂದಾಗ ಹಲವಾರು ಪ್ರೇಕ್ಷಕರು ಮತ್ತು ಸ್ನೇಹಿತರು ವೇದಿಕೆಯ ಬಳಿ ಬಂದು ಫೋಟೊ ತೆಗೆಸಿಕೊಂಡು ಅಭಿನಂದನೆ ಸಲ್ಲಿಸುತ್ತಿದ್ದುದು ವಿಶೇಷವಾಗಿತ್ತು.


ನಗರದ ಕೊಲ್ಲಾಪುರದಮ್ಮ ದೇವಾಲಯದ ಆವರಣದಲ್ಲಿರುವ ಡಾ. ರಾಜ್‍ಕುಮಾರ ಬಯಲು ರಂಗ ಮಂದಿರದಲ್ಲಿ ಭಾರತ ವಿಕಾಸ ಪರಿಷದ್, ಹಲವಾರು ಕಲಾವಿದ ಬಳಗ ಮತ್ತು ದಾನಿಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ, ದ್ರೌಪದಿ ವಿಜಯ ಅಥವಾ ಶ್ರೀಕೃಷ್ಣ ಸಂಧಾನ ಎಂಬ ಪೌರಾಣಿಕ ನಾಟಕದಲ್ಲಿ ಇಪ್ಪತ್ತನಾಲ್ಕು ಮಹಿಳೆಯರು ಪಾತ್ರಧಾರಿಗಳಾಗಿ ಅಭಿನಯಿಸಿದ ಈ ನಾಟಕವು ಹಿಂದೆಂದು ಕಂಡರಿಯದ ಪ್ರೇಕ್ಷಕರನ್ನು ಹಿಡಿದಿಡುವ ಮೂಲಕ ಇತಿಹಾಸ ನಿರ್ಮಿಸಿತು.


ಉದ್ಘಾಟನಾ ಸಂದರ್ಭದಲ್ಲಿ ತಾಲ್ಲೂಕು ಮತ್ತು ಜಿಲ್ಲೆಯ ಹಲವಾರು ಹೆಸರಾಂತ ಮಹಿಳೆಯರು ಹಾಗೂ ಭಾರತ ವಿಕಾಸ ಪರಿಷದ್‍ನ ತಾಲ್ಲೂಕು ಅಧ್ಯಕ್ಷರಾದ ಗುರುಮಾದಯ್ಯ, ರಾಜ್ಯ ಉಪಾಧ್ಯಕ್ಷರಾದ ವಸಂತ ಕುಮಾರ, ಕೆಂಗಲ್ ಆಂಜನೇಯ ಸ್ವಾಮಿ ಕಲಾ ಟ್ರಸ್ಟ್‌ನ ಪದಾಧಿಕಾರಿಗಳು ಸೇರಿದಂತೆ ಹಲವಾರು ಕಲಾವಿದರು ಭಾಗವಹಿಸಿದರು. ವಿಶೇಷವಾಗಿ ಹಿರಿಯ ಕಲಾವಿದರು, ಹಾಲಿ ವಿಧಾನ ಪರಿಷದ್ ಸದಸ್ಯರಾದ ಸಿ. ಎಂ. ಲಿಂಗಪ್ಪರವರು ದೀರ್ಘ ಸಮಯ ಕುಳಿತು ನಾಟಕ ವೀಕ್ಷಿಸಿದ್ದು ವಿಶೇಷವಾಗಿತ್ತು.


ಗೋ. ರಾ. ಶ್ರೀನಿವಾಸ...

ಮೊ:9845856139

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑