ಹಳೆ ದ್ವೇಷದ ಹಿನ್ನೆಲೆ. ಕಣ್ಣಿಗೆ ಖಾರದ ಪುಡಿ ಎರಚಿ, ಮಚ್ಚು ಬೀಸಿ ಕತ್ತು ಕೊಯ್ದು ಮಾರಣಾಂತಿಕ ಹಲ್ಲೆ

ಮದ್ದೂರು: ೨೪-೨೩; ಜನನಿಬಿಡ ಪ್ರದೇಶವಾದ ತಾಲೂಕು ಕಚೇರಿಯ ಆವರಣದಲ್ಲಿ, ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೋರ್ವ ತನ್ನ ದಾಯಾದಿ ಮೇಲೆ ಕಣ್ಣಿಗೆ ಖಾರದ ಪುಡಿ ಎರಚಿ, ಮಚ್ಚಿನಿಂದ ಕತ್ತುಕೊಯ್ದು ಮಾರಣಾಂತಿಕ ಹಲ್ಲೆ ನಡೆಸಿ, ಸ್ಥಳದಲ್ಲಿದ್ದ ಸಾರ್ವಜನಿಕರಿಂದ ಗೂಸಾ ತಿಂದ ಘಟನೆ ಮಂಗಳವಾರ ಮಧ್ಯಾಹ್ನ ಜರುಗಿದೆ.
ಮದ್ದೂರು ತಾಲ್ಲೂಕಿನ ಮರಳಿಗ ಗ್ರಾಮದ
ನಂದನ್ ಎಂಬ ವ್ಯಕ್ತಿ ಹಲ್ಲೆಗೆ ಯತ್ನಿಸಿದವನಾಗಿದ್ದು, ಅದೇ ಗ್ರಾಮದ ಚನ್ನರಾಜು ಎಂಬುವವರ ಮೇಲೆ ಹಲ್ಲೆ ಮಾಡಿದ್ದು ಕತ್ತಿನ ಭಾಗಕ್ಕೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿದೆ. ಇದನ್ನು ನೋಡಿದ ಸಾರ್ವಜನಿಕರು ತಮ್ಮ ಪ್ರಾಣಾಪಾಯವನ್ನು ಲೆಕ್ಕಿಸದೇ, ಮಚ್ಚು ಕಿತ್ತುಕೊಂಡು ನಂದನ್ ಗೆ ಥಳಿಸಿದ್ದಾರೆ.
ಕಳೆದ ಎರಡು ವರ್ಷಗಳ ಹಿಂದೆ ಚನ್ನರಾಜು ಮಗಳನ್ನು ಬೇರೆಯವರಿಗೆ ಮದುವೆ ಮಾಡಿಸಿದ ಕಾರಣಕ್ಕೆ ಇಬ್ಬರಿಗೂ ಹಳೇ ದ್ವೇಷವಿತ್ತು ಎನ್ನಲಾಗಿದೆ. ಈ ವಿಷಯವನ್ನು ಮುಂದಿಟ್ಟುಕೊಂಡು ಆಗಿಂದಾಗೆ ಎದುರು ಬದುರು ಮನೆಯವರಾಗಿದ್ದ ಇವರು ಸಣ್ಣಪುಟ್ಟ ಜಗಳವಾಡುತ್ತಿದ್ದರು. ಇದೇ ವಿಚಾರದಲ್ಲಿ ಬೇಸತ್ತ ನಂದನ್ ಇಂದು ತಾಲೂಕು ಕಚೇರಿ ಬಳಿ ಕಾದು ಮಚ್ಚಿನಿಂದ ಹಲ್ಲೆ ಮಾಡಲು ಕಾರಣವಾಗಿದೆ.
ಮದ್ದೂರು ಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹಲ್ಲೆ ಪ್ರಕರಣ ಸಂಪೂರ್ಣವಾಗಿ
ಸಿಸಿಟಿವಿಯಲ್ಲಿ ಘಟನೆ ಸೆರೆಯಾಗಿದೆ. ಘಟನಾ ಸ್ಥಳದಲ್ಲಿದ್ದ ಸಾರ್ವಜನಿಕರು
ಬೆಚ್ಚಿ ಬಿದ್ದು ಹಲ್ಲೆಗೊಳಗಾಗಿದ್ದ ವ್ಯಕ್ತಿಯನ್ನು ಬಿಡಿಸಲು ಕಲ್ಲುತೂರಾಟ ನಡೆಸಿ, ಮಚ್ಚು ಕಿತ್ತುಕೊಂಡು ಹಲ್ಲೇ ಮಾಡುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರೇ ತುಳಿದು ಥಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ಮನೋಜ್ ಭೇಟಿ ನೀಡಿ ಸೂಕ್ತ ಬಂದೋಬಸ್ತ್ ಏರ್ಪಡಿಸಿ, ಗಾಯಾಳುವಿಗೆ ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ವಿಮ್ಸ್ ಆಸ್ಪತ್ರೆಗೆ ಕಳುಹಿಸಿ, ಹಲ್ಲೆ ಮಾಡಿದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »

ಬಮೂಲ್ ಕಛೇರಿಯಲ್ಲಿ ನಿರ್ದೇಶಕರು ಮತ್ತು ಬೆಂಬಲಿಗರ ನಡುವೆ ಜಟಾಪಟಿ
ಚನ್ನಪಟ್ಟಣ.ಜ.೨೭: ನಗರದಲ್ಲಿನ ಬಮೂಲ್ ಕಛೇರಿಯಲ್ಲಿ ಶುಕ್ರವಾರ ಬೆಳಿಗ್ಗೆ ಚುನಾಯಿತ ಬಮೂಲ್ ನಿರ್ದೇಶಕ ಹೆಚ್ ಸಿ ಜಯಮುತ್ತು ಮತ್ತು ಇತ್ತೀಚೆಗೆ ಸರ

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ
ಚನ್ನಪಟ್ಟಣ: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ( ರಿ) ತಾಲ್ಲೂಕು ಘಟಕ ಚನ್ನಪಟ್ಟಣ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚನ್

ಪೌರಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸಿ: ಡಾ.ಅವಿನಾಶ್ ಮೆನನ್
ರಾಮನಗರ, ಜ. 2: ಪೌರಕಾರ್ಮಿಕರಿಗೆ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.

ಜಿಲ್ಲೆಯ ಕೆರೆಗಳನ್ನು ತುಂಬಿಸಲು ನೀರಾವರಿ ಯೋಜನೆಗಳಿಗೆ ವೇಗ: ಡಾ ಸಿ ಎನ್ ಅಶ್ವತ್ಥನಾರಾಯಣ
ರಾಮನಗರ, ಜ. 2: ಜಿಲ್ಲೆಯಲ್ಲಿರುವ 2,500 ಕೆರೆಗಳಿಗೆ ನೀರು ತುಂಬಿಸುವ ಗುರಿಯೊಂದಿಗೆ ಹಲವಾರು ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಕಾರ್ಯಗತಗೊಳಿಸಲು ಒತ್ತುಕೊಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿ

ವಸ್ತು, ವ್ಯಕ್ತಿ ಆರಿಸಿಕೊಳ್ಳಲು ಯೋಚಿಸುತ್ತೇವೆ ಜನಪ್ರತಿನಿಧಿ ಆರಿಸಲು ಎಡಗುತ್ತಿದ್ದೇವೆ. ನ್ಯಾ ಎಂ ಮಹೇಂದ್ರ
ಚನ್ನಪಟ್ಟಣ: ಜ:೨೫:೨೩. ಒಂದು ನಿರ್ಜೀವ, ಸಜೀವ

ಹಳೆ ದ್ವೇಷದ ಹಿನ್ನೆಲೆ. ಕಣ್ಣಿಗೆ ಖಾರದ ಪುಡಿ ಎರಚಿ, ಮಚ್ಚು ಬೀಸಿ ಕತ್ತು ಕೊಯ್ದು ಮಾರಣಾಂತಿಕ ಹಲ್ಲೆ
ಮದ್ದೂರು: ೨೪-೨೩; ಜನನಿಬಿಡ ಪ್ರದೇಶವಾದ ತಾಲೂಕು ಕಚೇರಿಯ ಆವರಣದಲ್ಲಿ, ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೋರ್ವ ತನ್ನ ದಾಯಾದಿ ಮೇಲೆ ಕಣ್ಣಿಗೆ ಖಾ

ನಗರದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರ ಬಂಧನ
ಚನ್ನಪಟ್ಟಣ.ಜ.೨೩: ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರನ್ನು ಪುರ ಪೋಲಿಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡ

ಉಜ್ಜನಹಳ್ಳಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ
ಚನ್ನಪಟ್ಟಣ: ಜನ-ಜಾನುವಾರುಗಳಿಗೆ ಉಪಟಳ ನೀಡುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಬಳಿಯ ತೋಟವೊಂದರಲ್ಲಿ ಅರಣ್

ಯಶಸ್ವಿಯಾಗಿ ಜರುಗಿದ ಶ್ರೀ ಕೆಂಗಲ್ ಲಕ್ಷ್ಮೀವೆಂಕಟೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ಜಿಲ್ಲಾಡಳಿತ ಭಾಗಿ
ಚನ್ನಪಟ್ಟಣ: ತಾಲ್ಲೂಕಿನ ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಧಾರ್ಮಿಕ ದತ್ತಿ ಇಲಾಖೆ, ಜಿಲ್ಲಾಡಳಿತ,

ಕೆಂಗಲ್ ಜಾತ್ರೆ ರದ್ದುಗೊಳಿಸಿದರೂ ಕಳೆಗಟ್ಟುತ್ತಿರುವ ಜಾನುವಾರುಗಳು
ಚನ್ನಪಟ್ಟಣ: ಜಾನುವಾರುಗಳಿಗೆ ಇತ್ತೀಚೆಗೆ ರಾಜ್ಯದಾದ್ಯಂತ ಚರ್ಮಗಂಟು ರೋಗ ಹರಡಿದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾಡಳಿತ ಇತಿಹಾಸ ಪ್ರಸಿದ್ಧ ಕೆಂಗ
ಪ್ರತಿಕ್ರಿಯೆಗಳು