ಕೈಲಾಂಚ ಹೋಬಳಿಯಲ್ಲಿ ಇಕ್ಬಾಲ್ ಹುಸೇನ್ ಚುನಾವಣಾ ಪ್ರಚಾರ
ರಾಮನಗರ : ನಾನು ನಿಮ್ಮಗಳ ಸೇವಕನಾಗಿ ಬಂದಿದ್ದು ನಿಮ್ಮ ಸೇವೆಗೆ ಸದಾ ಸಿದ್ದ , ಸರ್ಕಾರದ ಹತ್ತಾರು ಮಹತ್ತರ ಯೋಜನೆಗಳು ನನಗೆ ಶ್ರೀರಕ್ಷೆಯಾಗಿದ್ದು ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿ ಆಶೀರ್ವದಿಸಿ ಎಂದು ರಾಮನಗರ ವಿಧಾನಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿನಂತಿಸಿದರು.
ಮನೆ ಮನೆಗೆ ಕಾಂಗ್ರೇಸ್ ಪಕ್ಷದ ಸಾಧನೆ ತಿಳಿಸುವ ಪ್ರಚಾರ ಕಾರ್ಯ ಅಭಿಯಾನ ಹಿನ್ನಲೆಯಲ್ಲಿ ಕೈಲಾಂಚ ಹೋಬಳಿಯ ಹುಲಿಕೆರೆ-ಗುನ್ನೂರು ಗ್ರಾಪಂ ವ್ಯಾಪ್ತಿಯಲ್ಲಿನ ಕೆ.ಜಿ. ಹೊಸಹಳ್ಳಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಪಕ್ಷದ ಅಭಿವೃದ್ಧಿಯ ತಿಳುವಳಿಕೆ ಕರಪತ್ರ ನೀಡಿ ಸರ್ಕಾರದ ಸಾಧನೆ ಪ್ರಚಾರ ಕೈಗೊಂಡು ಮುಂದಿನ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನನ್ನನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಪಕ್ಷದ ವರಿಷ್ಟರು ನನಗೆ ಟಿಕೇಟ್ ಎಂದು ಘೋಷಣೆ ಮಾಡಿದ್ದಾರೆ ನಾನು ಈಗಾಗಲೇ ಕ್ಷೇತ್ರದ ಪ್ರತೀ ಮನೆ ಮನೆ ಸಂಪರ್ಕ ನಡೆಸಿ ಜನರ ಜೊತೆ ಮಾತನಾಡಿದ್ದೇನೆ ಎಲ್ಲಾ ಗ್ರಾಮಗಳಲ್ಲೂ ನನಗೆ ಉತ್ತಮ ಸ್ಪಂಧನೆ ದೊರಕುತ್ತಿದೆ ಎಂದ ಅವರು ನಾನು ರೈತಾಪಿ ಕುಟುಂಬದಿಂದ ಬಂದಿದ್ದು ಜನರ ನಾಡಿಮಿಡಿತ ನನಗೆ ಗೊತ್ತಿದೆ. ಕಳೆದ ಭಾರಿ ಜಿ.ಪಂ. ಅಧ್ಯಕ್ಷನಾಗಿದ್ದ ಅವಧಿಯಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜನರಿಗೆ ಚಿರಪರಿಚಿತನಾಗಿದ್ದೇನೆ ಅಲ್ಲದೆ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರದ ಐದು ವರ್ಷದ ಸ್ವಚ್ಚ, ದಕ್ಷ ಆಡಳಿತ, ಉತ್ತಮ ಆಡಳಿತ ನೀಡಿ ಜನರಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವ ಮೂಲಕ ಜನಸಾಮಾನ್ಯರ ಪಕ್ಷವಾಗಿ ಕೆಲಸ ಮಾಡಿದೆ. ಜನಪರ ಆಡಳಿತ, ಅಭಿವೃಧ್ಧಿ ಕಾರ್ಯಗಳು, ಜನಪರ ಯೋಜನೆಗಳು ಜನರ ವಿಶ್ವಾಸ ಗಳಿಸಿದೆ ಡಿ.ಕೆ. ಎಸ್. ಸಹೋದರರು ಜಿಲ್ಲೆಯ ನಾಲ್ಕೂ ಕ್ಷೇತ್ರಗಳ ಸಮಗ್ರ ಅಭಿವೃದ್ಧಿ ಚಿಂತನೆ ಮತ್ತು ಜಿಲ್ಲೆಯ ಕಾಂಗ್ರೇಸ್ ಮುಖಂಡರ ಒಗ್ಗಟ್ಟಿನ ದುಡಿಮೆ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಗ್ರಾಮಾಂತರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವಿ.ಎಚ್. ರಾಜು ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಸಂಸದ ಡಿ.ಕೆ. ಸುರೇಶ್ ಅವರು ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಅಲ್ಲದೆ ವಿಶೇಷವಾಗಿ ಜನರಿಗೆ ಅನುಕೂಲ ಕಲ್ಪಿಸುವ ಯೋಜನೆಗಳನ್ನು ಕೈಗೊಂಡು ಅಭಿವೃದ್ಧಿಯ ಹರಿಕಾರರಾಗಿದ್ದಾರೆ. ಇಂತಹ ಸನ್ನಿವೇಶದಲ್ಲಿ ಅವರ ಮಾರ್ಗದರ್ಶನದಲ್ಲಿ ಪಕ್ಷ, ಮುಖಂಡರು ಇಕ್ಬಾಲ್ ಹುಸೇನ್ ಅವರನ್ನು ಗುರ್ತಿಸಿ ಮುಂಬರುವ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿಸಿದ್ದಾರೆ, ಅದರಂತೆ ಕ್ಷೇತ್ರದಲ್ಲಿ ಓಡಾಟ ನಡೆಸಿದ್ದು ಕಾಂಗ್ರೇಸ್ ಪಕ್ಷದ ಸಾಧನೆ ತಿಳಿಸಲಾಗುತ್ತಿದೆ. ಪ್ರತಿ ಗ್ರಾಮದಲ್ಲೂ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯ ಬಗ್ಗೆ ಒಲವು ವ್ಯಕ್ತವಾಗಿದೆ ಎಂದರು.
ತಾ.ಪಂ. ಸದಸ್ಯ ರೇಣುಕಾಪ್ರಸಾದ್ ಮಾತನಾಡಿ ಕಾಂಗ್ರೇಸ್ ಪಕ್ಷದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯವಾಗಿದ್ದು ಕಳೆದ ಐದು ವರ್ಷದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರ ರಾಜ್ಯದ ರೈತಾಪಿ ಜನರಿಂದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗುವಂತೆ ಮಾಡಿದ್ದಾರೆ ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲೂ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಜನತೆ ಆಶೀರ್ವದಿಸಬೇಕು ಅಂತೆಯೇ ರಾಮನಗರ ವಿದಾನಸಭಾ ಕ್ಷೇತ್ರದಲ್ಲಿಯೂ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗೆ ಮತನೀಡಿ ಗೆಲ್ಲಿಸುವಂತೆ ಕರೆ ನೀಡಿದರು.
ಕೈಲಾಂಚ ಹೋಬಳಿ ಅಧ್ಯಕ್ಷ ನಾಗೇಶ್, ಮುಖಂಡರಾದ ಶಂಕರ್, ವೆಂಕಟೇಶ್, ಶ್ರೀನಿವಾಸಮೂರ್ತಿ, ರಾಮಾನಾಯ್ಕ, ಪುಟ್ಟಮಾದು, ಗುನ್ನೂರು ಶಂಕರ್, ಶಿವಣ್ಣ, ಭೀಮ, ಲೋಕೇಶ್, ಸಿದ್ದರಾಜು, ಪಾಪಣ್ಣ, ವಿಜಯ್ ಇದ್ದರು.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು