Tel: 7676775624 | Mail: info@yellowandred.in

Language: EN KAN

    Follow us :


ಮತಯಂತ್ರ ಪ್ರಾತ್ಯಕ್ಷಿಕೆ

Posted date: 11 Apr, 2018

Powered by:     Yellow and Red

ಮತಯಂತ್ರ ಪ್ರಾತ್ಯಕ್ಷಿಕೆ

ಮಾಗಡಿ: ಮತದಾರರು ತಾವು ಚಲಾವಣೆ ಮಾಡಿದ ಮತದ ಖಾತ್ರಿ ಪಡಿಸುವ ವಿವಿಪ್ಯಾಟ್ ವ್ಯವಸ್ಥೆ ಮತದಾರರ ವಿಶ್ವಾಸ ಹೆಚ್ಚಿಸುವಲ್ಲಿ ಸಹಕಾರಿಯಾಗಲಿದೆ ಎಂದು ತಹಸೀಲ್ದಾರ್ ಶಿವಕುಮಾರ್ ಹೇಳಿದರು. 

ಪಟ್ಟಣದ ತರಕಾರಿ ಮಾರುಕಟ್ಟೆ, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಹಾಗೂ ಕಲ್ಯಾಗೇಟ್ ವೃತ್ತದಲ್ಲಿ  ಮತ ಯಂತ್ರದ ಪ್ರಾತ್ಯಕ್ಷಿಯನ್ನು ನೀಡಿ ಮಾತನಾಡಿ ಮತಚಲಾವಣೆಯನ್ನೂ ಯಾರಿಗೆ ಮಾಡಿದ್ದೇವೆ ಎಂಬುದನ್ನೂ ಸೂಚಿಸುವ ವಿವಿಪ್ಯಾಟ್‍ನಲ್ಲಿ 7 ಸೆಕೆಂಡ್ ವೀಕ್ಷಿಸಲು ಅವಕಾಶವಿರುತ್ತದೆ. ಏನಾದರೂ ಲೋಪವಾದರೆ ಮತಗಟ್ಟೆ ಅಧಿಕಾರಿಗಳ ಗಮನಕ್ಕೆ ತರಬಹುದಾಗಿದೆ. ಪ್ರಥಮವಾಗಿ ರಾಜ್ಯದಲ್ಲಿ ಈ ಪದ್ಧತಿ ಅಳವಡಿಸಲಾಗುತ್ತಿದೆ. ಮತದಾರರಿಗೆ ವಿಶ್ವಾಸ ಮೂಡಿಸುವ ಉದ್ದೇಶದಿಂದ ಚುನಾವಣಾ ಆಯೋಗ ವಿವಿಪ್ಯಾಟ್ ಅನುಕೂಲ ಮಾಡಿಕೊಟ್ಟಿದೆ ಎಂದು ತಿಳಿಸಿದರು.

 

ಚುನಾವಣಾಧಿಕಾರಿ ಕೃಷ್ಣಮೂರ್ತಿ ಮಾತನಾಡಿ ಮತ ಚಲಾಯಿಸಿರುವ ಅಭ್ಯರ್ಥಿಯ ಕ್ರಮಸಂಖ್ಯೆ, ಚಿಹ್ನೆ, ವಿವಿಪ್ಯಾಟ್ ಯಂತ್ರದ ಪರದೆಯ ಮೇಲೆ ಮೂಡುತ್ತದೆ. ಮತದಾರರು ಯಾವುದೇ ಸಂದೇಹ, ತಪ್ಪು ಕಲ್ಪನೆ ಮಾಡಿಕೊಳ್ಳದೆ ಮುಕ್ತವಾಗಿ ಮತ ಚಲಾಯಿಸ ಬಹುದಾಗಿದೆ ಎಂದ ಅವರು ಬ್ಯಾಲೆಟ್ ಯೂನಿಟ್‍ನಲ್ಲಿ ಒಮ್ಮೆ 16 ಅಭ್ಯರ್ಥಿಗಳ ಹೆಸರು ಪ್ರದರ್ಶನವಾಗಲಿದೆ. ಒಂದು ಯೂನಿಟ್‍ನಲ್ಲಿ 64 ಅಭ್ಯರ್ಥಿಗಳಿಗೆ ಅವಕಾಶವಿದೆ. ಅಭ್ಯರ್ಥಿಗಳ ಕೊನೆಯಲ್ಲಿ ನೋಟವನ್ನು ಅಳವಡಿಸಲಾಗಿದ್ದು ಸ್ವರ್ದೆಯಲ್ಲಿರುವ ಅಭ್ಯರ್ಥಿಗಳ ಪೈಕಿ ಯಾರ ಪರವಾಗಿಯೂ ಮತದಾನ ಮಾಡಲು ಇಷ್ಟವಿಲ್ಲದ ಮತದಾರರು ನೋಟಾ ಮತಗುಂಡಿ ಒತ್ತುವುದರ ಮೂಲಕ ತಟಸ್ಥ ಮತದಾನಕ್ಕೂ ವಿವಿಪ್ಯಾಟ್‍ನಲ್ಲಿ ಅವಕಾಶವಿದೆ. ಭಾರತ ಚುನಾವಣಾ ಆಯೋಗದಿಂದ ಪೂರೈಕೆಯಾಗಿರುವ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿಪ್ಯಾಟ್‍ಗಳನ್ನು ಬಿ.ಇ.ಎಲ್. ತಾಂತ್ರಿಕ ಸಮಿತಿ ವಿವರವಾಗಿ ಪರಿಶೀಲಿಸಿ ಪ್ರಮಾಣಿಕರಿಸಿದ್ದು, ಮತದಾನ ಮಾಡುವ ಸಮಯದಲ್ಲಿ ಯಾವುದೇ ವ್ಯಕ್ತಿ ಮತಯಂತ್ರದಲ್ಲಿ ತಾನು ಹಾಕಿದ ಮತ ಸರಿಯಾದ ಅಭ್ಯರ್ಥಿಗೆ ತಲುಪಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದರೆ ಅಂತಹ ವ್ಯಕ್ತಿಗೆ ಮತ್ತೊಮ್ಮೆ ಮತದಾನದ ಅವಕಾಶ ನೀಡಲಾಗುವುದು. ಅದರೆ ಆ ವ್ಯಕ್ತಿ ಮುಚ್ಚಳಿಕೆ ಬರೆದುಕೊಡಬೇಕು. ಮರು ಮತದಾನ ಮಾಡುವ ಸಂದರ್ಭದಲ್ಲಿ ಬೂತ್ ಮಟ್ಟದ ಅಧಿಕಾರಿ ವೀಕ್ಷಣೆ ಮಾಡಲಿದ್ದಾರೆ. ವ್ಯಕ್ತಿ ಚಲಾಯಿಸಿದ ಮತ ಸರಿಯಾಗಿ ನಮೂದಾದರೆ ಆ ಸಂದರ್ಭದಲ್ಲಿ ಅನುಮಾನ ವ್ಯಕ್ತಪಡಿಸಿ ಮರು ಮತದಾನಕ್ಕೆ ಅವಕಾಶ ಪಡೆದ ಮತದಾರನಿಗೆ ಆರು ತಿಂಗಳ ಜೈಲುವಾಸ ವಿಧಿಸಲಾಗುವುದು. ಒಂದೊಮ್ಮೆ ವ್ಯಕ್ತಿ ಅನುಮಾನ ವ್ಯಕ್ತಪಡಿಸಿದಂತೆ ತಾಂತ್ರಿಕ ದೋಷ ಕಂಡು ಬಂದರೆ ಆ ಮತಗಟ್ಟೆಯಲ್ಲಿ ಮರು ಮತದಾನಕ್ಕೆ ಅದೇಶ ಮಾಡಲಾಗುವುದು ಎಂದು ವಿವರಿಸಿದರು.

ಪುರಸಭೆಯ ಮುಖ್ಯಾಧಿಕಾರಿ ಶಿವಪ್ಪ, ಪರಿಸರ ಎಂಜಿನಿಯರ್ ಸುಷ್ಮಾ, ಕಂದಾಯ ಇಲಾಖೆ ಗಂಗಮಾರಯ್ಯ, ಜಗನ್ನಾಥ್, ಶ್ರೀನಿವಾಸ್ ಮತ್ತಿತರರು ಇದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑