Tel: 7676775624 | Mail: info@yellowandred.in

Language: EN KAN

    Follow us :


ರಾಮನಗರ ಪಿರಮಿಡ್ ಧ್ಯಾನ ಕೇಂದ್ರದ ಮೊದಲನೆ ವಾರ್ಷಿಕೋತ್ಸವ

Posted date: 11 Apr, 2018

Powered by:     Yellow and Red

ರಾಮನಗರ: ರಾಮನಗರ ಪಿರಮಿಡ್ ಧ್ಯಾನ ಕೇಂದ್ರದ 1ನೇ ವಾರ್ಷಿಕೋತ್ಸವವನ್ನು 13-04-2018ರಂದು ಹಮ್ಮಿಕೊಳ್ಳಲಾಗಿದೆ ಎಂದು ಪಿರಮಿಡ್ ನಿರ್ವಾಹಕ ಹಾಗೂ ನಿವೃತ್ತ ಪೊಲೀಸ್ ಸಹಾಯಕ ಉಪ ನಿರೀಕ್ಷಕರಾದ ಎನ್.ಕೃಷ್ಣಪ್ಪ ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ನಗರದ ಚಾಮುಂಡೇಶ್ವರಿ ಬಡಾವಣೆಯಲ್ಲಿ ನಿರ್ಮಿಸಲಾಗಿರುವ ಪಿರಮಿಡ್ ಧ್ಯಾನ ಕೇಂದ್ರದ 1ನೇ ವಾರ್ಷಿಕೋತ್ಸವವನ್ನು ಶ್ರೀ ಬ್ರಹ್ಮರ್ಷಿ ಸುಭಾಷ್ ಪತ್ರೀಜೀರವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ದಿನಾಂಕ 13-04-2018ನೇ ಶುಕ್ರವಾರ ಬೆಳಿಗ್ಗೆ 8-30ಕ್ಕೆ ಧ್ಯಾನಮಂದಿರದಿಂದ ಸಸ್ಯಾಹಾರ ಜನಜಾಗೃತಿ ಜಾಥಾದೊಂದಿಗೆ ನಗರದ ಮುಖ್ಯ ಬೀದಿಗಳಲ್ಲಿ ಸಂಚರಿಸಿ ಕಾಯಿಸೊಪ್ಪಿನ ಬೀದಿ, ಅರಳಿಮರ ಶ್ರೀ ರಾಮ ಚಿತ್ರಮಂದಿರ, ವಾಟರ್ ಟ್ಯಾಂಕ್ ಸರ್ಕಲ್, ಮತ್ತು ಎಂ.ಜಿ.ರಸ್ತೆ, ಮಂಡಿಪೇಟೆ, ಹಳೇ ಬಸ್‍ಸ್ಟಾಂಡ್ ಸೇರಿದಂತೆ ಛತ್ರದ ಬೀದಿ ಮತ್ತು ಅಗ್ರಹಾರ ಮುಖಾಂತರ ಶ್ರೀ ಲಕ್ಷ್ಮೀನಾರಾಯಣ ಕಲ್ಯಾಣಮಂಟಪದಲ್ಲಿ ಕೊನೆಗೊಳ್ಳುವುದು.

ವೇದಿಕೆ ಕಾರ್ಯಕ್ರಮ ಮಧ್ಯಾಹ್ನ 12 ಗಂಟೆಗೆ ಸಾಮೂಹಿಕ ಧ್ಯಾನ, ಸತ್ಸಂಗ ಇದ್ದು ಪ್ರಾರ್ಥನೆಯನ್ನು ಕೆ.ಎನ್.ಗಂಗಾಧರಯ್ಯ ನೆರವೇರಿಸುವರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೇಲಿಮಠ ಮಹಾಸಂಸ್ಥಾನದ ಪರಮಪೂಜ್ಯ ಶ್ರೀ ನಿ.ಪ್ರ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು, ಪಿ.ಎಸ್.ಎಸ್.ಎಂ. ಸ್ವರ್ಣಮಾಲಾ ಪತ್ರೀಜಿ, ಕೆ.ಪಿ.ಡಿ.ಪಿ.ಟಿ. ಅಧ್ಯಕ್ಷರಾದ ವರಹಮೂರ್ತಿ ವಿಶ್ವ ಪ್ರಾಣಿ ದಯಾ ಸಂಘ ಅಧ್ಯಕ್ಷರಾದ ಶ್ರೀ ದಯಾನಂದ ಸ್ವಾಮೀಜಿಗಳು ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸುವರು.

ರಾಮನಗರ ಪಿರಮಿಡ್ ಯೋಗ ಮತ್ತು ಧ್ಯಾನ ಕೇಂದ್ರವನ್ನು 13-04-2017ರಂದು ಕೃಷ್ಣಪ್ಪರವರ ನೇತೃತ್ವದಲ್ಲಿ ನಿರ್ಮಾಣಗೊಂಡು ಲೋಕಾರ್ಪಣೆಯಾಗಿರುತ್ತದೆ. ಈ ಧ್ಯಾನ ಕೇಂದ್ರವು ಪಿರಮಿಡ್ ಸ್ಪಿರಿಚ್ಯುವಲ್ ಸೊಸೈಟೀನ್ ಮೂವ್‍ಮೆಂಟ್(ಇಂಡಿಯಾದ) ಸಂಸ್ಥಾಪಕರಾದ ಬ್ರಹ್ಮರ್ಷಿ ಸುಭಾಷ್ ಪತ್ರೀಜಿರವರ ಮೂಲ ಉದ್ದೇಶವಾದ ಅಹಿಂಸೆ, ಧ್ಯಾನ ಮತ್ತು ಪಿರಮಿಡ್ ಶಕ್ತಿಯನ್ನು ಉಚಿತವಾಗಿ ನಿರಂತರ ರಾಮನಗರದ ಜನತೆಗೆ ತಲುಪಿಸುವ ಸದುದ್ದೇಶದಿಂದ ನಿರ್ಮಾಣಗೊಂಡು ಯಶಸ್ವಿಯಾಗಿ ಒಂದು ವರ್ಷವನ್ನು ಪೂರೈಸಿರುತ್ತದೆ. ಪ್ರತಿ ದಿನ ಈ ಧ್ಯಾನ ಕೇಂದ್ರದಲ್ಲಿ ಸುಮಾರು 80 ರಿಂದ 100 ಮಂದಿ ಅನಾಪನಸತಿ ಧ್ಯಾನವನ್ನು ಸಾಧನೆ ಮಾಡಿ ಶಾರೀರಿಕ ಮತ್ತು ಮಾನಸಿಕ ಪ್ರಶಾಂತತೆ ಮತ್ತು ಆರೋಗ್ಯವನ್ನು ಪಡೆದಿರುತ್ತಾರೆ. 

ಪ್ರತಿಯೊಬ್ಬ ಮನುಷ್ಯನೂ ಧ್ಯಾನಿ ಆಗಬೇಕು, 5 ವರ್ಷದಿಂದ ಕೊನೆ ಉಸಿರು ಇರುವವರೆಗೂ ಧ್ಯಾನ ಮಾಡಬಹುದು, ಧ್ಯಾನಕ್ಕೆ ಮತ ಬೇಧ, ಬಡವ ಶ್ರೀಮಂತ, ಜಾತಿ ಬೇಧವಿಲ್ಲ,  ಮಾನಸಿಕ ದೈಹಿಕ ಸಮಸ್ಯೆಗಳಿಗೆ ಒಂದೇ ಪರಿಹಾರ ಅದುವೇ ಧ್ಯಾನ. ಧ್ಯಾನದಿಂದ ಸಕ್ಕರೆ ಕಾಯಿಲೆ, ರಕ್ತದೊತ್ತಡ, ಕ್ಯಾನ್ಸರ್, ಇನ್ನಿತರ ಹಲವು ಕಾಯಿಲೆಗಳನ್ನು ಗುಣಮುಖ ಮಾಡುವ ಶಕ್ತಿ ಇದೆ. 

ಪ್ರತಿ ದಿನ ಬೆಳಗ್ಗೆ 5 ರಿಂದ 7ರವರೆಗೆ ಪತಾಂಜಲಿ ಯೋಗ, 6 ರಿಂದ 8ರವರೆಗೆ ಅಯ್ಯಂಗಾರಿ ಯೋಗ, ಪ್ರತಿ ಭಾನುವಾರ ಸತ್ಸಂಗ ಕಾರ್ಯಕ್ರಮಗಳು ನಡೆಯುತ್ತಿದ್ದು ಉಚಿತವಾಗಿ ರಾಮನಗರ ಜನತೆಗೆ ಇದರ ಸದುಪಯೋಗ ಪಡೆದುಕೊಂಡು ಮಾನಸಿಕ ದೈಹಿಕ ರೋಗ ರುಜಿನಗಳಿಲ್ಲದೆ ಬದುಕಬೇಕೆಂದು ಧ್ಯಾನ ಕೇಂದ್ರದ ಆಯೋಜಕರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9449980224, 8310810645.¬

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑