Tel: 7676775624 | Mail: info@yellowandred.in

Language: EN KAN

    Follow us :


ನ್ಯೂ ಎಕ್ಸ್‍ಪರ್ಟ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Posted date: 28 Jan, 2018

Powered by:     Yellow and Red

ನ್ಯೂ ಎಕ್ಸ್‍ಪರ್ಟ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

ರಾಮನಗರ : ಹದಿ ಹರೆಯದ ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನ ತೋರುವುದು ಪೋಷಕರು ಮತ್ತು ಶಿಕ್ಷಕರ ಕರ್ತವ್ಯ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ರತ್ನಮ್ಮ ತಿಳಿಸಿದರು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನ್ಯೂ ಎಕ್ಸ್‍ಫರ್ಟ್ ಕಾಲೇಜಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಎಕ್ಸಫರ್ಟ್ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹೊಸ ಕನಸುಗಳೊಂದಿಗೆ ಕಾಲೇಜು ಮೆಟ್ಟಿಲು ಹತ್ತುವ ವಿದ್ಯಾರ್ಥಿಗಳಿಗೆ ಹೊಸ ಪ್ರಪಂಚಕ್ಕೆ ಬಂದ ಅನುಭವವಿರುತ್ತದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮನಸ್ಸು ಒಳ್ಳೆಯದು ಕೆಟ್ಟದ್ದು ಎಂಬ ವಿಚಾರಗಳಿಗಿಂತ ಮನಸ್ಸು ಎಳೆದ ಕಡೆ ಹೋಗುತ್ತಾರೆ. ಇಂತಹ ಸಮಯದಲ್ಲಿ ಸರಿಯಾದ ಮಾರ್ಗದರ್ಶನವನ್ನು ಶಿಕ್ಷಕರು ಮತ್ತು ಪೋಷಕರು ನೀಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳ್ಳುವಂತೆ ಮಾಡಬೇಕಿದೆ ಎಂದು ಹೇಳಿದರು.

ಯಶಸ್ವಿಗೆ ಯಾವುದೆ ಅಡ್ಡ ದಾರಿಗಳಿಲ್ಲ. ಸತತ ಪ್ರಯತ್ನದಿಂದ ಮಾತ್ರ ಶಾಶ್ವತ ಯಶಸ್ಸು ಪಡೆಯಲು ಸಾಧ್ಯ. ಶೀಘ್ರದಲ್ಲಿಯೆ ಪಿಯು ಪರೀಕ್ಷೆಗಳು ಆರಂಭವಾಗಲಿದ್ದು, ಕನಿಷ್ಠ ಒಂದು ತಿಂಗಳು ವಿದ್ಯಾರ್ಥಿಗಳು, ಟಿವಿ. ಮೊಬೈಲ್‍ನಿಂದ ದೂರಬೇಕು. ಪೋಷಕರು ಪರೀಕ್ಷೆ ಮುಗಿಯುವವರೆಗೆ ಮಕ್ಕಳ ವಿದ್ಯಾಭ್ಯಾಸ ಮತ್ತು ಯೋಗ ಕ್ಷೇಮ ವಿಚಾರದ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದರು.

ಪರೀಕ್ಷೆ ಇದೆ ಎಂದು ಆತಂಕಪಡುವ ಅವಶ್ಯಕತೆ ಇಲ್ಲ. ಕಲಿಕೆಯಲ್ಲಿ ಹಿಂದೆ ಉಳಿದಿದ್ದರೆ ಅಂತಹ ವಿಷಯಗಳ ಪರಿಣಿತ ಶಿಕ್ಷಕರ ಮಾರ್ಗದರ್ಶನ ಪಡೆಯಬೇಕು. ಪೋಷಕರು ಮಕ್ಕಳ ಅಗತ್ಯಕ್ಕೆ ಬೇಕಾದ ಸಮಯವನ್ನು ಮೀಸಲಿಡಬೇಕು. ಕೇವಲ ಮಕ್ಕಳ ಮೇಲೆ ಒತ್ತಡ ಹಾಕುವುದು ಸರಿಯಲ್ಲ ಎಂದರು. 

ಕಾಲೇಜಿಗೆ ಹಾಜರಾಗದ ವಿದ್ಯಾರ್ಥಿಗಳಿಗೆ ಹಾಜರಾತಿ ಕೊರತೆಯಿದ್ದಲ್ಲಿ ಪರೀಕ್ಷಾ ಪ್ರವೇಶ ಪತ್ರ ನೀಡಲು ಬರುವುದಿಲ್ಲ. ಪೋಷಕರು ವಿದ್ಯಾರ್ಥಿಗಳ ಮೇಲೆ ವಿಶ್ವಾಸವಿಟ್ಟು ಕಾಲೇಜಿಗೆ ಕಳುಹಿಸಿರುತ್ತಾರೆ. ಆದರೆ ಕೆಲವು ವಿದ್ಯಾರ್ಥಿಗಳು ಕಾಲೇಜಿಗೆ ಬರುವುದಿಲ್ಲ. ಅಂತಹವರು ಪರೀಕ್ಷಾ ಸಂದರ್ಭದಲ್ಲಿ ಪ್ರವೇಶ ಪತ್ರ ಲಭಿಸದೆ ಇದ್ದಾಗ ಪೋಷಕರಿಗೆ ತಿಳಿಯುತ್ತದೆ. ಇದಕ್ಕಿಂತ ಮೊದಲೆ ಪೋಷಕರು ನಿಯಮಿತವಾಗಿ ಕಾಲೇಜಿಗೆ ಬಂದು ಪ್ರಾಂಶುಪಾಲರ ಬಳಿ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಪಡೆಯುತ್ತಿರಬೇಕು ಎಂದು ಕಿವಿ ಮಾತು ಹೇಳಿದರು.

ಪಿಯುಸಿ ಪಾಸಾದರೂ ಸಹ ಶೇ.80 ರಷ್ಟು ಮಕ್ಕಳು ಉನ್ನತ ಶಿಕ್ಷಣ ಪಡೆಯುವಲ್ಲಿ ವಿಫಲರಾಗುತ್ತಿದ್ದಾರೆ. ಈ ಬಗ್ಗೆ ಪೋಷಕರು ಗಮನಹರಿಸಬೇಕು. ಕನಿಷ್ಠ ಪದವಿಯವರೆಗೆ ವಿದ್ಯಾಭ್ಯಾಸಕ್ಕೆ ಅವಕಾಶ ನೀಡಬೇಕು ಎಂದರು.

ಪ್ರೊಪೆಸರ್ಸ್ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಡಾ.ಮಹೇಶ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕಡಿಮೆ ಖರ್ಚಿನಲ್ಲಿ ದೊರಕಬೇಕು ಎಂಬ ದೃಷ್ಟಿಯಿಂದಲೆ ರಾಮನಗರದಲ್ಲಿ ಕಾಲೇಜು ಆರಂಭಿಸಲಾಗಿದೆ. ಇದುವರೆಗೆ ಇಲ್ಲಿಯ ಮಕ್ಕಳು ದೂರದ ಊರುಗಳಿಗೆ ಹೋಗುತ್ತಿದ್ದರು. ನುರಿತ ಮತ್ತು ಅನುಭವಿ ಶಿಕ್ಷಕರೆಲ್ಲಾ ಒಂದುಗೂಡಿ ಆರಂಭಿಸಿರುವ ಈ ಶಿಕ್ಷಣ ಸಂಸ್ಥೆ ಉತ್ತಮ ಫಲಿತಾಂಶ ತರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬ ಭರವಸೆ ವ್ಯಕ್ತಪಡಿಸಿದರು.

ಅರ್ಥಶಾಸ್ತ್ರ ಉಪನ್ಯಾಸಕ ಜಿ.ಶಿವಣ್ಣ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಾಮಾನ್ಯ ಜ್ಞಾನವನ್ನು ಹೊಂದಿರಬೇಕಾಗುತ್ತದೆ. ಇದಕ್ಕಾಗಿ ಪ್ರತಿದಿನ ದಿನಪತ್ರಿಕೆಗಳ ಕಡೆ ಕಣ್ಣಾಡಿಸಿ ಜಗತ್ತಿನ ಪ್ರಚಲಿತ ವಿದ್ಯಾಮಾನಗಳ ಬಗ್ಗೆ ತಿಳಿದುಕೊಳ್ಳಬೇಕಿದೆ ಎಂದರು. 

ಕಾಲೇಜಿನ ಪ್ರಾಚಾರ್ಯ ಡಾ|| ಡಿ.ಆರ್. ರವಿಕುಮಾರ್, ಜಾತ್ಯಾತೀತ ಜನತಾದಳದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮೆಹಬೂಬ್ ಖಾನ್, ನಗರಸಭಾ ಸದಸ್ಯೆ ಅಸೀನಾ ಬಾನು, ಎಸ್.ಟಿ.ಎನ್.ಕಾಂಪ್ಲೆಕ್ಷ್ ಮಾಲೀಕ ಎಸ್.ಟಿ. ನಂದೀಶ್  ಮಾತನಾಡಿದರು.

ರಾಜು ಮತ್ತು ಶಿವವೆಂಕಟಯ್ಯ ತಂಡದವರಿಂದ ಜನಪದ ಗೀತಗಾಯನ ಕಾರ್ಯಕ್ರಮ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ವೈವಿದ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ಮನಸೂರೆಗೊಂಡವು. 

ಕಾಲೇಜು ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಕ್ರೀಡೆ, ಸಾಂಸ್ಕøತಿಕ, ಪಠ್ಯ ಕಾರ್ಯಕ್ರಮಗಳ ಚಟುವಟಿಕೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ಪ್ರಶಸ್ತಿಪತ್ರ ವಿತರಿಸಿದರು.

ಕನ್ನಡ ಪ್ರಾಧ್ಯಾಪಕ ಉಮಾಶಂಕರ್, ಸಂಸ್ಥೆಯ ನಿರ್ದೇಶಕರಾದ ಶಿವಕುಮಾರ್, ಉಪ ಪ್ರಾಚಾರ್ಯ ಕಿರಣ್ ಕುಮಾರ್, ಉಪನ್ಯಾಸಕರಾದ ಚಂದ್ರಶೇಖರ್, ಅರುಣ್‍ಕುಮಾರ್, ಪ್ರಶಾಂತ್, ಚೈತ್ರ, ರವಿಕುಮಾರ್, ವಿಭಾ, ಪವಿತ್ರ, ಹರ್ಷಿಯಾ ಭಾನು, ಸ್ವಾತಿ ಇದ್ದರು. 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑