Tel: 7676775624 | Mail: info@yellowandred.in

Language: EN KAN

    Follow us :


ಕೆ.ಎಂ.ಎಫ್ ಅಧ್ಯಕ್ಷರ ತವರಲ್ಲಿ ವಿತರಿಸಿರುವ ಖನಿಜ ಮಿಶ್ರಣ ಪ್ಯಾಕೇಟ್ ಅಸಲಿಯೋ ನಕಲಿಯೋ? 

Posted date: 28 Jan, 2018

Powered by:     Yellow and Red

ರಾಮನಗರ : ಕರ್ನಾಟಕ ಹಾಲು ಮಹಾಮಂಡಳಿ (ಕೆ.ಎಂ.ಎಫ್) ವತಿಯಿಂದ ಕೆ.ಎಂ.ಎಫ್. ಅಧ್ಯಕ್ಷರ ತವರು ಜಿಲ್ಲೆಯ ರೈತರಿಗೆ ವಿತರಿಸಲಾಗಿರುವ ಖನಿಜ ಮಿಶ್ರಣದ ಪೊಟ್ಟಣ ಅಸಲಿಯೋ ನಕಲಿಯೋ ತಿಳಿಯುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾ ಉಪಾಧ್ಯಕ್ಷ ಕೃಷ್ಣಪ್ಪ ಆರೋಪಿಸಿದ್ದಾರೆ.
    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಸೂರು ಪ್ರಾಂತ್ಯದ ಏಳು ಜಿಲ್ಲೆಗಳ ಪ್ರದೇಶಕ್ಕನುಗುಣವಾಗಿ ತಯಾರು ಮಾಡಿರುವ ಒಂದು ಕೆ.ಜಿ. ಖನಿಜ ಮಿಶ್ರಣದ ಪಾಕೇಟ್‍ಗಳನ್ನು ಪಶುಗಳ ಉತ್ತಮ ಆರೋಗ್ಯ, ಗರ್ಭಧಾರಣೆ ಮತ್ತು ಹೆಚ್ಚು ಹಾಲು ಉತ್ಪಾದನೆಗಾಗಿ ಕೆ.ಎಂ.ಎಫ್ ಈ ಖನಿಜ ಮಿಶ್ರಣದ ಪಾಕೇಟ್ ತಯಾರು ಮಾಡಿದೆ. ಈ ಪಾಕೇಟ್ ಮತ್ತು ಪ್ಯಾಕಿಂಗ್ ಬಾಕ್ಸ್‍ಗಳ ಮೇಲೆ ಆಗಲಿ ಬ್ಯಾಚ್ ಸಂಖ್ಯೆ, ಪ್ಯಾಕ್ ಮಾಡಿದ ದಿನಾಂಕ ಮತ್ತು ಉಪಯೋಗಿಸುವ ದಿನಾಂಕದ ಅವಧಿ ನಮೂದಿಸಿಲ್ಲ ಇದರಿಂದಾಗಿ ಈ ಪ್ಯಾಕೇಟ್ ಅಸಲಿಯೋ ನಕಲಿಯೋ ತಿಳಿಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಕೆ.ಎಂ.ಎಫ್ ವತಿಯಿಂದ ವಿತರಿಸಲಾಗಿರುವ ಖನಿಜ ಮಿಶ್ರಣಗಳನ್ನು ವಾಪಸ್ ಪಡೆಯಬೇಕು, ಬ್ಯಾಚ್ ಸಂಖ್ಯೆ, ಪ್ಯಾಕ್ ಮಾಡಿದ ದಿನಾಂಕ ಮತ್ತು ಉಪಯೋಗಿಸುವ ದಿನಾಂಕದ ಅವಧಿ ಇರುವ ಪ್ಯಾಕೇಟ್‍ಗಳನ್ನು ವಿತರಿಸಬೇಕು, ರೈತರಿಂದ ಪಡೆದ ಹಣಕ್ಕೆ ಸಹಕಾರ ಸಂಘಗಳಲ್ಲಿ ಬಿಲ್ ನೀಡಬೇಕು ಇಲ್ಲದಿದ್ದರೆ ರೈತ ಸಂಘ ಬಮೂಲ್ ಶಿಬಿರ ಕಛೇರಿಯ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
    ಜಾಲಮಂಗಲ ಗ್ರಾಮದ ರೈತ ಶಿವನಂಜಯ್ಯ ಮಾತನಾಡಿ ಲಕ್ಷಾಂತರ ರೂಗಳನ್ನು ಖರ್ಚು ಮಾಡಿ ಹಸುಗಳನ್ನು ಖರೀದಿ ಮಾಡಿರುವ ರೈತರಿಗೆ ಇಂತಹ ಇಂದು-ಮುಂದು ಇಲ್ಲದ ಪ್ಯಾಕೇಟ್‍ಗಳನ್ನು ಸರಬರಾಜು ಮಾಡುತ್ತಿರುವ ಕೆ.ಎಂ.ಎಫ್. ರೈತರ ಬಾಳಲ್ಲಿ ಚೆಲ್ಲಾಟವಾಡುತ್ತಿದೆ. ಹಾಲು ಉತ್ಪಾದಕರ ಸಂಘಗಳ ಮೂಲಕ ವಿತರಣೆ ಮಾಡುತ್ತಿರುವ ಕೆ.ಎಂ.ಎಫ್ 40 ರೂ ಹಣ ಪಡೆದರೂ ಅದಕ್ಕೆ ಬಿಲ್ ನೀಡುತ್ತಿಲ್ಲ, ಅಮಾಯಕ ರೈತರಿಗೆ ಇಂತಹ ಪ್ಯಾಕೇಟ್ ವಿತರಿಸಿ ಮೋಸ ಮಾಡುತ್ತಿದೆ. ಈ ಬಗ್ಗೆ ಪಶು ವೈದ್ಯರನ್ನು ಕೇಳಿದರೆ ಖನಿಜ ಮಿಶ್ರಣ ಉಪಯೋಗ ಮಡಬಹುದು ಎಂದು ಹೇಳಿ ಜಾರಿಕೊಳ್ಳುತ್ತಾರೆ ಹಸುಗಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾದರೆ ಯಾರು ಜವ್ಬಾದಾರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಗ್ರಾಮೀಣ ಭಾಗದ ರೈತರು ಅವಿದ್ಯಾವಂತರಾಗಿದ್ದು, ತಿಳುವಳಿಕೆ ಇಲ್ಲದವರಾಗಿದ್ದಾರೆ ಇಂತಹ ರೈತರನ್ನು ಕೆ.ಎಂ.ಎಫ್. ವಂಚಿಸುವ ಕೆಲಸಕ್ಕೆ ಮುಂದಾಗಿದೆ ಈ ಕೂಡಲೇ 7 ಜಿಲ್ಲೆಗಳಲ್ಲಿ ವಿತರಿಸುವ ಬ್ಯಾಚ್ ಸಂಖ್ಯೆ, ಪ್ಯಾಕ್ ಮಾಡಿದ ದಿನಾಂಕ ಮತ್ತು ಉಪಯೋಗಿಸುವ ದಿನಾಂಕದ ಅವಧಿ ಇಲ್ಲದ ಪ್ಯಾಕೇಟ್ ಗಳನ್ನು ಹಿಂಪಡೆದು ಕಷ್ಟದಲ್ಲಿರುವ ರೈತರಿಗೆ ನೆರವಾಗಬೇಕೆಂದು ಒತ್ತಾಯಿಸಿದ್ದಾರೆ.
    ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಸಂಚಾಲಕ ನಂಜಪ್ಪ, ಕಾನೂನು ಸಲಹೆಗಾರ ಕೆಂಪೇಗೌಡ, ರೈತ ಮುಖಂಡ ಶಿವಶಂಕರ್ ಮತ್ತಿತ್ತರರು ಹಾಜರಿದ್ದರು. 
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑