ರೇಷ್ಮೆ ಬೆಳೆಗಾರ ಕೆಂಪಯ್ಯ ಆತ್ಮಹತ್ಯೆ
ರಾಮನಗರ : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತನ್ನ ಕರ್ಮಭೂಮಿ ರಾಮನಗರಕ್ಕೆ ಭೇಟಿ ನೀಡಿದ ಮರುದಿನವೇ ರೇಷ್ಮೆ ಬೆಳೆಗಾರನೊಬ್ಬ ಸಾಲಬಾಧೆಯಿಂದಾಗಿ ಕ್ರಿಮಿನಾಶಕ ಸೇವಿಸಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ.
ಮುಖ್ಯಮಂತ್ರಿ ಭೇಟಿ ನಂತರ ರೇಷ್ಮೆ ಬೆಳೆಗಾರರ ಸಮಸ್ಯೆಗೆ ಪರಿಹಾರ ದೊರೆಯುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದ ರಾಮನಗರ ತಾಲೂಕಿನ ಕಟಮಾನದೊಡ್ಡಿಯ ಕೆಂಪಯ್ಯ(38) ಆತ್ಮಹತ್ಯೆ ಮಾಡಿಕೊಂಡವ. ವಿವಿಧ ಸ್ತ್ರೀಶಕ್ತಿ ಸಂಘಗಳು ಮತ್ತು ಬ್ಯಾಂಕ್ಗಳಲ್ಲಿ 5 ಲಕ್ಷ ರೂಪಾಯಿಗೂ ಹೆಚ್ಚು ಸಾಲ ಮಾಡಿಕೊಂಡಿದ್ದ ಕೆಂಪಯ್ಯ ಮಂಗಳವಾರ ಮುಂಜಾನೆ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಸಾವನ್ನಪ್ಪಿದ್ದಾರೆ.
ಸಿಎಂ ಮೇಲೆ ಭರವಸೆ: 2 ಎಕರೆಯಲ್ಲಿ ಹಿಪ್ಪು ನೇರಳೆ ಬೆಳೆಯುತ್ತಿದ್ದ ಕೆಂಪಯ್ಯ, ಕೆಲ ತಿಂಗಳಿಂದ ರೇಷ್ಮೆಗೂಡು ಬೆಲೆ ಕುಸಿತದಿಂದ ಕಂಗಾಲಾಗಿದ್ದರು. ಕೃಷಿ ಮತ್ತು ಮನೆ ನಿರ್ವಹಣೆಗಾಗಿ ಸಾಲ ಮಾಡಿಕೊಂಡಿದ್ದರು. ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಿದ್ದಂತೆ ರೇಷ್ಮೆಗೂಡು ಬೆಲೆ ಕುಸಿತಕ್ಕೆ ಪರಿಹಾರ ದೊರೆಯಲಿದೆ, ಉತ್ತಮ ಬೆಲೆಯೂ ಸಿಗಲಿದೆ ಎನ್ನುವ ನಂಬಿಕೆ ಇರಿಸಿಕೊಂಡಿದ್ದರು. ಸೋಮವಾರ ಎಚ್.ಡಿ.ಕುಮಾರಸ್ವಾಮಿ ರಾಮನಗರಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಜನಸ್ಪಂದನ ಸಭೆಯಲ್ಲಿಯೂ ಪಾಲ್ಗೊಂಡಿದ್ದ ಕೆಂಪಯ್ಯ, ಸಭೆಗೆ ಆಗಮಿಸುವ ಮುನ್ನ ರೇಷ್ಮೆ ಗೂಡಿಗೆ ಬೆಂಬಲ ಬೆಲೆಯನ್ನು ಮುಖ್ಯಮಂತ್ರಿ ಘೊಷಿಸುತ್ತಾರೆ ಎಂದು ಪತ್ನಿ ಧನಲಕ್ಷ್ಮೀಗೆ ಹೇಳಿದ್ದರು.
ಸೋಮವಾರದ ಸಭೆಯಲ್ಲಿ ರೇಷ್ಮೆಗೂಡಿಗೆ ಪ್ರೋತ್ಸಾಹ ಧನ ಮತ್ತು ಬೆಂಬಲ ಬೆಲೆ ನೀಡುವ ಸಂಬಂಧ ಸ್ಪಷ್ಟ ತೀರ್ಮಾನ ಹೊರ ಬಂದಿರಲಿಲ್ಲ. ಅಲ್ಲದೆ ಮಂಗಳವಾರ ಸಾಲದ ಮೊತ್ತವಾಗಿ 10 ಸಾವಿರ ರೂಪಾಯಿ ಪಾವತಿಸಲೇ ಬೇಕಿದ್ದರಿಂದ, ಹಣ ಹೊಂದಿಸಲು ಸಾಧ್ಯವಾಗಿರಲಿಲ್ಲ. ಕೆಂಪಯ್ಯಗೆ ಇಬ್ಬರು ಮಕ್ಕಳಿದ್ದು, ಪುತ್ರ 8ನೇ ತರಗತಿ ಹಾಗೂ ಪುತ್ರಿ ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದಾಳೆ.
ಜಿಲ್ಲಾಧಿಕಾರಿ ಭೇಟಿ: ಮರಣೋತ್ತರ ಪರೀಕ್ಷೆಗಾಗಿ ರಾಮನಗರ ಸರ್ಕಾರಿ ಆಸ್ಪತ್ರೆಗೆ ಕೆಂಪಯ್ಯ ಮೃತದೇಹವನ್ನು ತರಲಾಗಿತ್ತು. ಈ ವೇಳೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಉಪವಿಭಾಗಾಧಿಕಾರಿ ಡಾ.ಎಂ.ಎನ್.ರಾಜೇಂದ್ರ ಪ್ರಸಾದ್, ತಹಸೀಲ್ದಾರ್ ಮಾರುತಿ ಪ್ರಸನ್ನ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಸಂಬಂಧಿಕರೊಂದಿಗೆ ಮಾತುಕತೆ ನಡೆಸಿದರು.
ಮುಂಜಾನೆ ಆತ್ಮಹತ್ಯೆ: ಮಂಗಳವಾರ ಮುಂಜಾನೆ 4 ಗಂಟೆ ಸುಮಾರಿಗೆ ಹಸುಗಳನ್ನು ಹೊರಗೆ ಕಟ್ಟಿ ಮೇವು ಹಾಕಿದ ಕೆಂಪಯ್ಯ, ನಂತರ ಮನೆಯಲ್ಲಿಯೇ ಇದ್ದ ಸುಮಾರು 100 ಮಿ.ಲೀ. ಕ್ರಿಮಿನಾಶಕ ಕುಡಿದಿದ್ದರು. ಹೊಟ್ಟೆಯಲ್ಲಿ ಉರಿ ಹೆಚ್ಚಾಗಿದ್ದರಿಂದ ತಡೆಯಲು ಸಾಧ್ಯವಾಗದೆ ನೇಣು ಬಿಗಿದು ಕೊಂಡಿದ್ದಾರೆ. ಪತಿಯನ್ನು ಉಳಿಸಿಕೊಳ್ಳಲು ಪತ್ನಿ ಧನಲಕ್ಷ್ಮೀ ಪ್ರಯತ್ನಿಸಿದರಾದರೂ ಕೆಂಪಯ್ಯ ಅಷ್ಟರಲ್ಲೇ ಮರಣ ಹೊಂದಿದ್ದರು.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು