ಪ್ರಥಮ ಬಾರಿಗೆ ಚನ್ನಪಟ್ಟಣದ ಸಿ ಐ ಎಸ್ ಸಿ ಕ್ಲಬ್ ನಲ್ಲಿ ರಾಜ್ಯ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಪಂದ್ಯಾವಳಿ
ಚನ್ನಪಟ್ಟಣ ಇನ್ಸ್ಟಿಟ್ಯೂಟ್ ಆಫ್ ಸ್ಪೋರ್ಟ್ಸ್ ಅಂಡ್ ಕಲ್ಚರ್ (ರಿ) ಕ್ಲಬ್ ನಲ್ಲಿ ನಿರ್ಮಾಣವಾಗಿರುವ ವುಡನ್ ಕೋಟ್೯ ನಲ್ಲಿ ರಾಮನಗರ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ (ರಿ) ಮತ್ತು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ದಿನಾಂಕ ೨೬ ರಿಂದ ೨೮ ರವರೆಗೆ ಪ್ರಪ್ರಥಮ ಬಾರಿಗೆ ಯುನೆಕ್ಸ್ ಸನ್ ರೈಸ್ ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಪಂದ್ಯಾವಳಿ ನಡೆಯಲಿದೆ ಎಂದು ಸಿ ಐ ಎಸ್ ಸಿ ಅಧ್ಯಕ್ಷ ಟಿ ಕೆ ಯೋಗೇಶ್ ರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ನಮ್ಮ ಕ್ಲಬ್ ಹದಿನೆಂಟು ವರ್ಷಗಳಿಂದ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು ಇದೇ ಪ್ರಥಮ ಬಾರಿಗೆ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಆಯೋಜಿಸಲು ಅನುಮತಿ ಸಿಕ್ಕಿದ್ದು ನಮಗೆಲ್ಲ ಸಂತಸವಾಗಿದೆ.
ಒಟ್ಟು ಏಳು ಪಂದ್ಯಗಳು ನಡೆಯಲಿದ್ದು ಸರಿಸುಮಾರು ಮೂರುನೂರಾ ಐವತ್ತು ತಂಡಗಳು ಭಾಗವಹಿಸುವ ಸಾಧ್ಯತೆ ಇದೆ. ಅಷ್ಟು ಜನರಿಗೆ ಎಲ್ಲಾ ರೀತಿಯ ಅನುಕೂಲ ಮತ್ತು ಕೋಟ್೯ ಕಡಿಮೆ ಇರುವುದರಿಂದ ದಿನಾಂಕ ೨೪ ಮತ್ತು ೨೫ ರಲ್ಲಿ ಬೆಂಗಳೂರಿನಲ್ಲಿ ನಡೆಸಿ ೨೬/೨೭ ಮತ್ತು ೨೮ ನೇ ತಾರೀಖಿನಂದು ಚನ್ನಪಟ್ಟಣದಲ್ಲಿ ಆಯೋಜಿಸಲು ತೀರ್ಮಾನವಾಗಿದೆ. ಈ ಎಲ್ಲಾ ಖರ್ಚುಗಳನ್ನು ನಮ್ಮ ಕ್ಲಬ್ ವತಿಯಿಂದ ಭರಿಸಲಾಗುವುದು.
ನಮ್ಮ ಕ್ಲಬ್ ಸದಸ್ಯರು ಮತ್ತು ಕೆಲವು ಶಾಲಾ ಮಕ್ಕಳು ಸೇರಿದಂತೆ ಚನ್ನಪಟ್ಟಣದಲ್ಲಿ ಒಟ್ಟು ಹದಿನಾಲ್ಕು ಮಂದಿ ಭಾಗವಹಿಸುತ್ತಿದ್ದಾರೆ, ಇಲ್ಲಿ ಯಾರೇ ಗೆದ್ದರೂ ರಾಷ್ಟ್ರ ಮಟ್ಟದ ಬ್ಯಾಡ್ಮಿಂಟನ್ ಗೆ ಆಯ್ಕೆಯಾಗುತ್ತಾರೆ ಎಂದು ಸಿ ಎಸ್ ಐ ಸಿ ಕಾರ್ಯದರ್ಶಿ ಹಾಗೂ ಬ್ಯಾಡ್ಮಿಂಟನ್ ಗೆ ಸೀನಿಯರ್ ಆಟಕ್ಕೆ ಆಯ್ಕೆಯಾಗಿರುವ ಸಿ ಎಸ್ ಮಹೇಶ್ ಹರ್ಷ ವ್ಯಕ್ತಪಡಿಸಿದರು.
ಕ್ಲಬ್ ನಡೆದು ಬಂದ ಹಾದಿಯನ್ನು ವಿವರಿಸಿ ಮಾತನಾಡಿದ ಉಪಾಧ್ಯಕ್ಷ ಹೆಚ್ ಮಂಜುನಾಥ್ ರವರು ಈ ಬಾರಿ ಗೆಲ್ಲುವ ಆಟಗಾರರಿಗೆ ಹಾಗೂ ಭಾಹವಹಿಸಿದ ತಂಡಗಳಿಗೂ ಚನ್ನಪಟ್ಟಣದಲ್ಲಿ ತಯಾರಾಗುವ ಕಲಾಕೃತಿಗಳನ್ನು ಕೊಡಲು ತೀರ್ಮಾನಿಸಲಾಗಿದೆ, ಇದಕ್ಕೆಂದೇ ಸುಮಾರು ಒಂದೂವರೆ ಲಕ್ಷ ರೂ ಗಳನ್ನು ವ್ಯಯಿಸುತ್ತೇವೆ ಎಂದರು.
ಕಾರ್ಯದರ್ಶಿ ಸಿ ಅಜಯ್ ಕುಮಾರ್ ಮಾತನಾಡಿ ಕೊಡಗಿನಲ್ಲಿ ಭೀಕರ ಮಳೆಗೆ ತುತ್ತಾಗಿ ಕಂಗಾಲಾಗಿರುವವರಿಗೆ ನೆರವಾಗಲು ನಮ್ಮ ಸಂಸ್ಥೆಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಎರಡು ಲಕ್ಷ ರೂ ಗಳನ್ನು ದೇಣಿಗೆಯಾಗಿ ನೀಡುತಿದ್ದೇವೆಂದು ತಿಳಿಸಿದರು.
೨೪ ನೇ ತಾರೀಖಿನಂದು ಬೆಂಗಳೂರಿನಲ್ಲಿ ನಡೆಯಲಿರುವ ಬ್ಯಾಡ್ಮಿಂಟನ್ ಉದ್ಘಾಟನೆಯನ್ನು ಕೆ ಬಿ ಎ ಅಧ್ಯಕ್ಷರಾದ ಎಸ್ ಚಕ್ರಪಾಣಿ, ಚನ್ನಪಟ್ಟಣ ಆರ್ ಡಿ ಬಿ ಎ ಅಧ್ಯಕ್ಷರಾದ ಜಿ ಕೆ ಬಾಲಾಜಿ ಮತ್ತು ಘನ ಉಪಸ್ಥಿತಿ ಪಂದ್ಯಗಳ ಚಾಲನೆಯನ್ನು ಕೆ ಬಿ ಎ ಕಾರ್ಯದರ್ಶಿ ಪಿ ರಾಜೇಶ್ ನೆರವೇರಿಸಲಿದ್ದಾರೆ.
೨೮ ನೇ ತಾರೀಖಿನಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ ಯವರು, ಜಲಸಂಪನ್ಮೂಲ ಸಚಿವರಾದ ಡಿ ಕೆ ಶಿವಕುಮಾರ್, ಸಂಸದರಾದ ಡಿ ಕೆ ಸುರೇಶ್ ರವರು ಸಿ ಎಸ್ ಐ ಸಿ ಪದಾಧಿಕಾರಿಗಳು, ಸದಸ್ಯರು ಮತ್ತು ಪಂದ್ಯವನ್ನು ಪ್ರೋತ್ಸಾಹ ನೀಡಿರುವ ಗಣ್ಯರು ಭಾಗವಹಿಸುವರು.
ಗೋ ರಾ ಶ್ರೀನಿವಾಸ...
ಮೊ: 9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು