ತಾಲ್ಲೂಕು ಕಾನೂನು ಸುವ್ಯವಸ್ಥೆ ಬಗ್ಗೆ ಪತ್ರಕರ್ತರೊಂದಿಗೆ ಡಿವೈಎಸ್ಪಿ ಸಂವಾದ
ಹೊಸದಾಗಿ ನೇಮಕವಾಗಿರುವ ಡಿವೈಎಸ್ಪಿ ಮಲ್ಲೇಶ್ ರವರು ತಾಲ್ಲೂಕಿನ ಕಾನೂನು ಸುವ್ಯವಸ್ಥೆಯ ಬಗ್ಗೆ ಸ್ಥಳೀಯ ಪರ್ತಕರ್ತರ ಸಲಹೆ ಸೂಚನೆಗಳನ್ನು ಆಲಿಸಿದರು.
ನಗರ ಠಾಣೆಯ ಅವರ ಕಛೇರಿಯಲ್ಲಿ ಅವರು ಪತ್ರಕರ್ತರನ್ನು ಆಹ್ವಾನಿಸಿ ಮಾತನಾಡಿ ನಾನು ಪೋಲಿಸ್ ಇಲಾಖೆಯಲ್ಲಿ ಹಲವು ಹುದ್ದೆಗಳನ್ನು ನಿಭಾಯಿಸಿ ಈಗ ಚನ್ನಪಟ್ಟಣಕ್ಕೆ ಡಿವೈಎಸ್ಪಿ ಯಾಗಿ ಬಡ್ತಿ ಹೊಂದಿ ಬಂದಿದ್ದೇನೆ, ಇಲ್ಲಿಯ ಕಾನೂನು ಮೂಲಕ ಏನೇನು ಅಭಿವೃದ್ಧಿ ಆಗಬೇಕೋ ತಮ್ಮ ಹಾಗೂ ಸಾರ್ವಜನಿಕ ಸಲಹೆಯ ಮೇರೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.
ಪತ್ರಕರ್ತರು ಒಂದೊಂದೇ ಸಮಸ್ಯೆಗಳನ್ನು ಎಳೆ ಎಳೆಯಾಗಿ ಬಿಡಿಸಿಡುತ್ತಾ ಹೋದಂತೆ ಎಲ್ಲಾ ಸಮಸ್ಯೆಗಳನ್ನು ಟಿಪ್ಪಣಿ ಮಾಡಿಕೊಳ್ಳುವ ಮೂಲಕ ಡಿವೈಎಸ್ಪಿ ಮಲ್ಲೇಶ್ ರವರು ತಮ್ಮ ಹುದ್ದೆಗಳಲ್ಲಿ ನಡೆದುಬಂದ ಹಲವು ಮಜಲುಗಳನ್ನು ಪತ್ರಕರ್ತರ ಮುಂದೆ ತೆರೆದಿಟ್ಟರು.
ಹಲವಾರು ಹಿರಿಯ ಪತ್ರಕರ್ತರು ತಾಲ್ಲೂಕಿನಲ್ಲಿ ನಡೆಯುವುತ್ತಿರುವ ಮರಳುಗಾರಿಕೆ, ಸಂಚಾರದಟ್ಟಣೆ, ಬೈಕ್ ವ್ಹೀಲಿಂಗ್, ಆಪೇ ಆಟೋಗಳ ಉಪಟಳ, ರಸ್ತೆಬದಿಯ ಅಂಗಡಿಗಳು, ಎಲ್ಲೆಂದರಲ್ಲಿ ತಲೆ ಎತ್ತಿರುವ ಮಾಂಸದಂಗಡಿಗಳು, ಬಸ್ ನಿಲ್ದಾಣದಲ್ಲಿ ದಿನನಿತ್ಯ ನಡೆಯುವ ಜೇಬುಗಳ್ಳತನ, ಬ್ಯಾನರ್, ಮಹಿಳೆಯರ ಮೇಲಿನ ದೌರ್ಜನ್ಯ, ಕಳ್ಳತನ ಇಂತಹ ಅನೇಕಾನೇಕ ಸಮಸ್ಯೆಗಳ ಬಗ್ಗೆ ಪತ್ರಕರ್ತರು ಡಿವೈಎಸ್ಪಿ ರವರಿಗೆ ಮನದಟ್ಟು ಮಾಡಿಕೊಟ್ಟರು.
ಬಹಳ ವಿಶೇಷವಾಗಿ ಚನ್ನಪಟ್ಟಣದಲ್ಲಿ ಗಾಂಜಾ ಅಫೀಮಿನ ಜಾಲ ಹರಡಿದ್ದು ಅದನ್ನು ಆದಷ್ಟು ಬೇಗ ಮಟ್ಟ ಹಾಕುವ ಭರವಸೆಯನ್ನು ವ್ಯಕ್ತಪಡಿಸಿದರು
ಬಹಳ ಮುಖ್ಯವಾಗಿ ಬಹುತೇಕ ಎಲ್ಲಾ ಪೋಲೀಸ್ ಸಿಬ್ಬಂದಿಗಳು ಸಾರ್ವಜನಿಕರ ಬಗ್ಗೆ ನಡೆದುಕೊಳ್ಳುವಂತೆ ಸೂಚಿಸಬೇಕು ಎಂದು ಒತ್ತಾಯಿಸಲಾಯಿತು.
ಸಭೆಯಲ್ಲಿ ನಂದಕುಮಾರ್, ಕರೀಂ, ಮೆಂಗಳ್ಳಿ ಮಹೇಶ್, ಗೋ ರಾ ಶ್ರೀನಿವಾಸ, ಸುರೇಶ, ಲಕ್ಷ್ಮೀಪತಿ, ಮಂಜು, ಶಂಕರ್, ಎಲೆಕೇರಿ ಮಂಜು ವೆಂಕಟೇಶ್, ಕುಮಾರ್, ಕೃಷ್ಣ ಮೂರ್ತಿ, ಇನ್ನೂ ಮುಂತಾದವರು ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ; 9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು