Tel: 7676775624 | Mail: info@yellowandred.in

Language: EN KAN

    Follow us :


ಜೀವನದಲ್ಲಿ ಶ್ರಮದಾನ ಮಾಡಿದರೇ ಸುಖದ ಜೀವನ ನಿವೃತ್ತ ಯೋಧ ತಿಮ್ಮೇಗೌಡ

Posted date: 10 Sep, 2018

Powered by:     Yellow and Red

ಜೀವನದಲ್ಲಿ ಶ್ರಮದಾನ ಮಾಡಿದರೇ ಸುಖದ ಜೀವನ ನಿವೃತ್ತ ಯೋಧ ತಿಮ್ಮೇಗೌಡ

 

ಸುಖಜೀವನ ನಮ್ಮದಾಗಬೇಕೆಂದರೆ ವಿದ್ಯಾರ್ಥಿ ಇದ್ದಾಗ ಓದು, ಯುವಕರಿದ್ದಾಗಿ ದುಡಿಮೆ ಇವೆಲ್ಲದರ ನಡುವೆ ಸಮಾಜಕ್ಕಾಗಿ ಕೆಲಸಮಯ ಮೀಸಲಿಟ್ಟರೆ ವಯಸ್ಸಾದ ನಂತರ ಸುಖ ಜೀವನ ನಡೆಸಬಹುದು ಎಂದು ಭಾರತೀಯ ನಿವೃತ್ತ ಯೋಧ ಅಂಕನಹಳ್ಳಿ ತಿಮ್ಮೇಗೌಡ ಅಭಿಪ್ರಾಯಪಟ್ಟರು.

ಅವರು ನಗರದ ಬಾಲು ಪಬ್ಲಿಕ್ ಶಾಲೆಯ ಸರ್ ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಕರ್ನಾಟಕ ದಂಡಿನ ಮಾರಮ್ಮ ರೈತ ಸಂಘ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಕಜವೇ ಅಧ್ಯಕ್ಷ ರಮೇಶ್ ಗೌಡ ಮಾತನಾಡಿ ಇಂದು ವ್ಯವಸ್ಥೆ ಹದಗೆಟ್ಟಿದೆ, ರಾಜಕೀಯ, ಪೋಲಿಸ್ ಇಲಾಖೆ, ಸಾರ್ವಜನಿಕ ಇಲಾಖೆಗಳಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ ನಡೆಯುತ್ತಿದೆ, ರೈತರ ಗೋಳು ಹೇಳಲಾಗದಷ್ಟು ಶೋಚನೀಯವಾಗಿದೆ, ರಿಯಲ್ ಎಸ್ಟೇಟ್ ದಂಧೆ ರೈತರ ಪಾಲಿಗೆ ಮಾರಕವಾಗಿದೆ, ಇವೆಲ್ಲವನ್ನು ಪ್ರಶ್ನಿಸಲು, ಪ್ರತಿಭಟಿಸಲು ಹಾಗೂ ಹಿತರಕ್ಷಣೆಗಾಗಿ ಸಂಘಟನೆಗಳು ಬೇಕಾಗಿವೆ ಈ ನಿಟ್ಟಿನಲ್ಲಿ ಸಂಘವು ಯಶಸ್ಸು ಕಾಣಲಿ ಎಂದು ಶುಭಕೋರಿದರು.

ಖಾಸಗಿ ಅನುದಾನರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷ ವೆಂಕಟಸುಬ್ಬಯ್ಯಚೆಟ್ಟಿ ಮಾತನಾಡಿ ನಮ್ಮಲೆಲ್ಲರೂ ತಮ್ಮ ಮಕ್ಕಳು ಡಾಕ್ಟರ್ ಇಂಜಿನಿಯರ್ ಆಗಬೇಕೆಂದು ಆಸೆ ಪಡುತ್ತಾರೆ, ಜಮೀನ್ದಾರ ಸಹಿತ ನನ್ನ ಮಗ ರೈತನಾಗಲಿ ಎಂದು ಆಸೆ ಪಡುವುದಿಲ್ಲ, ಇನ್ನು ಮುಂದೆ ನಮ್ಮ ರೈತರು ತಮ್ಮ ಮಕ್ಕಳನ್ನು ರೈತರನ್ನಾಗಿ ಮಾಡಲು ಉತ್ತೇಜನ ನೀಡಿದರೆ ಒಳಿತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷ ಕೃಷ್ಣೇಗೌಡ ಮಾತನಾಡಿ ದೇಶದ ಗಡಿ ಕಾಯಲು ಸೈನಿಕ ಬೇಕು, ಜೀವಸಂಕುಲವನ್ನು ಸಾಕಲು ರೈತ ಬೇಕು, ಆದರೆ ಇಂದು ರೈತನಿಗೆ ಸಂಕಷ್ಟ ಎದುರಾಗಿದೆ ಅವನ ಬೆಂಬಲಕ್ಕೆ ಸರ್ಕಾರ ಎಂದೂ ನಿಲ್ಲುತ್ತಿಲ್ಲ, ರೈತನಿಗೆ ಸಾಲ ಮನ್ನಾ ಬೇಕಿಲ್ಲ, ಅವನಿಗೆ ವೈಜ್ಞಾನಿಕ ಬೆಲೆ ನೀಡಿದರೆ ಸಾಕು ಎಂದರು.

ನಮ್ಮ ಸಂಘಟನೆ ರೈತರಿಗೆ ಸಾರ್ವಜನಿಕರಿಗೆ ಮುಕ್ತವಾಗಿದ್ದು ನ್ಯಾಯಬದ್ದವಾಗಿ ದೊರಕಬೇಕಾದ ಸೌಲಭ್ಯಗಳನ್ನು ಒದಗಿಸಲು ಬದ್ದವಾಗಿದೆ ಎಂದರು.

ಇದೇ ವೇಳೆ ಕೆಲವು ರೈತರು ಹಸಿರು ಟವೆಲ್ ಧರಿಸುವ ಮೂಲಕ ಸಂಘಟನೆಗೆ ಸೇರಿದರು.

ವೇದಿಕೆಯಲ್ಲಿ ಹಿರಿಯ ವಕೀಲ ಟಿ ಎಂ ಲಕ್ಷ್ಮಣ್ ಸೇರಿದಂತೆ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

"ಇತ್ತೀಚೆಗೆ ರೈತ ಸಂಘವು ಅನೇಕ ಹೋಳುಗಳಾಗಿ ರಾಜ್ಯದಲ್ಲೇ ಆರು ಮತ್ತೊಂದು ಬಣಗಳಿದ್ದು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಹತ್ತಾರು ಬಣಗಳಾಗಿ ವಿಂಗಡಣೆಯಾಗಿವೆ, ಈ ಸಂಘವು ಹತ್ತರಲ್ಲಿ ಮತ್ತೊಂದಾಗದೆ ಸ್ವಹಿತಕ್ಕೆ ಬಲಿಕೊಡದೆ ರೈತರಿಗೆ ಗಟ್ಟಿದನಿಯಾಗಲಿ ಎಂದು ಪತ್ರಿಕೆ ಆಶಿಸುತ್ತದೆ."

ಗೋ ರಾ ಶ್ರೀನಿವಾಸ...

ಮೊ; 9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑