ಬೆವರಲ್ಲಿ ತೊಯ್ದು ಹೋದ ನೀರಾವರಿ ಸಭೆ
ತಾಲ್ಲೂಕು ಕೆರೆಗಳಿಗೆ ನೀರು ತುಂಬಿಸದಿರಲು ಏನು ಕಾರಣ ಎಂಬುದರ ಬಗ್ಗೆ ಇಂದು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಕರೆದಿದ್ದ ಜೆ ಡಿ ಎಸ್ ಮತ್ತು ತಾಲ್ಲೂಕಿನ ಹಿರಿಯ ಮುಖಂಡರ ಸಭೆಯನ್ನು ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿ ಕೃಷ್ಣಪ್ಪ ಮತ್ತು ಕಾವೇರಿ ನೀರಾವರಿ ಇಂಜಿನಿಯರ್ ವೆಂಕಟೇಗೌಡರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ರು.
ಜೆ ಡಿ ಎಸ್ ನ ಬಹುತೇಕ ಎಲ್ಲಾ ನಾಯಕರು ಇಂಜಿನಿಯರ್ ವೆಂಕಟೇಗೌಡರ ಮೇಲೆ ಹಲವಾರು ಕಾರಣಗಳನ್ನು ನೀಡುವುದರ ಮೂಲಕ ಮಾತಿನ ವಾಗ್ಬಾಣಗಳನ್ನು ಹರಿಯಬಿಡುವುದರ ಮೂಲಕ ವೆಂಕಟೇಗೌಡರನ್ನು ನಿರುತ್ತರಾಗುವಂತೆ ಮಾಡಿದರು.
ಬಹುತೇಕ ಜೆ ಡಿ ಎಸ್ ನ ಮುಖಂಡರೆಲ್ಲರೂ ಹಿಂದಿನ ಶಾಸಕರಿದ್ದಾಗ ಇದೇ ವೆಂಕಟೇಗೌಡರು ಎಲ್ಲಾ ಕೆರೆಗಳಿಗೂ ನೀರು ತುಂಬಿಸುತಿದ್ದು, ಈಗ ಕೇಳಿದರೆ ಸಬೂಬು ಹೇಳುತಿದ್ದಾರೆ. ಇದ್ದರೆ ಇರಿ, ಇಲ್ಲಾಂದರೆ ಬೇರೆ ಕಡೆ ಹೋಗಲಿ ಎಂದು ಕೆಲವು ನಾಯಕರು ಎದ್ದು ನಿಂತು ರೋಷವಾಗಿ ನುಡಿದರು.
ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ ಮಾತನಾಡಿ ಈ ಸಮಸ್ಯೆಗಳು ಶೀಘ್ರವಾಗಿ ಬಗೆಹರಿಯಬೇಕೆಂದರೆ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳುವಂತೆ ಸಲಹೆ ನೀಡಿದರು.
ಈಗ ಒಂದೂವರೆ ಟಿಎಂಸಿ ನೀರು ಸರಬರಾಜಿಗೆ ಅನುಮತಿ ಇದ್ದು, ಕೆರೆಗಳು ಹೆಚ್ಚಾಗಿರುವುದರಿಂದ ಎರಡೂವರೆ ಟಿಎಂಸಿ ನೀರನ್ನು ಬಳಸಿಕೊಳ್ಳಲು ಅನುಮತಿ ಪಡೆಯಿರಿ.
ದಂಡಾಧಿಕಾರಿ, ಪೋಲಿಸ್ ಅಧಿಕಾರಿ, ವಿದ್ಯುತ್ ಸಂಪರ್ಕ ಅಧಿಕಾರಿ ಮತ್ತು ಪಂಚಾಯ್ತಿ ಅಧಿಕಾರಿಗಳನ್ನು ಸೇರಿಸಿಕೊಂಡು ಸಮಿತಿ ಮಾಡಿ.
ಸತ್ತೇಗಾಲ ಮತ್ತು ಮೇಕೇದಾಟು ಸೇರಿದಂತೆ ಇನ್ನಿತರ ಯೋಜನೆಗಳ ಬಗ್ಗೆ ಗಮನಹರಿಸಿ.
೨೦೧೪ ರಲ್ಲಿ ಸಿ ಟು (C2 point) ಗೆ ಟೆಂಡರ್ ಕರೆದಿದ್ದು ಇನ್ನೂ ಆಗದಿರಲು ಕಾರಣ ಏನು ಅದಕ್ಕೆ ಪರಿಹಾರ ಹುಡುಕಿ ಶೀಘ್ರವಾಗಿ ಜಾರಿಗೊಳಿಸಲಿ.
ಮೋಟಾರು ಮತ್ತು ಪಂಪ್ ಗೆ ಸಂಬಂಧಿಸಿದಂತೆ ಯಾರು ಅಕ್ರಮವಾಗಿ ನಡೆದುಕೊಂಡರೆ ಯಾರೇ ಆಗಲಿ ಕಾನೂನು ಕ್ರಮ ಕೈಗೊಳ್ಳಿ.
ಪ್ರತಿಯೊಬ್ಬರಿಗೂ ನೀರಿಗೆ ಸಂಬಂಧಿಸಿದಂತೆ ಒಂದು ದೂರವಾಣಿ ಸಂಖ್ಯೆಯನ್ನು ಶಾಶ್ವತವಾಗಿ ನೀಡಬೇಕು ಎಂದು ಸಿ ಪುಟ್ಟಸ್ವಾಮಿ ಸಲಹೆ ನೀಡಿದರು.
ಇದನ್ನೆಲ್ಲಾ ಕೇಳಿಸಿಕೊಂಡ ನಂತರ ಮಾತನಾಡಿದ ವೆಂಕಟೇಗೌಡರು ತಾಂತ್ರಿಕ ಕಾರಣಗಳು ಅನೇಕ ಇವೆ, ಆದರೆ ಇದನ್ನು ಅರ್ಥಮಾಡಿಕೊಳ್ಳುವವರು ಕಡಿಮೆ, ಏನಾದರೂ ಆಗಲಿ ಎಲ್ಲವನ್ನೂ ಸರಿಪಡಿಸಿ ನವೆಂಬರ್ ಹದಿನೈದರೊಳಗಾಗಿ ಎಲ್ಲಾ ಕೆರೆಗಳನ್ನು ತುಂಬಿಸಲಾಗುವುದು ಎಂದು ಭರವಸೆ ನೀಡಿದರು.
ವಿಶೇಷ ಅಧಿಕಾರಿ ಕೃಷ್ಣಪ್ಪ ಮಾತನಾಡಿ ರೈತ ಮುಖಂಡ ಸಿ ಪುಟ್ಟಸ್ವಾಮಿ ಯವರ ಸಲಹೆಗಳು ಸೂಕ್ತವಾಗಿದ್ದು ಅದನ್ನು ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮಕೈಗೊಳ್ಖತ್ತೇನೆ, ಹಾಗೆ ಜೆಡಿಎಸ್ ಮುಖಂಡರಲ್ಲಿ ಅನೇಕ ವಿಷಯಗಳನ್ನು ಅರಿಯಲು ಆಸೆ ಪಟ್ಟಿದ್ದೆ, ಆದರೆ ಸಂಪೂರ್ಣ ವಿಷಯಗಳನ್ನಾಗಲಿ ನೀಲಿ ನಕ್ಷೆಯನ್ನಾಗಲಿ ಕೊಡುತ್ತಾರೆಂದು ನಿರೀಕ್ಷಿಸಿದ್ದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮುಂದಿನ ಸಭೆಯಲ್ಲಿ ಜೆಡಿಎಸ್ ಮುಖಂಡರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಂದು ಒಗ್ಗೂಡಿ ಅನೇಕ ಸಮಸ್ಯೆಗಳ ಬಗ್ಗೆ ಸೂಕ್ತ ದಾಖಲೆ ನೀಡಿ ಜನರ ಸಮಸ್ಯೆಗಳನ್ನು ಪರಿಹರಿಸಲು ಕೈಜೋಡಿಸಿ ಎಂದು ಕರೆ ನೀಡಿದರು.
ಗೋ ರಾ ಶ್ರೀನಿವಾಸ...
ಮೊ; 9845856139
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು