Tel: 7676775624 | Mail: info@yellowandred.in

Language: EN KAN

    Follow us :


ಪ್ರೀತಿಸಿ ಮದುವೆಯಾಗಿ ಗರ್ಭಿಣಿ ಮಾಡಿ ತಲೆಮರೆಸಿಗೊಂಡ ದ್ರೋಹಿ

Posted date: 22 Sep, 2018

Powered by:     Yellow and Red

ಪ್ರೀತಿಸಿ ಮದುವೆಯಾಗಿ ಗರ್ಭಿಣಿ ಮಾಡಿ ತಲೆಮರೆಸಿಗೊಂಡ ದ್ರೋಹಿ

ಒಂದೇ ಕಡೆ ಕೆಲಸ ಮಾಡುತಿದ್ದಾಗ ಒಬ್ಬರನ್ನೊಬ್ಬರು ಪ್ರೀತಿಸಿ ಮದುವೆಯಾದ ಭೂಪನೊಬ್ಬ ತನ್ನ ತಾಯಿ ಬೇರೆ ಜಾತಿಯ ಹುಡುಗಿಯನ್ನು ಮದುವೆಯಾಗಿರುವುದಕ್ಕೆ ಆಕ್ಷೇಪಣೆ ವ್ಯಕಪಡಿಸಿದಳು ಎಂಬ ನೆಪವೊಡ್ಡಿ ಹೆಂಡತಿಯ ಎಟಿಎಂ ಕಾಡ್೯ ಪಡೆದು ಪರಾರಿಯಾಗಿರುವ ಘಟನೆ ಚನ್ನಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯ ಹೊಂಗನೂರು ಗ್ರಾಮದಲ್ಲಿ ನಡೆದಿದೆ.

 

ಹೊಂಗನೂರು ಗ್ರಾಮದ ಅರಸು ಜನಾಂಗದ ಪಾಂಡುರಂಗರಾಜೇಅರಸು ಸವಿತಮ್ಮಣ್ಣಿ ಯ ಪುತ್ರ ಇಪ್ಪತ್ನಾಲ್ಕು ವರ್ಷದ ಪ್ರಸನ್ನರಾಜೇಅರಸು ಎಂಬಾತ ಕುಂಬಳಗೂಡಿನಲ್ಲಿ ತನ್ನ ತಾಯಿಯ ಜೊತೆ ವಾಸವಾಗಿದ್ದು ಅಲ್ಲೇ ಸಮೀಪದ ಮನೆಯೊಂದರಲ್ಲಿ ಕನಕಪುರ ತಾಲೂಕಿನ ಸಾಸಲಾಪುರ ಗ್ರಾಮದ ಒಕ್ಕಲಿಗ ಜನಾಂಗದ ಲೇಟ್ ಲಿಂಗೇಗೌಡ ಹೊನ್ನಮ್ಮ ಪುತ್ರಿಯಾದ ಪವಿತ್ರ ಎಂಬ ಯುವತಿ ಒಟ್ಟಿಗೆ ಒಂದೇ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತಿದ್ದು ಪರಸ್ಪರ ಪ್ರೀತಿಸಿ ಕೆಂಗಲ್ ದೇವಸ್ಥಾನದಲ್ಲಿ ಮದುವೆಯಾಗಿದ್ದರು.

ಹುಡುಗನ ತಾಯಿ ಸವಿತಮ್ಮಣ್ಣಿ ಮದುವೆ ಬಗ್ಗೆ ಅಸಹನೆ ವ್ಯಕ್ತಪಡಿಸಿದ್ದು ಗಲಾಟೆಯು ನಡೆದಿತ್ತು. ಇಪ್ಪತ್ತು ದಿನಗಳ ಹಿಂದೆ ನನ್ನ ತಂದೆ ತೀರಿಹೋಗಿದ್ದು ಮನೆಯಲ್ಲಿ ಗೂಡು ಕಟ್ಟಿದ್ದಾರೆ ಅದನ್ನು ಬಿಚ್ಚಿಸಿ ಬರುತ್ತೇನೆಂದು ತೆರಳಿದವರು ಮತ್ತೆ ವಾಪಸ್ಸಾಗದ ಕಾರಣ ಹುಡುಗಿಯು ಕುಂಬಳಗೂಡು ಆರಕ್ಷಕ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

ದೂರು ದಾಖಲಿಸಿ ಇಪ್ಪತ್ತು ದಿನಗಳೆದರೂ ಸಹ ಸುಳಿವಿಲ್ಲದ ಕಾರಣ ದಿಕ್ಕುತೋಚದ ಹುಡುಗಿ ತನ್ನ ತಾಯಿಯ ಜೊತೆ ಚನ್ನಪಟ್ಟಣದ ಗ್ರಾಮಾಂತರ ಠಾಣೆಗೆ ದೂರು ದಾಖಲಿಸಿ ಇಂದು ಬೆಳಿಗ್ಗೆ ಹುಡುಗನ ಸ್ವಗ್ರಾಮ ಹೊಂಗನೂರಿನ ಬೀಗ ಹಾಕಿದ ಮನೆಯ ಮುಂದೆ ಧರಣಿ ಕುಳಿತಿದ್ದಾರೆ.

 

ನಮ್ಮ ಪತ್ರಿಕೆಯ ವರದಿಗಾರರ ಜೊತೆ ಮಾತನಾಡಿದ ಸಂತ್ರಸ್ತೆ ಪವಿತ್ರ ರವರು ನನ್ನ ಪತಿ ತುಂಬಾ ಒಳ್ಳೆಯವರು, ಅವರ ತಾಯಿಯ ಒತ್ತಾಯದ ಮೇರೆಗೆ ಈ ರೀತಿ ಮಾಡಿದ್ದಾರೆ ದಯವಿಟ್ಟು ನನಗೆ ನ್ಯಾಯ ಒದಗಿಸಿಕೊಡಿ, ಇಲ್ಲವಾದರೆ ಅವರ ಮನೆಯಮುಂದೆಯೆ ವಿಷ ಕುಡಿಯುತ್ತೇನೆ ಎಂದು ಅಳಲು ತೋಡಿಕೊಂಡರು.

 

ಪವಿತ್ರಾ ಳ ಎಟಿಎಂ ಕಾರ್ಡ್ ಬಳಸಿ ಏಳುಸಾವಿರ ರೂಪಾಯಿಗಳನ್ನು ತಮಿಳುನಾಡಿನ ಸೇಲಂ ನ ಎಟಿಎಂ ನಲ್ಲಿ ಡ್ರಾ ಮಾಡಿರುವ ಸಂದೇಶ ಈಕೆಯ ಮೊಬೈಲ್ ಗೆ ಬಂದಿದ್ದು ಪೋಲಿಸರು ಅವನ ಜಾಡು ಹಿಡಿದು ಸಂತ್ರಸ್ತೆಗೆ ನ್ಯಾಯ ಒದಗಿಸಲು

ಮುಂದಾಗಬೇಕಾಗಿದೆ.

 

ಯುವತಿ ಪವಿತ್ರ ಜೊತೆ ಅವರ ತಾಯಿ ಹೊನ್ನಮ್ಮ, ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿ ಹಾಗೂ ಮಹಿಳಾ ಹೋರಾಟಗಾರ್ತಿ ಮಳೂರು ಸುಕನ್ಯಾ ಇದ್ದರು.

 

 

ಗೋ ರಾ ಶ್ರೀನಿವಾಸ...

ಮೊ: 9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑