ಎಪಿಎಂಸಿ ಚುನಾವಣೆ ಮುಂದೂಡಿಕೆ, ಕಾಂಗ್ರೆಸ್ ಬಿಜೆಪಿ ನಿರ್ದೇಶಕರಿಂದ ಗಲಾಟೆ
ಇಂದು ನಿಗದಿಯಾಗಿದ್ದ ಎಪಿಎಂಸಿ ಚುನಾವಣೆಯನ್ನು ಏಕಾಏಕಿ ಮುಂದೂಡಲಾಗಿದೆ ಎಂದು ನಿರ್ದೇಶಕರು ಮತ್ತು ಸದಸ್ಯರು ಅಧಿಕಾರಿಯ ವಿರುದ್ಧ ದಂಗೆ ಎದ್ದು ಗಲಾಟೆ ಎಬ್ಬಿಸಿದ ಘಟನೆ ಎಪಿಎಂಸಿ ಕಛೇರಿಯಲ್ಲಿ ಇಂದು ನಡೆಯಿತು.
ಎಪಿಎಂಸಿ ಅಧ್ಯಕ್ಷ ಕುಮಾರ್ ಮತ್ತು ನಿರ್ದೇಶಕರು, ಸದಸ್ಯರು ಅನೇಕ ಜನಪ್ರತಿನಿಧಿಗಳು ಇಂದು ಚುನಾವಣೆಗಾಗಿ ಆಗಮಿಸಿದರು, ಎಪಿಎಂಸಿ ಕಛೇರಿಯ ನೋಟಿಸ್ ಬೋರ್ಡ್ ನಲ್ಲಿ , ೨೯/೧೦/೧೮ ರಂದು ನಡೆಯಬೇಕಾಗಿದ್ದ ಎಪಿಎಂಸಿ ಅಧ್ಯಕ್ಷರ/ಉಪಾಧ್ಯಕ್ಷರ ಚುನಾವಣೆಯನ್ನು ಚುನಾವಣಾಧಿಕಾರಿಗಳು/ತಹಶಿಲ್ದಾರ್ ಚನ್ನಪಟ್ಟಣ ರವರ ಅನಾರೋಗ್ಯದ ಕಾರಣ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ನೋಟೀಸ್ ಅಂಟಿಸಿದ ಬಗ್ಗೆ ಗರಂ ಆಗಿ ಪ್ರಥಮ ದರ್ಜೆ ನೌಕರ ತಿರುಮಳೇಗೌಡರ ವಿರುದ್ದ ಹರಿಹಾಯದ್ದರು.
ನಮಗೆ ಇಂದು ಚುನಾವಣೆ ನಡೆಸಿ, ಇಲ್ಲವಾದರೆ ಯಾವ ಸೆಕ್ಷನ್ ಪ್ರಕಾರ ಚುನಾವಣೆ ಮುಂದೂಡಿದ್ದೀರಿ ? ಚುನಾವಣಾಧಿಕಾರಿಗಳು ಅನಾರೋಗ್ಯದ ಕಾರಣ ನೀಡಿದ್ದಾರೆಂದರೆ ಅನಾರೋಗ್ಯದ ದಾಖಲೆ ನೀಡಿ ಎಂದು ಪಟ್ಟು ಹಿಡಿದರು. ಗೊಂದಲಕ್ಕೀಡಾದ ಸಹಾಯಕ ಅಧಿಕಾರಿ ತಿರುಮಳೇಗೌಡ ತಹಶಿಲ್ದಾರರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಉಪ ತಹಶಿಲ್ದಾರರನ್ನು ಕರೆಸಿ ಉತ್ತರ ಕೊಡಿಸುವುದಾಗಿ ತಿಳಿಸಿದರು.
ಜೆಡಿಎಸ್ ಒಳ ಸಂಚು !
ಒಟ್ಟು ಹನ್ನೆರಡು ಮಂದಿ ನಿರ್ದೇಶಕರಿದ್ದು ಕಾಂಗ್ರೆಸ್ ಮತ್ತು ಬಿಜೆಪಿ ಒಗ್ಗೂಡಿ ಚುನಾವಣೆ ನಡೆಸಲು ಉದ್ದೇಶಿಸಿ ಹಾಲಿ ಅಧ್ಯಕ್ಷ ಕುಮಾರ್ ರವರೇ ಮತ್ತೊಮ್ಮೆ ಅಧ್ಯಕ್ಷ ಆಗುವಂತೆ ಕಾಂಗ್ರೆಸ್ ಮತ್ತು ಬಿಜೆಪಿ ಒಳ ಸಂಚು ರೂಪಿಸಿಕೊಂಡಿದ್ದರು,
ಮೂರು ಜನ ನಾಮಿನಿ ನಿರ್ದೇಶಕರು ನಾಮನಿರ್ದೇಶನಗೊಂಡರೆ ನಮ್ಮ ಪಕ್ಷದವರೇ ಅಧ್ಯಕ್ಷರಾಗುತ್ತಾರೆ ಎಂದು ಕನಸು ಕಂಡಿದ್ದ ಜೆಡಿಎಸ್ ಗೆ ನಾಮಿನಿ ಆಗದ ಕಾರಣ ಚುನಾವಣೆ ಮುಂದೂಡಿದ್ದಾರೆ ಎನ್ನಲಾಗಿದೆ.
ಬಲಿಪಶುವಾದ ದಂಡಾಧಿಕಾರಿ ?
ಚುನಾವಣೆಯನ್ನು ಏಕಾಏಕಿ ದಂಡಾಧಿಕಾರಿ ಮುಂದೂಡಿರುವುದರ ಹಿಂದೆ ಜೆಡಿಎಸ್ ಧುರೀಣರ ಕೈವಾಡ ಇದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.
ಅಧ್ಯಕ್ಷ ಕುಮಾರ್, ಉಪಾಧ್ಯಕ್ಷೆ ವಿ ವಿ ಪೂರ್ಣಿಮಾ, ತಾಲ್ಲೂಕು ಪಂಚಾಯತ ಅಧ್ಯಕ್ಷ ಹರೂರು ರಾಜಣ್ಣ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮಾದು, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಯಮುತ್ತು, ತಾಲ್ಲೂಕು ಬಿಜೆಪಿ ಅಧ್ಯಕ್ಷ ಆನಂದಸ್ವಾಮಿ, ವಾಸೀಲ್ ಅಲಿಖಾನ್ ಹಾಗೂ ಎಪಿಎಂಸಿ ನಿರ್ದೇಶಕರು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ: 9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು