ಲೋಕಾಯುಕ್ತ ಬಲಗೊಳಿಸಲು ಮುಖ್ಯಮಂತ್ರಿ ತವರಲ್ಲಿ ನಾಳೆ ರೈತ ಸಂಘ ಧರಣಿ
ಚುನಾವಣಾ ಮುನ್ನಾ ತಮ್ಮ ಪ್ರಣಾಳಿಕೆಯಲ್ಲಿ ಅಂದಿನ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರು ತಮ್ಮ ಸ್ವಾರ್ಥಕ್ಕಾಗಿ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಿ ಎಸಿಬಿ ಯನ್ನು ಸೃಷ್ಟಿಸಿದ್ದಾರೆ, ನಾವು ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಎಸಿಬಿ ಸಂಸ್ಥೆಯನ್ನು ಕಿತ್ತೊಗೆದು ಸ್ವಾಯತ್ತ ಸಂಸ್ಥೆಯಾದ ಲೋಕಾಯುಕ್ತ ಸಂಸ್ಥೆಯನ್ನು ಮರುಸ್ಥಾಪಿಸಿ ಬಲಗೊಳಿಸುತ್ತೇವೆ ಎಂದು ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿತು.
ತಾವು ಅಧಿಕಾರಕ್ಕೆ ಬಂದುದಲ್ಲದೆ ಮುಖ್ಯಮಂತ್ರಿ ಯಾದರೂ ಸಹ ಭ್ರಷ್ಟಾಚಾರದ ವಿರುದ್ಧ ಕೇವಲ ಮಾತನಾಡುತಿದ್ದಾರೆಯೇ ವಿನಹ ಎಸಿಬಿ ಸಂಸ್ಥೆಯನ್ನು ಕಿತ್ತೊಗೆದು ಲೋಕಾಯುಕ್ತ ಸಂಸ್ಥೆಯನ್ನು ಸ್ಥಾಪಿಸಲು ಮುಂದಾಗಿಲ್ಲ.
ಲೋಕಾಯುಕ್ತ ಸಂಸ್ಥೆಯನ್ನು ಮರುಸ್ಥಾಪಿಸಿ ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕು ಎಂಬ ಆಶಯದೊಂದಿಗೆ ನಾಳೆ ೧೭/೧೧/೧೮ ರ ಶನಿವಾರ ನಗರದ ತಾಲ್ಲೂಕು ಕಛೇರಿಯ ಮುಂದೆ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಸ್ ಎಚ್ ಲಿಂಗೇಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಹಿಂದೆಯೂ ಸಹ ಕೆ ಆರ್ ಪೇಟೆ ಕೃಷ್ಣ ರವರ ಅಧ್ಯಕ್ಷತೆಯಲ್ಲಿ ಶಾಸಕರ ಭವನದಲ್ಲಿ ಲೋಕಾಯುಕ್ತ ಬಲಪಡಿಸಲು ಆಗ್ರಹಿಸಿದ್ದೆವು, ಹಲವಾರು ಹೋರಾಟಗಾರರ ಸಹಿಯುಳ್ಳ ಪತ್ರವನ್ನು ಸಹ ಖುದ್ದಾಗಿ ಮುಖ್ಯಮಂತ್ರಿಗಳಿಗೆ ತಲುಪಿಸಿದರೂ ಪ್ರಯೋಜನವಾಗಿಲ್ಲ, ಹಾಗಾಗಿ ಧರಣಿ ಹಮ್ಮಿಕೊಳ್ಳಲಾಗಿದೆ, ಈ ಧರಣಿಯಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್ ಎಸ್ ದೊರೆಸ್ವಾಮಿ, ಮಾಜಿ ಸಭಾದ್ಯಕ್ಷ ಕೆ ಆರ್ ಪೇಟೆ ಕೃಷ್ಣ, ಜನ ಸಂಗ್ರಾಮ ಪರಿಷತ್ತಿನ ರಾಘವೇಂದ್ರ ಕುಷ್ಟಗಿ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ.
ಭ್ರಷ್ಟಾಚಾರ ಗೊತ್ತಾಗಿದ್ದೆ ಲೋಕಾಯುಕ್ತ ಸಂಸ್ಥೆ ಬಂದ ಮೇಲೆ ಅದನ್ನು ಮುಚ್ಚಿ ಭ್ರಷ್ಟಾಚಾರವನ್ನು ಹಾಸಿ ಹೊದ್ದು ಮಲಗಿದ್ದಾರೆ ಆದ್ದರಿಂದ ಲೋಕಾಯುಕ್ತ ವನ್ನು ಬಲಗೊಳಿಸಲು ನಾವು ಸಹ ಕೈಜೋಡಿಸುತ್ತೇವೆ, ತಾಲ್ಲೂಕಿನ ಎಲ್ಲಾ ಹೋರಾಟಗಾರರು ಭಾಗವಹಿಸಿ ಭ್ರಷ್ಟಾಚಾರ ನಿರ್ಮೂಲನೆಗೆ ಕೈ ಜೋಡಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ವಿಭಾಗೀಯ ಅಧ್ಯಕ್ಷ ಎಂ ರಾಮು ಮನವಿ ಮಾಡಿದರು.
ಚನ್ನಪಟ್ಟಣ ಒಂದು ಐತಿಹಾಸಿಕ, ಪೌರಾಣಿಕ ಹಿನ್ನೆಲೆಯುಳ್ಳ ತಾಲ್ಲೂಕು, ಇಂತಹ ತಾಲ್ಲೂಕಿನಿಂದ ಗೆದ್ದು ಹೋದ ಶಾಸಕರು ಇಂದು ಮುಖ್ಯಮಂತ್ರಿಯಾಗಿದ್ದಾರೆ, ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಅವರ ವಿರುದ್ಧ ಹೋರಾಡಬೇಕಾಗಿದೆ, ಆದ್ದರಿಂದ ಮುಖ್ಯಮಂತ್ರಿ ತವರಿನಲ್ಲೇ ಈ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸೇವಾಸದನ ಟ್ರಸ್ಟ್ ನ ಅಧ್ಯಕ್ಷ ರುದ್ರಪ್ಪ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ರೈತಸಂಘದ ಜಿಲ್ಲಾಧ್ಯಕ್ಷ ಕೆ ಮಲ್ಲಯ್ಯ ಮತ್ತು ತಿಮ್ಮೇಗೌಡ ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ: 9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು