Tel: 7676775624 | Mail: info@yellowandred.in

Language: EN KAN

    Follow us :


ಲೋಕಾಯುಕ್ತ ಬಲಪಡಿಸಿ ಲಂಚಮುಕ್ತ ಕರ್ನಾಟಕ ಮಾಡಲಿ ಕೆ ಆರ್ ಪೇಟೆ ಕೃಷ್ಣ*

Posted date: 17 Nov, 2018

Powered by:     Yellow and Red

ಲೋಕಾಯುಕ್ತ ಬಲಪಡಿಸಿ ಲಂಚಮುಕ್ತ ಕರ್ನಾಟಕ ಮಾಡಲಿ ಕೆ ಆರ್ ಪೇಟೆ ಕೃಷ್ಣ*

ಕುಮಾರಸ್ವಾಮಿ ಯವರೇ ನೀವು ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೀರಿ ಮೊದಲು ನೀವು ದೃಢ ನಿರ್ಧಾರ ಮಾಡಿ ಪ್ರಣಾಳಿಕೆಯಲ್ಲಿ ಪ್ರಕಟಿಸಿದಂತೆ ಎಸಿಬಿ ಯನ್ನು ನಿರ್ಮೂಲನೆ ಮಾಡಿ, ಭ್ರಷ್ಟಾಚಾರ ತೊಲಗಿಸಲು ಲೋಕಾಯುಕ್ತ ಬಲಪಡಿಸಲೇಬೇಕು ಎಂದು ಮಾಜಿ ವಿಧಾನ ಸಭಾಧ್ಯಕ್ಷ ಕೆ ಆರ್ ಪೇಟೆ ಕೃಷ್ಣ ಆಗ್ರಹಿಸಿದರು.

 

ಅವರು ಇಂದು ತಾಲ್ಲೂಕು ಕಛೇರಿಯ ಮುಂಭಾಗ ಆಯೋಜಿಸಿದ್ದ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದರು.

ಅಂದಿನ ರಾಜಕಾರಣಿಗಳಿಗೆ ಪಕ್ಷದ ವರಿಷ್ಠರು ಮಾನಮರ್ಯಾದೆಗೆ ಅಂಜುತಿದ್ದರು, ಭ್ರಷ್ಟಾಚಾರ ಎಸಗಲು ಅಂಜುತಿದ್ದರು, ಆದರೆ ಇಂದು ಒಬ್ಬನಿಗಿಂತ ಒಬ್ಬ ಹೆಚ್ಚೆಚ್ಚು ಭ್ರಷ್ಟಾಚಾರ ಮಾಡುವಲ್ಲಿ ಪೈಪೋಟಿ ನಡೆಸುತ್ತಿದ್ದಾರೆ, ರೈತ ಮತ್ತು ಬಡವರು ಗ್ರಾಮಪಂಚಾಯಿತಿಯಿಂದ ವಿಧಾನಸೌಧ ದವರೆಗೂ ತಂತಮ್ಮ ಕೆಲಸಗಳನ್ನು ಸಲೀಸಾಗಿ ಮಾಡಿಸಿಕೊಳ್ಳಲು ಅನುಕೂಲವಾಗುತ್ತದೆ, ಆದ್ದರಿಂದ ಕುಮಾರಸ್ವಾಮಿ ಯವರು ಈ ಕೂಡಲೇ ಲೋಕಾಯುಕ್ತ ಬಲಪಡಿಸುವಲ್ಲಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

 

ಸರ್ಕಾರವನ್ನು ತೀರ್ವ ತರಾಟೆಗೆ ತೆಗೆದುಕೊಂಡ ಕೆ ಆರ್ ಪೇಟೆ ಕೃಷ್ಣರವರು ಲೋಕಾಯುಕ್ತ ಬಲಪಡಿಸಲಿ ಎಂದು ಮೂರು ತಿಂಗಳಿಂದೀಚೆಗೆ ಮೂರು ಬಾರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡು ಸ್ವತಃ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದರು ಸಹ ಎಸಿಬಿಯನ್ನು ಅಧೀರಗೊಳಿಸಲಾಗಲಿ, ಭ್ರಷ್ಟಾಚಾರ ನಿರ್ಮೂಲನೆ ಮಾಡಲಾಗಲಿ ಅಥವಾ ಲೋಕಾಯುಕ್ತ ಬಲಪಡಿಸಲಾಗಲಿ ಮುಖ್ಯಮಂತ್ರಿಗಳು ಇದುವರೆಗೂ ಒಂದು ಮಾತನಾಡದಿರುವುದು ಅನುಮಾನ ಮೂಡಿಸುತ್ತಿದೆ ಎಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ರಾಜ್ಯಾಧ್ಯಕ್ಷ ಹೇಳಿದರು.

 

ಇದೇ ವೇಳೆ ಸೇವಾ ಸದನ ಟ್ರಸ್ಟ್ ನ ಅಧ್ಯಕ್ಷ ರುದ್ರಪ್ಪ ನವರಿಗೆ ಲಂಚಮುಕ್ತ ಕರ್ನಾಟಕ ಟೋಪಿಯನ್ನು ತಲೆಗೇರಿಸಿ ಚನ್ನಪಟ್ಟಣದ ಉಸ್ತುವಾರಿಯನ್ನು ವಹಿಸಲಾಯಿತು.

 

೦೬/೦೯/೧೮ ಶಾಸಕರ ಭವನದಲ್ಲಿ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಆಯೋಜಿಸಿದ್ದ ಲೋಕಾಯುಕ್ತ ಬಲಪಡಿಸಿ ಎನ್ನುವ ವಿಚಾರ ಸಂಕಿರಣ ಮತ್ತು ಆಗ್ರಹ ಕಾರ್ಯಕ್ರಮದಲ್ಲಿ ಅನೇಕ ರೀತಿಯ ಹೋರಾಟಗಾರರಾದ ನಿವೃತ್ತ ಲೋಕಾಯುಕ್ತರಾದ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಗಡೆ, ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ, ಎಸ್ ಆರ್ ಹಿರೇಮಠ್, ಪ್ರೊ ಬಿ ಕೆ ಚಂದ್ರಶೇಖರ, ರಮೇಶ್ ಬಾಬು, ಶ್ರೀಕುಮಾರ್, ಕೆ ವಿ ಧನಂಜಯ, ಕಾತ್ಯಾಯಿನಿ ಚಾಮರಾಜ್, ರವಿಕೃಷ್ಣಾರೆಡ್ಡಿ ಸೇರಿಕೊಂಡು ಅನೇಕ ನಿರ್ಣಯ ಕೈಗೊಂಡು ಮುಖ್ಯಮಂತ್ರಿಗಳಿಗೆ ಮನವಿ ಕೊಟ್ಟಿದ್ದರು ಸಹ ಅದರ ಸೊಲ್ಲೆತ್ತಿಲ್ಲ, ಆದ್ದರಿಂದ ಅವರ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ, ಇದು ಆಗುವ ತನಕವೂ ಈ ಹೋರಾಟ ಮುಂದುವರೆಯಲಿದೆ ಎಂದು ಘೋಷಿಸಿದರು.

 

ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಇಂತಹ ಸ್ಥಿತಿಗೆ ಕಾರಣ, ಅವರ ಹುಳುಕನ್ನು, ಭ್ರಷ್ಟಾಚಾರವನ್ನು ಬಚ್ಚಿಟ್ಟುಕೊಳ್ಳಲು ಲೋಕಾಯುಕ್ತವನ್ನು ಬಲಹೀನಗೊಳಿಸಿದರು, ೧೫೦೦ ಕ್ಕೂ ಹೆಚ್ಚು ರಾಜಕಾರಣಿಗಳ ಮತ್ತು ೮೦೦ ಕ್ಕೂ ಹೆಚ್ಚು ಅಧಿಕಾರಿಗಳು ಭ್ರಷ್ಟಾಚಾರದ ತನಿಖೆ ನಡೆದು ಜೈಲಿಗಟ್ಟುವ ಸಂದರ್ಭದಲ್ಲಿ ಸಿದ್ದರಾಮಯ್ಯ ಲೋಕಾಯುಕ್ತವನ್ನು ಬಲಹೀನಗೊಳಿಸಿದರು, ಅದನ್ನು ಈಗ ಕುಮಾರಸ್ವಾಮಿಯವರು ಮನಗಂಡು ಶೀಘ್ರವಾಗಿ ಲೋಕಾಯುಕ್ತವನ್ನು ಬಲಗೊಳಿಸಬೇಕು ಎಂದು ಸರ್ವಜನಾಂಗ ಹಿತರಕ್ಷಣಾ ವೇದಿಕೆಯ ವೇಣುಗೋಪಾಲ್ ಗುಡುಗಿದರು.

 

ಈ ಕೂಡಲೆ ಎಸಿಬಿ ಸಂಸ್ಥೆಯನ್ನು ರದ್ದುಪಡಿಸಿ, ಸರ್ಕಾರಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಪ್ರಕರಣಗಳನ್ನು ಈ ಮುಂಚಿನಂತೆ ಲೋಕಾಯುಕ್ತದ ಸುಪರ್ದಿಗೆ ತರಬೇಕು.

 

ಖಾಲಿ ಇರುವ ಉಪಲೋಕಾಯುಕ್ತ ಹುದ್ದೆಯನ್ನು ತಕ್ಷಣವೇ ತುಂಬಬೇಕು.

 

ಅಧಿಕಾರಿಗಳ ಅಧಿಕಾರ ದುರುಪಯೋಗ ಮತ್ತು ಕರ್ತವ್ಯಲೋಪ ಸಾಬೀತಾದ ಪ್ರಕರಣಗಳಲ್ಲಿ ಲೋಕಾಯುಕ್ತ ಅಥವಾ ಉಪಲೋಕಾಯುಕ್ತರು ಕ್ರಮಕೈಗೊಳ್ಳಲು ಸರ್ಕಾರಕ್ಕೆ ಮಾಡುವ ಶಿಫಾರಸುಗಳನ್ನು ಸರ್ಕಾರವು ಮರುಪರಿಶೀಲನೆ ಮಾಡದೆ ಒಪ್ಪಿಕೊಂಡು ಒಂದು ವಾರದ ಅವಧಿಯ ಒಳಗೇ ಶಿಸ್ತು ಕ್ರಮ ಜರುಗಿಸಬೇಕೆಂಬ ನಿರ್ಣಯಗಳನ್ನು ಕೈಗೊಂಡು ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.

 

ಕೆಂಗಲ್ ಹನುಮಂತಯ್ಯ ಸ್ಮಾರಕ ಸಮಿತಿಯ ಅಧ್ಯಕ್ಷ ಬಿ ಹೆಚ್ ಸುರೇಶ್, ರಾಜ್ಯ ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಎಂ ರಾಮು, ಹಿರಿಯ ಪತ್ರಕರ್ತ ಸು ತ ರಾಮೇಗೌಡ, ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಯ್ಯ, ಸಿಂಲಿಂ ನಾಗರಾಜು ಸೇರಿದಂತೆ ಅನೇಕ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

 

 

ಗೋ ರಾ ಶ್ರೀನಿವಾಸ...

ಮೊ:9845856139.



 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑