ಸಿ ಎಂ, ಪಿ ಎಂ ಸ್ವಾಗತಕ್ಕೆ ಕಿತ್ತೋಗಿರೋ ರಸ್ತೆಗೆ ಹೊಸ ಅಂಟು ಮಣ್ಣು
ಇಂದು ಜೆಡಿಎಸ್ ಪಕ್ಷದ ಮತದಾರ ಮತ್ತು ಮುಖಂಡರು ಗಳಿಗೆ ಹೆಚ್ ಡಿ ದೇವೇಗೌಡ ಹಾಗೂ ಹೆಚ್ ಡಿ ಕುಮಾರಸ್ವಾಮಿ ಅಭಿಮಾನಿಗಳಿಗೆ ಚನ್ನಪಟ್ಟಣದಲ್ಲಿ ಒಂದು ಐತಿಹಾಸಿಕ ದಿನವಾಗಿದೆ.
ಕುಟುಂಬದ ಮೂಲ ಹಾಸನ ಜಿಲ್ಲೆಯಾದರೂ ಸಹ ಹೆಚ್ ಡಿ ರೇವಣ್ಣ ಹೊರತುಪಡಿಸಿ ಸದ್ಯ ರಾಜಕೀಯದಲ್ಲಿ ಇರುವವರಿಗೆಲ್ಲರಿಗೂ ರಾಮನಗರ ಜಿಲ್ಲೆ ಅವರ ಕರ್ಮಭೂಮಿ ಹಾಗೂ ಅವರೇ ಹೇಳಿಕೊಳ್ಳುವಂತೆ ರಾಜಕೀಯದ ಅದೃಷ್ಟ ನೆಲವೂ ಹೌದು.
ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಗಡಿ ಗ್ರಾಮವಾದ ಸಾಮಂದಿಪುರದಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ರ ಬೃಹತ್ ಕಂಚಿನ ಪ್ರತಿಮೆಯನ್ನು ಅವರ ಸಮ್ಮುಖದಲ್ಲೇ ಇಂದು ಉದ್ಘಾಟಿಸಲಾಗುತ್ತಿದೆ.
ಹೊಂಗನೂರು ಗ್ರಾಮ ಬಿಟ್ಟು ಸಾಮಂದಿಪುರದ ತನಕ ರಸ್ತೆ ಅಲ್ಲಲ್ಲಿ ಬಹುತೇಕ ಕಿತ್ತುಹೋಗಿದೆ,
ಮಾಜಿ ಪ್ರಧಾನಮಂತ್ರಿ ಹಾಗೂ ರಾಜ್ಯದ ಮುಖ್ಯಮಂತ್ರಿಗಳ ಜೊತೆಗೆ ಹಲವಾರು ಗಣ್ಯ ವ್ಯಕ್ತಿಗಳು ಈ ಕಾರ್ಯಕ್ರಮಕ್ಕೆ ಬರುತ್ತಿರುವುದರಿಂದ ಅಲ್ಲಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಭರದಿಂದ ಸಾಗುತ್ತಿದೆ.
ಗುಂಡಿಗಳನ್ನು ಮುಚ್ಚಲು ಜಲ್ಲಿ ಹಾಕಿ ಟಾರ್ ಹಾಕದೆ ಒಂದು ರೀತಿಯ ಅಂಟು ಮಣ್ಣು ಹಾಕಿ ಮುಚ್ಚುತ್ತಿರುವುದರಿಂದ ಟಾರು ಇದ್ದ ರಸ್ತೆಯೂ ಸಹ ಸಂಪೂರ್ಣ ಜಾರುವ ಅಂಟುಮಣ್ಣು ರಸ್ತೆಯಾಗಿ ಮಾರ್ಪಟ್ಟಿದೆ,
ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ಅವರು ಬರುವ ವೇಳೆಯೇ ಇಂತಹ ರಸ್ತೆಯಲ್ಲಿ ಸಂಚರಿಸುವ ಮೂಲಕ *ಅಭಿವೃದ್ಧಿ* ಶೂನ್ಯ ಎಂಬುದು ಸ್ಥಳೀಯ ಆಡಳಿತ ಮತ್ತು ಲೋಕೋಪಯೋಗಿ ಇಲಾಖೆಯ ವೈಫಲ್ಯಕ್ಕೆ ಕನ್ನಡಿ ಹಿಡಿದಂತಾಗಿದೆ.
ಮಳೆ ಬಿದ್ದಿರುವ ಕಾರಣ ವಾಹನ ಸವಾರರಿಗೆ ಅದರಲ್ಲೂ ದ್ವಿಚಕ್ರ ವಾಹನಗಳ ಸವಾರರು ಪ್ರಾಣಭಯದಿಂದ ಜೀವ ಕೈಲಿಡಿದು ಹೋಗುವ ಪರಿಸ್ಥಿತಿ ಉಂಟಾಗಿದೆ, ಮುಖ್ಯಮಂತ್ರಿಗಳ ತವರಲ್ಲೇ ಹೀಗಾದರೆ ರಾಜ್ಯದಲ್ಲಿ ಹೇಗೆ ಎಂಬ ಪ್ರಶ್ನೆ ಜನಸಾಮಾನ್ಯರಲ್ಲಿ ಕಾಡುತ್ತಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು