ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ವನಜ ಉಪಾಧ್ಯಕ್ಷರಾಗಿ ಬಿಳಿಯಪ್ಪ ಆಯ್ಕೆ
- ಟೆಪಿಸಿಎಂಎಸ್ ಗೆ ಇಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ ವನಜ ಮತ್ತು ಉಪಾಧ್ಯಕ್ಷರಾಗಿ ಬಿಳಿಯಪ್ಪ ಅವಿರೋಧವಾಗಿ ಆಯ್ಕೆಯಾದರು.
- ನಗರದ ಟಿಎಪಿಸಿಎಂಎಸ್ ಕಛೇರಿಯಲ್ಲಿ ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿಯಾಗಿ ಯೋಗಾನಂದ ರವರು ಕಾರ್ಯನಿರ್ವಹಿಸಿದರು, ಇದೇ ವೇಳೆ ವೃತ್ತ ನಿರೀಕ್ಷಕರು ಸೇರಿದಂತೆ ಹೆಚ್ಚಿನ ಪೋಲಿಸ್ ಸಿಬ್ನಂದಿಯನ್ನು ಬಂದೋಬಸ್ತಿಗಾಗಿ ನಿಯೋಜಿಸಲಾಗಿತ್ತು.
- ನಂತರ ಜೆಡಿಎಸ್ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಧ್ಯಕ್ಷ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ವನಜ ಚಂದ್ರಶೇಖರ ಮತ್ತು ಬಿಳಿಯಪ್ಪ ರವರು ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ವರಿಷ್ಠರಿಗೆ ಧನ್ಯವಾದ ಅರ್ಪಿಸಿದರು.
- ನಾಲ್ಕು ಸದಸ್ಯರು ಗೈರುಹಾಜರು
- ಟಿಎಪಿಸಿಎಂಎಸ್ ಚುನಾವಣೆ ಸಮಯದಲ್ಲಿ ಅಧಿಕಗೊಂಡ ಜಯಮುತ್ತು ಮತ್ತು ಲಿಂಗೇಶಕುಮಾರ್ ಬಣದ ರಾಜಕೀಯ ಚದುರಾಟ ಇಂದು ಸಹ ಮುಂದುವರೆಯಿತು, ಹದಿಮೂರು ಸದಸ್ಯರಲ್ಲಿ ಜಯಮುತ್ತು ಬಣದ ರಾಜಶೇಖರ, ಚಂದ್ರು, ಇ ತಿ ಶ್ರೀನಿವಾಸ ಮತ್ತು ಮೆಹರೀಷ್ ರವರು ಆವರಣದಲ್ಲಿ ಇದ್ದರಾದರೂ ಚುನಾವಣಾ ಸಭೆಗೆ ಹೋಗದೆ ಹಿಂತಿರುಗಿದರು.
- ಅಧ್ಯಕ್ಷ, ಉಪಾಧ್ಯಕ್ಷ ರ ಚುನಾವಣೆ ಇಂದು ನಡೆಯುತ್ತದೆ ಎಂಬುದೇ ನಮಗೆ ಗೊತ್ತಿಲ್ಲ, ಸದಸ್ಯರಾದವರಿಗೆ ಒಂದು ಪತ್ರವನ್ನು ಸಹ ಕಳುಹಿಸಿಲ್ಲ ಎಂದು ದೂರಿದರು, ಇ ತಿ ಶ್ರೀನಿವಾಸ ರವರು ಮಾತನಾಡಿ ಇಂದು ಬೆಳಿಗ್ಗೆ ನನಗೆ ಪತ್ರ ತಲುಪಿದೆ, ಇದು ಅಂಚೆ ಇಲಾಖೆಯ ತಪ್ಪೋ ಅಥವಾ ಬೇಕೆಂದಲೇ ತಡವಾಗಿ ಕಳುಹಿಸಿದರೋ ಎಂದು ಬೇಸರಿಸಿದರು.
- ಲಿಂಗೇಶ್ ಕುಮಾರ್ ಬಣದಲ್ಲಿ ಅವರು ಸೇರಿದಂತೆ ವನಜ, ಬಿಳಿಯಪ್ಪ, ಸೀನಪ್ಪ, ರೇವಣ್ಣ, ಪುಟ್ಟಸ್ವಾಮಿ, ಯಶೋಧಮ್ಮ, ಶಿವಲಿಂಗಮ್ಮ ಮತ್ತು ಜಗದೀಶ್ ರವರು ಒಟ್ಟಾಗಿ ಕಲೆತು ಅವಿರೋಧವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಆಯ್ಕೆಮಾಡಿಕೊಂಡು ಗೆಲುವಿನ ನಗೆ ಬೀರಿದರು.
- ಅವಧಿ ಮತ್ತು ಅಧಿಕಾರಕ್ಕಾಗಿ ಆಣೆ ಪ್ರಮಾಣ?
- ಅರವತ್ತು ತಿಂಗಳ ಅವಧಿಯಲ್ಲಿ ಯಾರು ಯಾರು ಎಷ್ಟು ಅವಧಿಗೆ ಅಧ್ಯಕ್ಷ ರಾಗಬೇಕೆಂಬ ಯೋಜನೆ ಸ್ಥಳೀಯ ನಾಯಕರೊಬ್ಬರ ಮನೆಯಲ್ಲಿ ಗುಟ್ಟಾಗಿ ನಡೆದಿದ್ದು, ಈ ಬಾರಿಯ ಚುನಾವಣೆಯಲ್ಲಿ ಈ ಒಂಭತ್ತು ಮಂದಿಯೂ ಒಟ್ಟಾಗಿ ಇರಬೇಕೆಂದು ಆಣೆ ಪ್ರಮಾಣ ಮಾಡಿಸಲಾಗಿತ್ತು ಎಂಬ ಗುಟ್ಟು ಇದೇ ಸಂದರ್ಭದಲ್ಲಿ ಹೊರಬಿದ್ದಿದ್ದಲ್ಲದೆ, ಮೊದಲು ಅಧ್ಯಕ್ಷರಾದವರು ಐದು ತಿಂಗಳು, ನಂತರ ಆದವರು ಹತ್ತು ತಿಂಗಳುಗಳ ಅವಧಿಗೆ ಮತ್ತು ಉಪಾಧ್ಯಕ್ಷರು ಮಾತ್ರ ಪೂರ್ಣ ಅವಧಿಗೆಂದು ತೀರ್ಮಾನವಾಗಿದೆಯಂತೆ.
- ಏನಾದರಗಾಲಿ ಪ್ರತಿಸ್ಪರ್ಧಿಗಳಿಲ್ಲದಿದ್ದರೂ ಇಷ್ಟೊಂದು ಪೋಲಿಸ್ ಬಂದೋಬಸ್ತ್ ಏಕೆ ಬೇಕಾಗಿತ್ತು ?
- ಚನ್ನಪಟ್ಟಣದಲ್ಲಿ ಜೆಡಿಎಸ್ ಒಂದಾಗಲು ಆಗುವುದೇ ಇಲ್ಲವೇ ? ಅಥವಾ ವರಿಷ್ಠರೇ ಒಂದಾಗಲು ಅಡ್ಡಗಾಲು ಹಾಕುತ್ತಿದ್ದಾರೆಯೇ ಇದಕ್ಕೆ ಉತ್ತರ ಯಾರು ನೀಡುತ್ತಾರೆಂದು ಕಾದು ನೋಡಬೇಕಾಗಿದೆ.
- ಗೋ ರಾ ಶ್ರೀನಿವಾಸ...
- ಮಪ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು