Tel: 7676775624 | Mail: info@yellowandred.in

Language: EN KAN

    Follow us :


ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ವನಜ ಉಪಾಧ್ಯಕ್ಷರಾಗಿ ಬಿಳಿಯಪ್ಪ ಆಯ್ಕೆ

Posted date: 18 Dec, 2018

Powered by:     Yellow and Red

ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ವನಜ ಉಪಾಧ್ಯಕ್ಷರಾಗಿ ಬಿಳಿಯಪ್ಪ ಆಯ್ಕೆ

  • ಟೆಪಿಸಿಎಂಎಸ್ ಗೆ ಇಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ ವನಜ ಮತ್ತು ಉಪಾಧ್ಯಕ್ಷರಾಗಿ ಬಿಳಿಯಪ್ಪ ಅವಿರೋಧವಾಗಿ ಆಯ್ಕೆಯಾದರು.

  • ನಗರದ ಟಿಎಪಿಸಿಎಂಎಸ್ ಕಛೇರಿಯಲ್ಲಿ ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿಯಾಗಿ ಯೋಗಾನಂದ ರವರು ಕಾರ್ಯನಿರ್ವಹಿಸಿದರು, ಇದೇ ವೇಳೆ ವೃತ್ತ ನಿರೀಕ್ಷಕರು ಸೇರಿದಂತೆ ಹೆಚ್ಚಿನ ಪೋಲಿಸ್ ಸಿಬ್ನಂದಿಯನ್ನು ಬಂದೋಬಸ್ತಿಗಾಗಿ ನಿಯೋಜಿಸಲಾಗಿತ್ತು.


  • ನಂತರ ಜೆಡಿಎಸ್ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಧ್ಯಕ್ಷ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ವನಜ ಚಂದ್ರಶೇಖರ ಮತ್ತು ಬಿಳಿಯಪ್ಪ ರವರು ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ವರಿಷ್ಠರಿಗೆ ಧನ್ಯವಾದ ಅರ್ಪಿಸಿದರು.

  • ನಾಲ್ಕು ಸದಸ್ಯರು ಗೈರುಹಾಜರು

  • ಟಿಎಪಿಸಿಎಂಎಸ್ ಚುನಾವಣೆ ಸಮಯದಲ್ಲಿ ಅಧಿಕಗೊಂಡ ಜಯಮುತ್ತು ಮತ್ತು ಲಿಂಗೇಶಕುಮಾರ್ ಬಣದ ರಾಜಕೀಯ ಚದುರಾಟ ಇಂದು ಸಹ ಮುಂದುವರೆಯಿತು, ಹದಿಮೂರು ಸದಸ್ಯರಲ್ಲಿ ಜಯಮುತ್ತು ಬಣದ ರಾಜಶೇಖರ, ಚಂದ್ರು, ಇ ತಿ ಶ್ರೀನಿವಾಸ ಮತ್ತು ಮೆಹರೀಷ್ ರವರು ಆವರಣದಲ್ಲಿ ಇದ್ದರಾದರೂ ಚುನಾವಣಾ ಸಭೆಗೆ ಹೋಗದೆ ಹಿಂತಿರುಗಿದರು.

  • ಅಧ್ಯಕ್ಷ, ಉಪಾಧ್ಯಕ್ಷ ರ ಚುನಾವಣೆ ಇಂದು ನಡೆಯುತ್ತದೆ ಎಂಬುದೇ ನಮಗೆ ಗೊತ್ತಿಲ್ಲ, ಸದಸ್ಯರಾದವರಿಗೆ ಒಂದು ಪತ್ರವನ್ನು ಸಹ ಕಳುಹಿಸಿಲ್ಲ ಎಂದು ದೂರಿದರು, ಇ ತಿ ಶ್ರೀನಿವಾಸ ರವರು ಮಾತನಾಡಿ ಇಂದು ಬೆಳಿಗ್ಗೆ ನನಗೆ ಪತ್ರ ತಲುಪಿದೆ, ಇದು ಅಂಚೆ ಇಲಾಖೆಯ ತಪ್ಪೋ ಅಥವಾ ಬೇಕೆಂದಲೇ ತಡವಾಗಿ ಕಳುಹಿಸಿದರೋ ಎಂದು ಬೇಸರಿಸಿದರು.

  • ಲಿಂಗೇಶ್ ಕುಮಾರ್ ಬಣದಲ್ಲಿ ಅವರು ಸೇರಿದಂತೆ ವನಜ, ಬಿಳಿಯಪ್ಪ, ಸೀನಪ್ಪ, ರೇವಣ್ಣ, ಪುಟ್ಟಸ್ವಾಮಿ, ಯಶೋಧಮ್ಮ, ಶಿವಲಿಂಗಮ್ಮ ಮತ್ತು ಜಗದೀಶ್ ರವರು ಒಟ್ಟಾಗಿ ಕಲೆತು ಅವಿರೋಧವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಆಯ್ಕೆಮಾಡಿಕೊಂಡು ಗೆಲುವಿನ ನಗೆ ಬೀರಿದರು.

  • ಅವಧಿ ಮತ್ತು ಅಧಿಕಾರಕ್ಕಾಗಿ ಆಣೆ ಪ್ರಮಾಣ?

  • ಅರವತ್ತು ತಿಂಗಳ ಅವಧಿಯಲ್ಲಿ ಯಾರು ಯಾರು ಎಷ್ಟು ಅವಧಿಗೆ ಅಧ್ಯಕ್ಷ ರಾಗಬೇಕೆಂಬ ಯೋಜನೆ ಸ್ಥಳೀಯ ನಾಯಕರೊಬ್ಬರ ಮನೆಯಲ್ಲಿ ಗುಟ್ಟಾಗಿ ನಡೆದಿದ್ದು, ಈ ಬಾರಿಯ ಚುನಾವಣೆಯಲ್ಲಿ ಈ ಒಂಭತ್ತು ಮಂದಿಯೂ ಒಟ್ಟಾಗಿ ಇರಬೇಕೆಂದು ಆಣೆ ಪ್ರಮಾಣ ಮಾಡಿಸಲಾಗಿತ್ತು ಎಂಬ ಗುಟ್ಟು ಇದೇ ಸಂದರ್ಭದಲ್ಲಿ ಹೊರಬಿದ್ದಿದ್ದಲ್ಲದೆ, ಮೊದಲು ಅಧ್ಯಕ್ಷರಾದವರು ಐದು ತಿಂಗಳು, ನಂತರ ಆದವರು ಹತ್ತು ತಿಂಗಳುಗಳ ಅವಧಿಗೆ ಮತ್ತು ಉಪಾಧ್ಯಕ್ಷರು ಮಾತ್ರ ಪೂರ್ಣ ಅವಧಿಗೆಂದು ತೀರ್ಮಾನವಾಗಿದೆಯಂತೆ.

  • ಏನಾದರಗಾಲಿ ಪ್ರತಿಸ್ಪರ್ಧಿಗಳಿಲ್ಲದಿದ್ದರೂ ಇಷ್ಟೊಂದು ಪೋಲಿಸ್ ಬಂದೋಬಸ್ತ್ ಏಕೆ‌ ಬೇಕಾಗಿತ್ತು ?
  • ಚನ್ನಪಟ್ಟಣದಲ್ಲಿ ಜೆಡಿಎಸ್ ಒಂದಾಗಲು ಆಗುವುದೇ ಇಲ್ಲವೇ ? ಅಥವಾ ವರಿಷ್ಠರೇ ಒಂದಾಗಲು ಅಡ್ಡಗಾಲು ಹಾಕುತ್ತಿದ್ದಾರೆಯೇ ಇದಕ್ಕೆ ಉತ್ತರ ಯಾರು ನೀಡುತ್ತಾರೆಂದು ಕಾದು‌ ನೋಡಬೇಕಾಗಿದೆ.


  • ಗೋ ರಾ ಶ್ರೀನಿವಾಸ...
  • ಮಪ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑