ಗ್ರಾಮ ಪಂಚಾಯತ್ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಬೆವರಿಳಿಸಿದ ಸಿಇಓ*
ಇಂದು ನಡೆದ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಲ್ಲಾ ಗ್ರಾಮ ಪಂಚಾಯತಿಗಳ ಅಧ್ಯಕ್ಷರುಗಳು ಮತ್ತು ಸದಸ್ಯರ ದೂರಿನ ಮೇರೆಗೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ವಿರುದ್ಧ ಜಿಲ್ಲಾ ಪಂಚಾಯತ್ ಸಿಇಓ ಮುಹಿಲನ್ ರವರಿಗೆ ದೂರುಗಳ ಸುರಿಮಳೆಗೈದ ಕಾರಣ ಸಿಇಓ ರವರು ಅಧಿಕಾರಿಗಳ ವಿರುದ್ಧ ಗರಂ ಆದರು.
ಎಲ್ಲಾ ಗ್ರಾಮ ಪಂಚಾಯತ್ ಅಧ್ಯಕ್ಷರು ಸಹ ನೀರಿನ ಬವಣೆಗಳ ಬಗ್ಗೆಯೇ ಹೆಚ್ಚು ದೂರುಗಳನ್ನು ನೀಡಲಾಯಿತು, ಕೆಲ ಊರುಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳು ಎರಡೆರಡನ್ನು ಮಂಜೂರು ಮಾಡಲಾಗಿದೆ, ಯಾವ ಆಧಾರದ ಮೇಲೆ ಎರಡು ಘಟಕಗಳನ್ನು ಮಂಜೂರು ಮಾಡಿದ್ದಾರೆ, ಬಹುತೇಕ ಊರುಗಳಲ್ಲಿ ಒಂದೂ ಘಟಕಗಳು ಇಲ್ಲಾ ಯಾಕೆ ಈ ತಾರತಮ್ಯ ಎಂದು ಪ್ರಶ್ನಿಸಿದರು.
ನೀರು ಶುದ್ಧೀಕರಣ ಘಟಕಗಳನ್ನು ನಿರ್ಮಿಸಿ ಅದನ್ನು ವ್ಯವಸ್ಥಿತವಾಗಿ ನಡೆಸದೆ ಬೇಕಾಬಿಟ್ಟಿಯಾಗಿ ಬಿಟ್ಟಿದ್ದಾರೆ, ಕೆಲವು ಕಡೆ ಕಟ್ಟಡ ಕಟ್ಟಿದ್ದಾರೆ, ಕೆಲವು ಕಡೆ ಮಿಷನರಿಗಳನ್ನು ಜೋಡಿಸಿದ್ದಾರೆ, ಉದ್ಘಾಟನಾ ಭಾಗ್ಯವನ್ನೇ ಕಂಡಿಲ್ಲ, ಹಲವಾರು ಕಡೆಗಳಲ್ಲಿ ಶುಚಿತ್ವವಿಲ್ಲದೆ ಶುದ್ದೀಕರೀಸದೇ ಅವಾಂತರಗಳಾಗಿವೆ, ಎಂದು ದೂರಿದರು.
ಉತ್ತರಿಸಿದ ಸಿಇಓ ರವರು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಯಾರೇ ನಿರ್ಮಿಸಲಿ, ಯಾವುದೇ ಸಂಸ್ಥೆ ನಿರ್ಮಿಸಲಿ, ಎಲ್ಲವನ್ನೂ ಒಳಗೊಂಡು ಕಾರ್ಯನಿರ್ವಹಿಸಲು ಒಂದು ಏಜೆನ್ಸಿಯನ್ನು ಹುಟ್ಟುಹಾಕಲಾಗುವುದು ಎಂದು ಹೇಳಿದರು.
ಬಸವ ವಸತಿ, ಡಾ ಅಂಬೇಡ್ಕರ್ ಮತ್ತು ಪ್ರಧಾನಮಂತ್ರಿ ವಸತಿ ಯೋಜನೆಯಲ್ಲಿ ವಸತಿರಹಿತರನ್ನು ಗುರುತಿಸಿ ಇನ್ನೂ ನೀಡದಿರುವುದು, ನೀಡಿರುವುದಕ್ಕೆ ಹಲವಾರು ಕಾರಣ ನೀಡಿ ಹಣ ಬಿಡುಗಡೆ ಮಾಡದಿರುವ ದೂರಿನ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಇಓ ರವರು ಅಧಿಕಾರಿಗಳಿಗೆ ಗಡುವು ನೀಡಿದರು.
ಅತಿ ಹೆಚ್ಚು ದೂರುಗಳ ಸುರಿಮಳೆಗೈದ ಜೆ ಬ್ಯಾಡರಹಳ್ಳಿಯ ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಲಕ್ಷ್ಮಿ ರವರ ಪತಿ ಗ್ರಾಮ ಪಂಚಾಯತಿ ಸದಸ್ಯ ಜಯಕಾಂತ್ ಚಾಲುಕ್ಯ ಉತ್ತಮ ಪಟುವಾಗಿ ಕಂಡರು,
ರಾಜ್ಯದಲ್ಲಿ ಜಿಲ್ಲಾ ಪಂಚಾಯತಿ ಇಪ್ಪತ್ತನೆಯ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಏರಿದೆ, ಎಲ್ಲಾ ಅಧಿಕಾರಿಗಳು ಅಭಿನಂದನಾರ್ಹರಾದರೂ ಸಹ ಅನೇಕ ಸವಲತ್ತುಗಳನ್ನು ಜನರಿಗೆ ತಲುಪಸಿದುರುವುದು ಸಹ ದುರದೃಷ್ಟಕರ ಎಂದು ಅಸಮಧಾನ ವ್ಯಕ್ತಪಡಿಸಿದರು,
ಗ್ರಾಮವಿಕಾಸ ಯೋಜನೆಯಲ್ಲಿ ಬಹುತೇಕ ಎಲ್ಲಾ ಕೆಲಸಗಳು ಬಾಕಿ ಇವೆ, ಗ್ರಾಮ ಪಂಚಾಯತಿ ಅಧ್ಯಕ್ಷರು, ಮತ್ತು ಅಧಿಕಾರಿಗಳ ಮಧ್ಯೆ ಸಾಮರಸ್ಯ ಇಲ್ಲದೇ ಕೆಲಸಗಳು ನಡೆಯುತ್ತಿಲ್ಲ, ಇದಕ್ಕೆ ನೇರವಾಗಿ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು, ಮುಂದೆ ಚುನಾವಣೆ ಘೋಷಣೆಯಾದರೆ ಹಣ ವಾಪಸು ಹೋಗುತ್ತದೆ ಎಂದು ಕೆ ಆರ್ ಐ ಡಿ ಎಲ್ ಅಧಿಕಾರಿ ಲಕ್ಷ್ಮಿ ಯವರಿಗೆ ಎಚ್ಚರಿಸಿದರು.
ಬರಪೀಡಿತ, ಮಳೆಕೊರತೆ, ಪಿಡಿಓ ಗಳ ಕಿರಿಕಿರಿ, ಕಾವೇರಿ ನೀರು, ಮುಖ್ಯಮಂತ್ರಿ ವಿಕಾಸ ಯೋಜನೆಗಳ ಬಗ್ಗೆ ಬಂದ ದೂರಿನ ಹಿನ್ನೆಲೆಯ ಬಗ್ಗೆ ಸಿಇಓ ರವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ವೀಣಾಚಂದ್ರು, ತಾಲ್ಲೂಕು ಪಂಚಾಯತ ಅಧ್ಯಕ್ಷ ಹರೂರು ರಾಜಣ್ಣ ನವರು ಸಹ ಅಧಿಕಾರಿಗಳ ವಿರುದ್ದ ಗರಂ ಆದರೆ ಜಿಲ್ಲಾ ಪಂಚಾಯತ ಅಧ್ಯಕ್ಷ ನಾಗರಾಜು ಒಂದು ಪ್ರಶ್ನೆಗೂ ಉತ್ತರಿಸದೆ ಮೌನವಹಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಸದಸ್ಯ ಪ್ರಸನ್ನ, ಸುಗುಣ ತಿಮ್ಮಪ್ಪ, ತಾಲ್ಲೂಕು ಪಂಚಾಯತ ಉಪಾಧ್ಯಕ್ಷೆ ಸಾಕಮಾದಮ್ಮ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಉಮೇಶ್, ತಾಲ್ಲೂಕು ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು