Tel: 7676775624 | Mail: info@yellowandred.in

Language: EN KAN

    Follow us :


ಭಾರತದಲ್ಲಿ ಪೋಲಿಯೋ ಸಂಪೂರ್ಣ ನಿರ್ಮೂಲನೆಗೆ ರೋಟರಿ ಸಂಸ್ಥೆ ಸಿದ್ಧ: ರೋಟರಿ ಜಿಲ್ಲೆ ಪಾಲಕ ಸುರೇಶ್‌ ಹರಿ

Posted date: 13 Jan, 2019

Powered by:     Yellow and Red

ಭಾರತದಲ್ಲಿ ಪೋಲಿಯೋ ಸಂಪೂರ್ಣ ನಿರ್ಮೂಲನೆಗೆ ರೋಟರಿ ಸಂಸ್ಥೆ ಸಿದ್ಧ: ರೋಟರಿ ಜಿಲ್ಲೆ ಪಾಲಕ ಸುರೇಶ್‌ ಹರಿ

ಅಂಧ ಮಕ್ಕಳಿಗೆ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ತರಬೇತಿ ಅಗತ್ಯವಿದೆ. ಹೀಗಾಗಿ ಸ್ಥಳೀಯ ರೋಟರಿ ಸಿಲ್ಕ್ ಸಿಟಿ ಆ ಸಾಧನೆ ಮಾಡಿದೆ ಎಂದು ರೋಟರಿ ಜಿಲ್ಲೆ 3190ರ ಪಾಲಕ ಸುರೇಶ್‌ ಹರಿ. ಎಸ್‌ ಅಭಿಪ್ರಾಯಪಟ್ಟರು.

ನಗರದಲ್ಲಿ ರೋಟರಿ ಸಿಲ್ಕ್ಸಿಟಿಯಿಂದ ನಡೆದ ಜಿಲ್ಲಾ ಪಾಲಕರ ಅಧಿಕೃತ ಭೇಟಿ ಸಮಾರಂಭದಲ್ಲಿ ಮಾತನಾಡಿ, ನಾಯಕತ್ವ ಗುಣಗಳ ತರಬೇತಿಯನ್ನು ಸಾಮಾನ್ಯರಿಗೆ ಕೊಡುವುದು ವಾಡಿಕೆ. ಆದರೆ, ರೋಟರಿ ಒಂದು ಹೆಜ್ಜೆ ಮುಂದಿಟ್ಟು ಬಾಲಗಂಗಾಧರನಾಥ ಸ್ವಾಮಿ ಅಂಧ ಮಕ್ಕಳ ಶಾಲೆ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದೆ ಎಂದು ಹೇಳಿದರು.

ಪೋಲಿಯೋ ಮನುಕುಲಕ್ಕೆ ಮಾರಕ: ರಾಷ್ಟ್ರ ವ್ಯಾಪ್ತಿ ಪೋಲಿಯೋ ಅಭಿಯಾನಕ್ಕೆ ಸರ್ಕಾರಗಳು ಚಿಂತನೆ ನಡೆಸಿವೆ. ಭಾರತದಲ್ಲಿ ಪೋಲಿಯೋ ರೋಗ ನಿರ್ಮೂಲನೆಗೆ ಸರ್ಕಾರಗಳೊಂದಿಗೆ ರೋಟರಿ ಕೈ ಜೋಡಿಸಿವೆ. ಈ ವಿಚಾರದಲ್ಲಿ ಯಶಸ್ಸು ಸಹ ಕಾಣಲಾಗಿದೆ. ಕಳೆದ 6 ವರ್ಷಗಳಿಂದ ಭಾರತದಲ್ಲಿ ಒಂದೇ ಒಂದು ಪೋಲಿಯೋ ರೋಗದ ಪ್ರಕರಣ ಪತ್ತೆಯಾಗಿಲ್ಲ. ಆದರೆ, ಕೆಲವು ನೆರೆಹೊರೆಯ ರಾಷ್ಟ್ರಗಳಲ್ಲಿ ಪೋಲಿಯೋ ಪತ್ತೆಯಾಗುತ್ತಿರುವುದ ರಿಂದ ಭಾರತದಲ್ಲಿ ಪೋಲಿಯೋ ಅಭಿಯಾನ ಇನ್ನು ಜಾರಿಯಲ್ಲಿದೆ. ಪೋಲಿಯೋ ಸಂಪೂರ್ಣವಾಗಿ ವಿಶ್ವ ಭೂಪಟದಿಂದ ನಿರ್ಮೂಲನೆಯಾಗಬೇಕಾಗಿದೆ. ಈ ರೋಗ ಮರುಕಳಿಸಿದರೆ ಮನುಕುಲಕ್ಕೆ ಮಾರಕ ಎಂದು ಎಚ್ಚರಿಸಿದರು.

ಕಣ್ಣಾಸ್ಪತ್ರೆ ಉದ್ದೇಶ ಈಡೇರಲಿ: ವಿಶ್ವಾದ್ಯಂತ ಹಲವು ರಾಷ್ಟ್ರಗಳಲ್ಲಿ ರೋಟರಿ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಭಾರತದಲ್ಲೂ ಸಕ್ರಿಯವಾಗಿವೆ. ರಾಮನಗರ ರೋಟರಿ ಸಿಲ್ಕ್ಸಿಟಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಶಾಖೆಯ ಸದಸ್ಯರು ಕಣ್ಣಾಸ್ಪತ್ರೆಯೊಂದನ್ನು ಸ್ಥಾಪಿಸಲು ಉದ್ದೇಶಿಸಿದ್ದಾರೆ. ಈ ಕ್ಲಬ್‌ ಸದಸ್ಯರ ಈ ಆಶಯ ಈಡೇರಲಿ ಎಂದು ಹೇಳಿದರು.

ಸಾರ್ಥಕ ಸೇವೆಗೆ ಸನ್ಮಾನ: ರಾಮನಗರದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾರ್ಥಕ ಸೇವೆ ಸಲ್ಲಿಸುತ್ತಿರುವ 5 ಮಂದಿಯನ್ನು ಸನ್ಮಾನಿಸಲಾಯಿತು. ನಾರಾಯಣ ಐ್ಯಯಂಗಾರ್‌ (ಸಂಗೀತ), ಅಬಿಧಾ ಬೇಗಂ (ಶಿಕ್ಷಣ), ಎಸ್. ರುದ್ರೇಶ್ವರ (ಪತ್ರಿಕೋದ್ಯಮ), ಆನಂದ ರಾಜಶೇಖರ್‌ (ನಿವೃತ್ತ ಸೈನಿಕ), ಉದಯ್‌ ವಿಷ್ಣು (ಕನ್ನಡ ಸೇವೆ) ಇವರನ್ನು ಗೌರವಿಸಲಾಯಿತು.

ಕರುಗಳ ದಾನ: ರಾಮನಗರ ತಾಲೂಕಿನ ಅವ್ವೇಹಳ್ಳಿ ಗ್ರಮದ ಚಿಕ್ಕತಾಯಮ್ಮ ಮತ್ತು ಕೃಷ್ಣರಾಜಪುರದ ಲತಾ ಎಂಬ ಮಹಿಳೆಯರು ಆರ್ಥಿಕ ಸ್ವಾವಲಂಬನೆ ನಿಟ್ಟಿನಲ್ಲಿ ಹೈನೋದ್ಯಮಕ್ಕೆ ಅನುವಾಗುವಂತೆ ತಲಾ ಒಂದು ಕರುವನ್ನು ರೋಟರಿ ಸಿಲ್ಕ್ಸಿಟಿಯಿಂದ ದಾನ ನೀಡಿದರು. ಜ್ಞಾನ ಸಿಂಧು ಶಾಲೆಯ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಕ್ರೀಡಾ ಕಿಟ್ ಕೊಡುಗೆ ನೀಡಲಾಯಿತು.

ರೋಟರಿ ಸಿಲ್ಕ್ ಸಿಟಿಯ ಅಧ್ಯಕ್ಷ ಆರ್‌.ರಾಘವೇಂದ್ರ, ಸಲಹೆಗಾರ ಕೆ.ವಿ.ಉಮೇಶ್‌, ಕಾರ್ಯದರ್ಶಿ ಟಿ.ಜೆ. ಅನುರಾಧ, ರೋಟರಿ ಜಿಲ್ಲಾ ಸಹಪಾಲಕ ಕುಮಾರ್‌ ರಾಜು, ಜಿಲ್ಲಾ ಕಾರ್ಯದರ್ಶಿ ತಿರುಮುರುಗನ್‌, ನಿಯೋಜಿತ ಅಧ್ಯಕ್ಷ ಎ.ಜೆ.ಸುರೇಶ್‌ ಹಾಜರಿದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑