Tel: 7676775624 | Mail: info@yellowandred.in

Language: EN KAN

    Follow us :


ಜೇನುಗೂಡು ಹಳೆಯ ವಿದ್ಯಾರ್ಥಿ ಸಂಘದವರಿಂದ ವೃತ್ತಿನಿರತ ವೃದ್ದೆಗೆ ಕಿರುಕಾಣಿಕೆ

Posted date: 19 Jan, 2019

Powered by:     Yellow and Red

ಜೇನುಗೂಡು ಹಳೆಯ ವಿದ್ಯಾರ್ಥಿ ಸಂಘದವರಿಂದ ವೃತ್ತಿನಿರತ ವೃದ್ದೆಗೆ ಕಿರುಕಾಣಿಕೆ

ಸಾಮಾಜಿಕ ಹೊಣೆಗಾರಿಕೆ ಅರಿತು ತುತ್ತು ಅನ್ನಕ್ಕಾಗಿ ಬೇರೆಯವರ ಬಳಿ ಕೈಚಾಚದೆ ಸ್ಚಾಭಿಮಾನಿಯಾಗಿ ಬದುಕಲು ಇಂದು ಅನೇಕ ವಯೋವೃದ್ದರು ರಸ್ತೆ ಬದಿಯಲ್ಲಿ ಅನೇಕ ರೀತಿಯ ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡು ತಮ್ಮ ಹೊಟ್ಟೆ ಹೊರೆದುಕೊಳ್ಳಲು ಸಂಧ್ಯಾ ಕಾಲದಲ್ಲಿ ಹೆಣಗಾಡುತ್ತಿರುವುದು ಶೋಚನೀಯ ಎನಿಸಿದರೂ ಇಳಿವಯಸ್ಸಿನ ಅವರ ಸ್ವಾಭಿಮಾನಿ ಬದುಕು, ದುಡಿದು ತಿನ್ನುವ ಛಲ ಅನೇಕ ಯುವಕ ಯುವತಿಯರು ಮತ್ತು ಆ ಸ್ಥಿತಿಗೆ ಅವರನ್ನು ತಂದವರು ನಾಚಿಕೆಯಿಂದ ತಲೆತಗ್ಗಿಸಿ ನಡೆಯಬೇಕಾಗಿದೆ.


ಇಂತಹವರ ಬದುಕನ್ನು ನೋಡಿ ಕಂಡುಕಾಣದಂತೆ ಸೀದಾ ಹೋಗಿಬಿಡುವವರು ಅನೇಕ ಮಂದಿ ಇಂದು ನಮ್ಮ ನಡುವೆ ಇದ್ದಾರೆ, ಆದರೆ ಇದಕ್ಕೆ ಹೊರತಾಗಿ ಅಂತಹ ವೃತ್ತಿ ನಿರತ ವಯೋವೃದ್ದರಿಗೆ ತಮ್ಮ ಬದುಕನ್ನು ಕಟ್ಟಿಕೊಳ್ಳಲು ಅಗತ್ಯವೆನಿಸುವ ಉಪಕರಣಗಳು ಅತ್ಯವಶ್ಯಕವಾದರೂ ಎಷ್ಟೋ ಮಂದಿಗೆ ಅದು ಸಾಧ್ಯವಾಗಿರುವುದಿಲ್ಲ, ಅಂತಹವರನ್ನು ಗುರುತಿಸಿ ಅವರಿಗೆ ಬೇಕಾದ ಸಲಕರಣೆಗಳನ್ನು ನೀಡುವುದು ಉಳ್ಳವರ ಕರ್ತವ್ಯವಾಗಬೇಕಿದೆ, ಇಂತಹ ಒಂದು ಕಾರ್ಯವನ್ನು ನಗರದ *ಜೇನುಗೂಡು* ಹಳೆಯ ವಿದ್ಯಾರ್ಥಿಗಳ ಸಂಘದ ಸದಸ್ಯರು ಇಂದು ಮಾಡಿದ್ದು ಶ್ಲಾಘನೀಯ.


ನ್ಯಾಯಾಲಯದ (ಕೋಟ್೯) ರಸ್ತೆ ಬದಿಯಲ್ಲಿ ಹೊಂಗನೂರು ಗ್ರಾಮದ ವೃದ್ದೆ ವೆಂಕಟಮ್ಮ ಎಂಬುವವರು ಅನೇಕ ವರ್ಷಗಳಿಂದ ಹಳೆಯ ಇಸ್ತ್ರಿ ಪೆಟ್ಟಿಗೆ ಮತ್ತು ಮುರಿದ ಟೇಬಲ್ ಇಟ್ಟುಕೊಂಡು ಗ್ರಾಹಕರ ಬಟ್ಟೆಗಳನ್ನು ಇಸ್ತ್ರಿ ಮಾಡುತ್ತಾ ಬರುತ್ತಿದ್ದು ಅದರಲ್ಲಿ ಬರುತ್ತಿದ್ದ ಆದಾಯ ಅಂದಿಗಂದಿಗೆ ಸರಿಹೋಗುತ್ತಿತ್ತು, ಇದನ್ನು ಗಮನಿಸಿದ ನಿಲಯಪಾಲಕ ಮೋಹನ್ ರವರು ತಮ್ಮ ಹಳೆಯ ವಿದ್ಯಾರ್ಥಿಗಳಿಗೆ ತಿಳಿಸಲಾಗಿ ಸ್ಪಂದಿಸಿದ ಅವರು ಎಂಟು ಸಾವಿರ ರೂ ಮೌಲ್ಯದ ಇಸ್ತ್ರಿ ಪೆಟ್ಟಿಗೆ ಮತ್ತು ಮೇಜನ್ನು ಕೊಡಿಸುವ ಮೂಲಕ ತಮ್ಮ ಔದಾರ್ಯವನ್ನು ಮೆರೆದರು.


ಇಂತಹ ಅನೇಕ ಅಂತ:ಕರಣ ಉಳ್ಳವರು, ಆರ್ಥಿಕವಾಗಿ ಸದೃಢವಾಗಿರುವವರು ವೃತ್ತಿನಿರತ ವಯೋವೃದ್ದರಿಗೆ ನೆರವಾದರೆ ಕೊಟ್ಟವರ ಮತ್ತು ತೆಗೆದುಕೊಂಡವರ ಬದುಕು ಉಜ್ವಲವಾಗುತ್ತದೆ, ಜೇನುಗೂಡು ವಿದ್ಯಾರ್ಥಿ ಸಂಘದ ಹುಡುಗರು ಇನ್ನೂ ಮುಂದೆಯೂ ಸಹ ಇಂತಹ ಉತ್ತಮ ಕೆಲಸ ಕಾರ್ಯಗಳನ್ನು ಮಾಡುವಲ್ಲಿ ತೊಡಗಿಸಿಕೊಳ್ಳಬೇಕೆಂದು ಇಸ್ತ್ರಿ ಪೆಟ್ಟಿಗೆ ವಿತರಿಸಿದ ಅನ್ನಪೂರ್ಣ ಮೋಹನ್ ರವರು ಕರೆನೀಡಿದರು.


ಬೆಸ್ಕಾಂ ನ ಸಿದ್ದೇಶ್, ಸುನೀತಾ, ಸೇರಿದಂತೆ ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑