ರಾಮನಗರದಲ್ಲಿ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ
ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ವತಿಯಿಂದ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಸಹಯೋಗದೊಂದಿಗೆ ರಾಮನಗರ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಪ್ರಪ್ರಥಮ ಬಾರಿಗೆ ಹಮ್ಮಿಕೊಳ್ಳಲಾಗಿದೆ ಎಂದು ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಪೂಜ್ಯ ಕಾರ್ಯದರ್ಶಿ ಶ್ರೀ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ತಿಳಿಸಿದರು.
ಅರ್ಚಕರಹಳ್ಳಿಯ ಶಾಖಾ ಮಠದಲ್ಲಿ ರಾಮನಗರ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸಮಿತಿಗಳ ಪದಾಧಿಕಾರಿಗಳ ಸಭೆ ಕರೆದು ಜಿಲ್ಲಾ ಸಮಿತಿಯನ್ನು ರಚಿಸಿ, ಚರ್ಚಿಸಿ ಫೆಬ್ರವರಿ ಹದಿಮೂರನೆ ತಾರೀಖು ಅಂಧರ ಶಾಲೆಯ ಸಭಾಂಗಣದಲ್ಲಿ ಕಾರ್ಯಕ್ರಮ ಜರಗಲಿದ್ದು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಯ ಐದರಿಂದ ಹನ್ನೆರಡನೇ ತರಗತಿಯ ಹದಿನೆಂಟು ವರ್ಷದೊಳಗಿನ ಸಾಹಿತ್ಯದ ಬಗ್ಗೆ ಆಸಕ್ತಿ ಹೊಂದಿರುವ ಮಕ್ಕಳು ಭಾಗವಹಿಸಬೇಕೆಂದು ಸಮಿತಿಯ ಜಿಲ್ಲಾಧ್ಯಕ್ಷ ಡಿ ಸಿ ರಾಮಚಂದ್ರ ತಿಳಿಸಿದ್ದಾರೆ.
ಜಿಲ್ಲಾ ಹಿರಿಯ ಸಾಹಿತಿಗಳ ಉಪಸ್ಥಿತಿಯಲ್ಲಿ ಸಾಹಿತ್ಯದಲ್ಲಿ ಕೃಷಿ ಮಾಡಿರುವ ರಾಮನಗರ ಜಿಲ್ಲೆಯ ಎಲ್ಲಾ ಶಾಲೆಯ ಮಕ್ಕಳುಗಳೇ ಸರ್ವಾಧ್ಯಕ್ಷರು, ಅಧ್ಯಕ್ಷರು, ವಿಚಾರಗೋ಼ಷ್ಠಿ ಮತ್ತು ಕಾವ್ಯಗೋಷ್ಠಿಯ ಅಧ್ಯಕ್ಷರು ಸಹ ಮಕ್ಕಳೇ ನಿರ್ವಹಿಸಲಿದ್ದು ಆಯಾಯ ಶಾಲೆಯ ಶಿಕ್ಷಕರು ಪ್ರತಿಭಾವಂತ ಸಾಹಿತ್ಯ ಕೃಷಿ ಮಾಡಿರುವ ಮಕ್ಕಳನ್ನು ಆಯ್ಕೆ ಮಾಡಿ ಇದೇ ತಿಂಗಳ ಮೂವತ್ತನೇ ತಾರೀಖಿನೊಳಗೆ ಆಯಾ ತಾಲ್ಲೂಕಿನ ಅಧ್ಯಕ್ಷರು, ಅಂಧರ ಶಾಲೆಯ ಮುಖ್ಯ ಶಿಕ್ಷಕರಿಗೆ ಲಿಖಿತವಾಗಿ ನೀಡಲು ಸೂಚಿಸಲಾಗಿದೆ.
ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿ ಡಿ ಸಿ ರಾಮಚಂದ್ರ, ಉಪಾಧ್ಯಕ್ಷರಾಗಿ ನಾಗರಾಜೇಗೌಡ, ಕಾರ್ಯದರ್ಶಿಯಾಗಿ ನಂ ಶಿವಲಿಂಗಯ್ಯ, ಖಜಾಂಚಿಯಾಗಿ ಶಿವನಂಜಪ್ಪ, ಸಂಚಾಲಕರಾಗಿ ಗೋ ರಾ ಶ್ರೀನಿವಾಸ ಮತ್ತು ಸಂಜೀವೇಗೌಡ, ಸಂಘಟನಾ ಕಾರ್ಯದರ್ಶಿಯಾಗಿ ಕಬ್ಬಾಳೇಗೌಡ ಹಾಗೂ ನಿರ್ದೇಶಕರಾಗಿ ಶೈಲಾ ಶ್ರೀನಿವಾಸ, ಮುನಿಯಪ್ಪ ನೇಮಕಗೊಂಡರು.
ತಮ್ಮ ಶಾಲೆಯ ಸಾಹಿತ್ಯದ ಮಕ್ಕಳನ್ನು ಗುರುತಿಸಿ ಈ ಕೆಳಗೆ ಕೊಟ್ಟಿರುವ ತಾಲ್ಲೂಕು ಅಧ್ಯಕ್ಷರ ಸಮ್ಮುಖದಲ್ಲಿ ನೊಂದಾಯಿಸಿಕೊಳ್ಳಬೇಕೆಂದು ಈ ಮೂಲಕ ತಿಳಿಸಲಾಗಿದೆ.
ರಾಮನಗರ ಪಿ ಶಿವರಾಮಯ್ಯ, ಮೊ:9740222169, ಚನ್ನಪಟ್ಟಣ ಕೆ ಕಾಳೇಗೌಡ ಮೊ:9141885259, ಮಾಗಡಿ ಡಿ ಜಿ ಗಂಗಾಧರ ಮೊ: 9739433035, ಕನಕಪುರ ಕಬ್ಬಾಳೇಗೌಡ ಮೊ:9980414893 ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಹೆಸರು ನೊಂದಾಯಿಸಿಕೊಳ್ಳಲು ಸೂಚಿಸಲಾಗಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು