ಜನಪದವನ್ನು ಉಳಿಸಿ ಬೆಳೆಸಲು ಯುವ ಪೀಳಿಗೆ ಮುಂದಾಗಬೇಕು ಮುನಿಸಿದ್ದೇಗೌಡ
ಅಂದು ಕೆಲಸಗಳು ಸುಗಮವಾಗಿ ಸಾಗಲೆಂದು ನಮ್ಮ ಹಿರಿಯರು ಅನೇಕ ಪದಗಳನ್ನು ತಾವೇ ಸ್ವತಃ ಕಟ್ಟಿ ಹಾಡುತ್ತಿದ್ದರು, ಬೆಳಿಗ್ಗೆ ಎದ್ದು ರಾಗಿ ಬೀಸುವ ಪದದಿಂದ ಆರಂಭಗೊಂಡರೆ ನಾಟಿ ಹಾಕುವಾಗ, ಕಳೆ ಕೀಳುವಾಗ, ಒಕ್ಕಣೆ ಮಾಡುವಾಗ, ಹಸೆ ಮಣೆ, ಸೋಬಾನೆ ಪದ ಎಲ್ಲಾ ಶುಭ ಅಶುಭ ಸಮಾರಂಭಗಳಲ್ಲಿಯೂ ಜಾನಪದದ ಹಾಡುಗಳನ್ನು ಹಾಡುತ್ತಾ ಅದಕ್ಕೊಂದು ಮಾನ್ಯತೆ ತಂದುಕೊಟ್ಟಿದ್ದರು, ಅದನ್ನು ಇಂದಿನ ಪೀಳಿಗೆಯ ಮಕ್ಕಳು ಕಲಿತು ಉಳಿಸುವಲ್ಲಿ ಕೈ ಜೋಡಿಸಿದರೆ ಮುಂದಿನ ತಲೆಮಾರು ಸಹ ಮುಂದುವರೆಸಿಕೊಂಡು ಹೋಗಲು ಅನುಕೂಲ ಆಗುತ್ತದೆ ಎಂದು ಕೆಂಪೇಗೌಡ ಸಾಂಸ್ಕೃತಿಕ ಕಲಾಬಳಗದ ಅಧ್ಯಕ್ಷ ಎಸ್ ಮುನಿಸಿದ್ದೇಗೌಡ ತಿಳಿಸಿದರು.
ಅವರು ಸಂಕಲ್ಪ ಸಾಮಾಜಿಕ ಮತ್ತು ಜಾನಪದ ಕಲಾ ಟ್ರಸ್ಟ್ ಹಮ್ಮಿಕೊಂಡಿದ್ದ ಜಾನಪದ ಮತ್ತು ತತ್ವಪದ ಗಾಯನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಪತ್ರಕರ್ತ ಗೋ ರಾ ಶ್ರೀನಿವಾಸ ರವರು ನಮ್ಮ ಎಲ್ಲಾ ಗೀತಗಾಯನಗಳ ಮೂಲ ಬೇರು ಜಾನಪದ, ಆದರೆ ಇತ್ತೀಚೆಗೆ ಮೂಲ ಧಾಟಿಯನ್ನು ಕೆಲವರು ವಿರೂಪಗೊಳಿಸುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು, ಬಹುತೇಕ ಕಾರ್ಯಕ್ರಮಗಳಲ್ಲಿ ಜಾನಪದ ಹಾಡುಗಾರರೇ ಬರುವುದಿಲ್ಲ, ಸಾಮಾನ್ಯ ಜನರು ಸಹ ಕಲಿಯುವುದರಲಿ ಭಾಗವಹಿಸಲು ಆಸಕ್ತಿ ತೋರುತ್ತಿಲ್ಲ, ಒಂದು ಜಾನಪದ ಕಾರ್ಯಕ್ರಮ ಇದೆ ಎಂದಾದರೆ ಕನಿಷ್ಠ ಆಹ್ವಾನ ಪತ್ರಿಕೆಯಲ್ಲಿ ಇರುವವರಾದರು ಭಾಗವಹಿಸಿದರೆ ಕಾರ್ಯಕ್ರಮ ಯಶಸ್ವಿಯಾಗಬಲ್ಲದು ಎಂದರು.
ಕಾರ್ಯಕ್ರಮದಲ್ಲಿ ಮೆಣಸಿಗನಹಳ್ಳಿ ಯ ಸ್ವಾಮಿ ತತ್ವಪದ ತಂಡ, ರಾಂಪುರ ಸಿದ್ದರಾಜು ತಂಡ, ನಿರಂಜನ್ ರವರ ಗೀತಗಾಯನ ತಂಡ, ಆರ್ ಎಸ್ ಶಾಂಭವಿ ಯವರ ಜಾನಪದ ಗೀತಾ ತಂಡ, ಬೋರಮ್ಮ ನವರ ತತ್ವಪದ ಗಾಯನ ತಂಡ, ರಂಗಗೀತೆಯ ಪುಟ್ಟರಾಜು, ಸೇರಿದಂತೆ ಅನೇಕ ತಂಡಗಳು ಭಾಗವಹಿಸಿ ಗೀತಗಾಯನ ನಡೆಸಿಕೊಟ್ಟರು.
ಟ್ರಸ್ಟ್ ನ ಸಂಸ್ಥಾಪಕ ಕಾರ್ಯದರ್ಶಿ ಮೆಣಸಿಗನಹಳ್ಳಿ ಸ್ವಾಮಿ ಸ್ವಾಗತಿಸಿ ವಂದಿಸಿದರು.
ಗಾಯಕ ಚೌಪುಸ್ವಾಮಿ ಪ್ರಾರ್ಥಿಸಿ ನಿರೂಪಿಸಿದರು.
ವೇದಿಕೆಯಲ್ಲಿ ನಿಲಯ ಪಾಲಕರಾದ ರಮೇಶ್, ಕೆಂಪೇಗೌಡ ಸಾಂಸ್ಕೃತಿಕ ಕಲಾಬಳಗದ ನಿರ್ದೇಶಕ ಕೆ ರಾಮಚಂದ್ರು ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು