ನ್ಯಾಯಾಲಯ ಉದ್ಘಾಟನೆ ಆಹ್ವಾನ ಪತ್ರಿಕೆಯಲ್ಲಿ ಪ್ರಥಮ ಪ್ರಜೆಯ ಹೆಸರಿಲ್ಲ, ಆರೋಪ
ನಾಳೆ ಅಂದರೆ ೦೨/೦೨/೧೯ ರಂದು ಉದ್ಘಾಟನೆಗೊಳ್ಳಲು ಸಿದ್ದವಾಗಿರುವ ನ್ಯಾಯಾಲಯ ಆಹ್ವಾನ ಪತ್ರಿಕೆಯಲ್ಲಿ ನಗರಸಭೆಯ ಅಧ್ಯಕ್ಷೆ, ನಗರದ ಪ್ರಥಮ ಪ್ರಜೆಯ ಹೆಸರಿಲ್ಲ ಎಂದು ಅಧ್ಯಕ್ಷೆ ನಜ್ಮುನ್ನೀಷಾ ಮತ್ತು ಸದಸ್ಯರು ಪತ್ರಿಕಾಗೋಷ್ಠಿ ನಡೆಸಿ ದೂರಿದರು.
ಸ್ಥಾಯಿ ಸಮಿತಿ ಅಧ್ಯಕ್ಷ ಎಂ ರಾಮು ಮಾತನಾಡಿ ಸರ್ಕಾರದ ನಿಯಮದ ಪ್ರಕಾರ ಸರ್ಕಾರಿ ಕಾರ್ಯಕ್ರಮಕ್ಕೆ ನಗರದ ಪ್ರಥಮ ಪ್ರಜೆಯ ಹೆಸರನ್ನು ಮುದ್ರಿಸಬೇಕಾಗಿದ್ದು ಅಧಿಕಾರಿಗಳ ಕರ್ತವ್ಯ, ಆದರೆ ಅಧಿಕಾರಿಗಳು ಬೇಕೆಂದೆ ಅವರ ಹೆಸರನ್ನು ಕೈಬಿಡಲಾಗಿದೆ, ಜಿಲ್ಲಾಧಿಕಾರಿಗಳೇ ಬಂದು ಆಡಳಿತ ನಡೆಸಲಿ ನಾವುಗಳೆಲ್ಲರೂ ಸಾಮೂಹಿಕ ರಾಜಿನಾಮೆ ನೀಡುತ್ತೇವೆ, ಇವರ ನಡವಳಿಕೆಯಿಂದ ಬೇಸತ್ತು ನಗರಸಭೆಯ ಸದಸ್ಯರುಗಳು ಯಾರೂ ಸಹ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದರು.
ಮತ್ತೊಬ್ಬ ಸದಸ್ಯ ಮುದ್ದುಕೃಷ್ಣ ಮಾತನಾಡಿ ಪೌರಾಯುಕ್ತ ಮತ್ತು ತಹಶಿಲ್ದಾರ್ ರವರು ರಾಜಕೀಯ ಮುಖಂಡರ ಮನೆಗೆ ಹೋಗಿ ಮಾತನಾಡಬಾರದಿತ್ತು, ಜೊತೆಗೆ ಬೀದಿಬದಿಯ ವ್ಯಾಪಾರಸ್ಥರನ್ನು ತೆರವುಗೊಳಿಸಿರುವುದರ ವಿರುದ್ಧ ಅಧಿಕಾರಿಗಳನ್ನು ಬೈದು ಕಳುಹಿಸಿರುವುದು ಜಿಲ್ಲಾಧಿಕಾರಿಗಳ ಘನತೆಗೆ ತಕ್ಕುದಲ್ಲ.
ನಗರಸಭೆಗೆ ಸಂಬಂಧಿಸಿದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಕಿಂಚಿತ್ತೂ ಗಮನಕೊಡದೆ ಗುತ್ತಿಗೆ ಕಾಮಗಾರಿಗಳಿಗೆ ಬಂದಿರುವ ಪತ್ರಗಳನ್ನು ತೆರೆಯದೆ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಯ ವಿರುದ್ಧ ಹರಿಹಾಯ್ದರು.
ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷೆ ನಜ್ಮುನ್ನೀಷಾ, ಉಪಾಧ್ಯಕ್ಷೆ ಸರಳಾ, ಸದಸ್ಯರಾದ ಝಕಿ, ಲೋಕೇಶ್, ರಮೇಶ್ ಬಾಬು, ನಂದೀಶ್, ಶಂಕರ್ ಸೇರಿದಂತೆ ಅನೇಕ ಸದಸ್ಯರು ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು