Tel: 7676775624 | Mail: info@yellowandred.in

Language: EN KAN

    Follow us :


ಶ್ರೀ ಮುರಾರಿ ಸ್ವಾಮಿ ಮಠದ ಅಭಿವೃದ್ಧಿಗೆ ಸಹಕರಿಸುವೆವು ಗಣ್ಯರು

Posted date: 05 Feb, 2019

Powered by:     Yellow and Red

ಶ್ರೀ ಮುರಾರಿ ಸ್ವಾಮಿ ಮಠದ ಅಭಿವೃದ್ಧಿಗೆ ಸಹಕರಿಸುವೆವು ಗಣ್ಯರು

ಮಾಗಡಿ ತಾಲ್ಲೂಕಿನ ಗೆಜ್ಜಗಾರಗುಪ್ಪೆ ಗ್ರಾಮದಲ್ಲಿ ಹನ್ನೆರಡನೇ ಶತಮಾನದ್ದು ಎನ್ನಲಾದ ಶ್ರೀ ಮುರಾರಿ ಸ್ವಾಮೀಜಿ ಗಳ ಗದ್ದುಗೆಯ ಪುನರುಜ್ಜೀವನಕ್ಕೆ ಹಲವಾರು ಗಣ್ಯರು ಮುಂದೆ ಬಂದಿದ್ದು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು, ಈ ಎಲ್ಲಾ ಗಣ್ಯರು ಭಾನುವಾರ ನಡೆದ ಶ್ರೀ ಕ್ಷೇತ್ರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಭರವಸೆ ನೀಡಿದರು.


ಗ್ರಾಮದ ಶಿವಲಿಂಗಯ್ಯ ಎಂಬುವವರು ದಾನ ನೀಡಿದ ಭೂಮಿಯಲ್ಲಿ ಶ್ರೀ ಸುಬ್ರಹ್ಮಣ್ಯ ದೇವಾಲಯದ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಿ ಮಾತನಾಡಿದ ಜಾತ್ಯತೀತ ಜನತಾ ದಳದ ರಾಜ್ಯ ಉಪಾಧ್ಯಕ್ಷರು ಮತ್ತು ಕೆಂಪೇಗೌಡ ಅಭಿವೃದ್ಧಿ ಸಂಘದ ನಾಮನಿರ್ದೇಶಿತರೂ ಆದ ಕೃಷ್ಣಮೂರ್ತಿಯವರು ಮುಂದಿನ ಪೀಳಿಗೆಗೆ ಇಂತಹ ದಾರ್ಶನಿಕರ ಬಗ್ಗೆ ತಿಳಿಸಿಕೊಡಬೇಕು, ಇದು ತಿಳಿಯಬೇಕೆಂದರೆ ಈ ಮಂಟಪವೂ ಜೀರ್ಣೋದ್ಧಾರ ಆಗಬೇಕಾಗಿದೆ, ಆದ್ದರಿಂದ ಸರ್ಕಾರದ ಜೊತೆಗೆ ವೈಯುಕ್ತಿಕವಾಗಿ ಸಹ ಸಹಾಯ ಮಾಡಲು ಸಿದ್ದನಿದ್ದೇನೆ ಎಂದು ಭರವಸೆ ನೀಡಿದರು.


ಅಧ್ಯಕ್ಷತೆ ವಹಿಸಿ ಮಾತನಾಡಿದ ಮುರಾರಿ ಸ್ವಾಮಿ ಪೀಠಾಧಿಪತಿ ಕುಮಾರಸ್ವಾಮಿ ಯವರು ಸೆಪ್ಟಂಬರ್ ತಿಂಗಳಲ್ಲಿ ನನಗೆ ಕೆಲವು ಹಿತೈಷಿಗಳ ಮೂಲಕ ಮಾಹಿತಿ ಬಂದಿತ್ತು, ನಂತರ ಪ್ರೇರಣೆಯಾಗಿ ಈ ಸ್ಥಳಕ್ಕೆ ಭೇಟಿ ನೀಡಿ, ಸೆಪ್ಟೆಂಬರ್ ಇಪ್ಪತೈದರಂದು ಹೋಮಹವನಾದಿಗಳ ಮೂಲಕ ಪ್ರಾರಂಭ ಮಾಡಿ, ಇಲ್ಲಿ ಸಂಪೂರ್ಣವಾಗಿ ಮುಚ್ಚಿಹೋಗಿದ್ದ ಬೃಹತ್ ಕಲ್ಯಾಣಿ ಯನ್ನು ಮಾತೃಭೂಮಿ ಫೌಂಡೇಶನ್ ಕಾರ್ಯಕರ್ತರಿಂದ ಸ್ವಚ್ಛಗೊಳಿಸಿ ದೀಪಾರಾಧನೆಯನ್ನು ಮಾಡಿದ್ದೇವೆ, ಎಲ್ಲಾ ಗಣ್ಯರು, ದಾನಿಗಳು, ಗ್ರಾಮಸ್ಥರು ಸೇರಿ ಈ ದೇಗುಲದ ಪುನರುಜ್ಜೀವನಕ್ಕೆ ಸಹಕಾರ ನೀಡಬೇಕು ಎಂದರು.


ಮಾಗಡಿ ಪ್ರಾಧಿಕಾರದ ಅಧ್ಯಕ್ಷರು ಮತ್ತು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಕೃಷ್ಣಮೂರ್ತಿ ಮತ್ತು ವಿಧಾನ ಪರಿಷತ್ ಸದಸ್ಯ ಅ ದೇವೇಗೌಡರು ಭೇಟಿ ನೀಡಿ ಇಂತಹ ಪವಾಡ ಪುರುಷರ ದೇಗುಲದ ಜೀರ್ಣೋದ್ಧಾರ ಮಾಡುವುದು ನಮ್ಮೆಲ್ಲರ ಸುದೈವ, ನೀವು ಅನುಮತಿ ನೀಡಿದ ದಿನವೇ ಮಠ ಮತ್ತು ಕಲ್ಯಾಣಿಗೆ ಕೊಳವೆ ಬಾವಿ‌ ಕೊರೆಸಿ ಕೊಡುವುದಾಗಿ ವಾಗ್ದಾನ ಮಾಡಿದರು.


ಕರ್ನಾಟಕ ಜಾನಪದ ಪರಿಷತ್ತು ಚನ್ನಪಟ್ಟಣದ ಅಧ್ಯಕ್ಷರಾದ ಗೋ ರಾ ಶ್ರೀನಿವಾಸ ರವರು ಶ್ರೀ ಮುರಾರಿ ಸ್ವಾಮಿಗಳು ಮತ್ತು ಅವರ ಇತಿಹಾಸ ದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರೆ ಶಿಕ್ಷಕ ಸುರೇಶ್ ಬಿ ವಿ ಹಳ್ಳಿ ಯವರು ನಿರೂಪಣೆ ಮಾಡಿದರು. ಇದೇ ವೇಳೆ ಗ್ರಾಮದ ಪ್ರಮುಖ ರಸ್ತೆಗೆ ಮುರಾರಿ ಸರ್ಕಲ್ ಎಂದು ನಾಮಕರಣವನ್ನು ಮಾಡಲಾಯಿತು.


ಕಾರ್ಯಕ್ರಮದಲ್ಲಿ ಸುವರ್ಣ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಡಿ ವಿ ಗೋವಿಂದೇಗೌಡ, ಬೆಂಗಳೂರಿನ ನಾಗರಾಜ ಸ್ವಾಮಿ, ಪ್ರಜಾನುಡಿ ಪತ್ರಿಕೆಯ ಸತೀಶ್ ಬೂಸ, ಜನಸೈನ್ಯದ ಮಂಡ್ಯ ಜಿಲ್ಲಾಧ್ಯಕ್ಷ ಚಂದ್ರು ಕೀಲಾರ, ಎಸ್ ಪಿ ಶ್ರೀನಿವಾಸ, ಗೆಜ್ಜಗಾರಗುಪ್ಪೆ, ಚಿಟ್ಟನಹಳ್ಳಿ ಮತ್ತು ಅಕ್ಕಪಕ್ಕ ಗ್ರಾಮದ ಹಿರಿಯ ಮುಖಂಡರು ಭಾಗವಹಿಸಿದ್ದರು.



ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑