ಭಾವಿಪ ದಿಂದ ಗುರುವಂದನಾ ಛಾತ್ರ ಕಾರ್ಯಕಮದಲ್ಲಿ ಕಾಂತಾ ರವರಿಗೆ ಸನ್ಮಾನ
ಭಾರತ ವಿಕಾಸ ಪರಿಷದ್ ಕಣ್ವ ಶಾಖೆ ಚನ್ನಪಟ್ಟಣ ವತಿಯಿಂದ ಇಂದು ಗುರುವಂದನಾ ಛಾತ್ರ ಅಭಿನಂದನಾ ಕಾರ್ಯಕ್ರಮವನ್ನು ಅಪ್ಪಗೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅಪ್ಪಗೆರೆ ಸ#ಹಿ# ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಸಿ ಆರ್ ಕಾಂತಾ ರವರು ನಾನು ಪ್ರಶಸ್ತಿಗಾಗಿ, ಸನ್ಮಾನಕ್ಕಾಗಿ ಕಾರ್ಯನಿರ್ವಹಿಸಿಲ್ಲ, ಯಾರೂ ಸಹ ಪ್ರಶಸ್ತಿಗಾಗಿ ಕೆಲಸ ಮಾಡುವುದು ಬೇಡ, ಪ್ರಶಸ್ತಿ ಗೋಷ್ಕರ ಕೆಲಸ ಮಾಡದೇ ಮಕ್ಕಳ ಉನ್ನತಿಗಾಗಿ ಕೆಲಸ ನಿರ್ವಹಿಸಿದರೇ ಆ ಪ್ರಶಸ್ತಿಗಳು ಹುಡುಕಿಕೊಂಡು ಬರುತ್ತವೆ, ಇಂದು ನನಗೆ ಭಾರತ್ ವಿಕಾಸ ಪರಿಷದ್ ಗೌರವಿಸಿ ಸನ್ಮಾನಿಸುತ್ತಿರುವುದೇ ಸಾಕ್ಷಿ ಎಂದು ಸ್ಮರಿಸಿದರು.
ಗುರುವಿನ ಮಹತ್ವ ಕುರಿತು ಮುಖ್ಯ ಭಾಷಣ ಮಾಡಿದ ಪ್ರಾಧ್ಯಾಪಕ ಡಾ ಮಧುಸೂಧನಚಾರ್ಯಜೋಷಿ ರವರು ಬುದ್ದನಿಂದ ಅಬ್ದುಲ್ ಕಲಾಂ ರವರವರೆಗೂ ಗುರುವಿನ ಮಹತ್ವ ತಿಳಿಯುತ್ತದೆ, ಬುದ್ಧ ಬಸವ ಗಾಂಧಿ, ರಾಧಾಕೃಷ್ಣನ್, ಹಾಗೂ ಅಂಬೇಡ್ಕರ್ ರವರು ಸಹ ಮಹತ್ಸಾಧನೆ ಮಾಡಿರುವುದು ಗುರುಗಳಿಂದ, ಗು ಅಂದರೆ ಕತ್ತಲೆ, ರು ಅಂದರೆ ಜ್ಞಾನ, ಕತ್ತಲೆಯಿಂದ ಬೆಳಕಿನೆಡೆಗೆ ಕರೆದೊಯ್ಯುವವನೇ ಗುರು, ಆ ಗುರುವಿನ ಮಹತ್ವ ಇತಿಹಾಸ, ಪೌರಾಣಿಕ ಹಿನ್ನೆಲೆಯನ್ನು ಗಮನಿಸಿದರೇ ತಿಳಿಯುತ್ತದೆ.
ನಮ್ಮ ಭಾರತ ಹಿಂದೆ ವಿಶ್ವ ಗುರುವಾಗಿತ್ರು, ಇನ್ನು ಮುಂದೆಯೂ ವಿಶ್ವಗುರುವಾಗಿಯೇ ಇರುತ್ತದೆ, ಇಂದಿಗೂ ಅನೇಕ ಪಾಶ್ಚಿಮಾತ್ಯ ದೇಶಗಳ ಮಹಾನ್ ನಾಯಕರು ನಮ್ಮ ದೇಶಕ್ಕೆ ಕಾಲಿಟ್ಟ ಕ್ಷಣವೇ ನಮ್ಮ ಭೂಮಿಗೆ ನಮಸ್ಕರಿಸಿ ಪ್ರಯಾಣ ಬೆಳೆಸುತ್ತಾರೆ, ನಮ್ಮ ಸಂಸ್ಕೃತಿ ಯನ್ನು ಅಳವಡಿಸಿಕೊಳ್ಳುತ್ತಿದ್ದಾರೆ,ಇದಕ್ಕೆಲ್ಲಾ ನಮ್ಮ ಗುರುಕುಲವೇ ಕಾರಣ ಎಂದು ನುಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಭಾವಿಪ ಕಣ್ವ ಶಾಖೆಯ ಅಧ್ಯಕ್ಷ ವಸಂತಕುಮಾರ್ ರವರು ಭಾವಿಪ ಶಾಖೆಯಿಂದ ಪ್ರತಿವರ್ಷ ಒಬ್ಬ ಸರ್ಕಾರಿ ಶಾಲೆಯ ಉತ್ತಮ ಶಿಕ್ಷಕರಿಗೆ ಸನ್ಮಾನ ಮಾಡುತ್ತಿದ್ದೇವೆ, ಅದರಲ್ಲೂ ಕಾಂತಾ ರವರಿಗೆ ಸನ್ಮಾನ ಮಾಡುತ್ತಿರುವುದು ನಮ್ಮ ಶಾಖೆಗೆ ಹೆಮ್ಮೆಯ ವಿಷಯ, ಅತ್ಯಂತ ಪ್ರಾಮಾಣಿಕ ವ್ಯಕ್ತಿತ್ವತಕ್ಕೆ ಸಂದ ಗೌರವ ಎಂದರು.
ಪದವಿಪೂರ್ವ ಕಾಲೇಜಿನ ಉಪಪ್ರಾಂಶುಲರಾದ ಪಾರ್ವತಿ ಯವರು ಮಕ್ಕಳಿಗೆ ಉಪದೇಶ ನೀಡಿದರು, ಸಿ ಆರ್ ಪಿ ಉಮೇಶ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು, ಕೃಷ್ಣಮ್ಮ ಸೋಮರಾಜು ರವರು ನಿರೂಪಣೆ ಮಾಡಿದರು, ಶಾಲೆಯ ಶಿಕ್ಷಕಿ ಶೋಭಾ ರವರು ವಂದನಾರ್ಪಣೆ ಮಾಡಿದರು.
ವೇದಿಕೆಯಲ್ಲಿ ಗ್ರಾಮ ಪ್ರಂಚಾಯಿತಿ ಸದಸ್ಯೆ ಲಕ್ಷ್ಮಿ, ಭಾವಿಪ ಪ್ರಧಾನ ಕಾರ್ಯದರ್ಶಿ ಬಿ ಎನ್ ಕಾಡಯ್ಯ, ಅಂಗನವಾಡಿ ಶಿಕ್ಷಕಿ ವಸಂತಕುಮಾರಿ, ಶಿಕ್ಷಕಿಯರಾದ ಧನಲಕ್ಷ್ಮಿ, ಲತಾ, ಬೆಸ್ಕಾಂ ಶಿವಲಿಂಗಯ್ಯ, ಸಾವಿತ್ರಮ್ಮ ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು