Tel: 7676775624 | Mail: info@yellowandred.in

Language: EN KAN

    Follow us :


ಚನ್ನಪಟ್ಟಣ ಕಂದಾಯ ಇಲಾಖೆಯ ಇತಿಹಾಸದಲ್ಲಿ ರೈತಪರ ಕೆಲಸ ಮಾಡಿದ ಅಧಿಕಾರಿಗಳಿಗೆ ರೈತರಿಂದಲೇ ಸನ್ಮಾನ

Posted date: 28 Feb, 2019

Powered by:     Yellow and Red

ಚನ್ನಪಟ್ಟಣ ಕಂದಾಯ ಇಲಾಖೆಯ ಇತಿಹಾಸದಲ್ಲಿ ರೈತಪರ ಕೆಲಸ ಮಾಡಿದ ಅಧಿಕಾರಿಗಳಿಗೆ ರೈತರಿಂದಲೇ ಸನ್ಮಾನ

ಪ್ರತಿಭಟನೆ, ಸತ್ಯಾಗ್ರಹ ಮತ್ತು ಧಿಕ್ಕಾರಗಳಿಗೆ ವೇದಿಕೆಯಾಗುತ್ತಿದ್ದ ತಾಲ್ಲೂಕು ಕಛೇರಿಯಲ್ಲಿ ಇಂದು ಅಭಿನಂದನೆಗಳ ಸುರಿಮಳೆ

ನಲವತ್ಮೂರು ವರ್ಷಗಳ ಗೇಣಿ ಹೋರಾಟ ಮತ್ತು ಮೂವತ್ತೆಂಟು ವರ್ಷಗಳ ಸಾಗುವಳಿ‌ ಹೋರಾಟ ನೆನೆಗುದಿಗೆ ಬಿದ್ದಿದ್ದು ಕೇವಲ ಆರು ತಿಂಗಳ ಹಿಂದೆ ತಾಲ್ಲೂಕಿಗೆ ನೇಮಕವಾದ ತಹಶಿಲ್ದಾರ್ ಯೋಗಾನಂದರವರು ಆಗಮಿಸಿದ ನಂತರ ಜಿಲ್ಲಾಧಿಕಾರಿಗಳಾದ ಕ್ಯಾಪ್ಟನ್ ಡಾ ರಾಜೇಂದ್ರ ರವರ ಆದೇಶದ ಮೇರೆಗೆ ಕೇವಲ ಎರಡು ತಿಂಗಳ ಅವಧಿಯಲ್ಲಿ ಕೆಲವು ಅಧಿಕಾರಿಗಳ ತಂಡ ಕೆಲಸ ಮಾಡಿ ರೈತರಿಗೆ ಸಾಗುವಳಿ ಚೀಟಿ ನೀಡಿದ ಹಿನ್ನೆಲೆಯಲ್ಲಿ ತಹಶಿಲ್ದಾರ್ ಯೋಗಾನಂದ ಮತ್ತು ಇನ್ನಿತರೆ ಅಧಿಕಾರಿಗಳಿಗೆ ರೈತ ಮುಖಂಡ ಸಿ ಪುಟ್ಟಸ್ವಾಮಿ ಮುಂದಾಳತ್ವದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.


ಸನ್ಮಾನ ಸ್ವೀಕರಿಸಿ ಮಾತನಾಡಿದ ದಂಡಾಧಿಕಾರಿ ಯೋಗಾನಂದರವರು ನಾನು ನನ್ನ ಕರ್ತವ್ಯ ಮಾಡಿದ್ದೇನೆ, ಬಹುತೇಕ ರೈತರ ಕಛೇರಿಯಾದ ತಾಲ್ಲೂಕು ಕಛೇರಿಯಲ್ಲಿ ರೈತರ ಕೆಲಸ ಮಾಡಬೇಕಾದ ಕರ್ತವ್ಯ ಅಧಿಕಾರಿಗಳದ್ದು, ಒಂದು ಬಾರಿ ಬಂದು ಮನವಿ ಕೊಟ್ಟರೇ ಮತ್ತೊಂದು ಬಾರಿ ತಾಲ್ಲೂಕು ಕಛೇರಿಗೆ ಅವರು ಬರದಂತೆ ಕೆಲಸ‌ಮಾಡಿಕೊಡಬೇಕಾದ್ದು ನಮ್ಮ ಜವಾಬ್ದಾರಿ ಎಂದರು.


ಈ ಹಿಂದೆಯೂ ಸಹ ಕನಕಪುರ ತಾಲೂಕಿನಲ್ಲಿ ಕೆಲಸ ನಿರ್ವಹಿಸಿದ ಸಂದರ್ಭದಲ್ಲಿ ಕಾಡಿನಲ್ಲಿ ವಾಸಿಸುತಿದ್ದ ೯೫೦ ಮಂದಿಗೆ ಇನ್ನಿತರ ಬಡ ಕುಟುಂಬದ ೨,೦೫೦ ಮಂದಿ ಸೇರಿದಂತೆ ೩,೦೦೦ ಮಂದಿಗೆ ಸಾಗುವಳಿ ಜಮೀನನ್ನು ಮಾಡಿಕೊಟ್ಟಿರುವುದು ನನ್ನ ವೃತ್ತಿ ಜೀವನದಲ್ಲಿ ಅತ್ಯಂತ ಖುಷಿಯ ವಿಷಯವಾಗಿದೆ, ಇದೇ ರೀತಿ ಯಾವುದೇ ತಾಲ್ಲೂಕಿನಲ್ಲಿ ಕೆಲಸ ನಿರ್ವಹಿಸದರೂ ಸಹ ರೈತರ ಕೆಲಸ ಕ್ಕೆ ಮೊದಲ ಆದ್ಯತೆ ನೀಡುವುದಾಗಿ ತಿಳಿಸಿದರು.


ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ ಯವರು ರೈತರ ನ್ಯಾಯಯುತ ಕೆಲಸವನ್ನು ಸೀಮಿತ ಅವಧಿಯಲ್ಲಿ ಮಾಡಿಕೊಟ್ಟರೆ ರೈತರೇ ತಮ್ಮ ಬಳಿ ಬಂದು ಸನ್ಮಾಸುತ್ತಾರೆ ಎಂಬುದಕ್ಕೆ ಈ ಸಮಾರಂಭ ಒಂದು ಉದಾಹರಣೆ, ನಲವತ್ತೆರಡು ವರ್ಷಗಳ ಹೋರಾಟದ ಫಲವಾಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ತಹಶಿಲ್ದಾರ್ ಮತ್ತು ತಂಡವು ಕೆಲವೇ ತಿಂಗಳುಗಳಲ್ಲಿ ಕೆಲಸ ನಿರ್ವಹಿಸಿದ್ದು ನಿಜಕ್ಕೂ ಶ್ಲಾಘನೀಯ, ಇಂದು ತಾಲ್ಲೂಕು ಆಡಳಿತ ಮಾಡಿರುವ ಕೆಲಸ ಜಿಲ್ಲಾ ಆಡಳಿತ ಮತ್ತು ಸರ್ಕಾರಕ್ಕೂ ಗೌರವ ತರುತ್ತದೆ ಎಂದು ಬಣ್ಣಿಸಿದರು.


ಸನ್ಮಾನಿತ ಅಧಿಕಾರಿಗಳು ಮಾತನಾಡಿ ಇದು ನಮ್ಮೆಲ್ಲರ ಕರ್ತವ್ಯವಾಗಿದ್ದರೂ ಇಷ್ಟು ವರ್ಷ ತಡವಾಗಿದ್ದಕ್ಕೆ ಬೇಸರವಾಗಿದೆ, ಇಂದು ನೀವು ಕೊಡುತ್ತಿರುವ ಗೌರವ ಸನ್ಮಾನಗಳು ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿವೆ, ಮುಂದೆಯೂ ಸಹ ಹೆಚ್ಚಿನ ಪ್ರಮಾಣದಲ್ಲಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.


ಇದೇ ವೇಳೆ ತಹಶಿಲ್ದಾರ್ ಯೋಗಾನಂದ, ಉಪ ತಹಶಿಲ್ದಾರ್ ಮಧುಕುಮಾರ್, ಶಿರಸ್ತೇದಾರ ಮಹದೇವಯ್ಯ, ಆಹಾರ ನಿರೀಕ್ಷಕ ಮಲ್ಲಿಕಾರ್ಜುನ, ಕಂದಾಯ ನಿರೀಕ್ಷಕ ಮೋಹನ್, ಸರ್ವೇಯರ್ ನಾಗರಾಜು, ದರ್ಖಾಸ್ತು ವಿಭಾಗದ ಹರೀಶ್, ಗ್ರಾಮ ಲೆಕ್ಕಿಗ ರಘು ರವರನ್ನು ಅರಳಾಳುಸಂದ್ರ ಮತ್ತು ಗೊಲ್ಲರದೊಡ್ಡಿ ಯ ಸಾಗುವಳಿವಗೇಣಿ ರೈತರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವಿ ಎಂ ನಾಗರಾಜು, ಚಂದ್ರೇಗೌಡ, ವೆಂಕಟೇಶ್, ಕೆಂಚೇಗೌಡ, ಶಿವಲಿಂಗಯ್ಯ, ಶಿವಮ್ಮ ಹಾಗೂ ಅನೇಕ ರೈತರು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑