Tel: 7676775624 | Mail: info@yellowandred.in

Language: EN KAN

    Follow us :


ಮಾತೃಭಾಷೆ ಗೆ ಒತ್ತು ಕೊಡಿ, ಸಿಇಓ ಮುಲ್ಲೈ ಮಹಿಲನ್

Posted date: 02 Mar, 2019

Powered by:     Yellow and Red

ಮಾತೃಭಾಷೆ ಗೆ ಒತ್ತು ಕೊಡಿ, ಸಿಇಓ ಮುಲ್ಲೈ ಮಹಿಲನ್

ಮಾತೃಭಾಷೆಗಿನ್ನ ದೊಡ್ಡ ಭಾಷೆ ಯಾವುದೂ ಇಲ್ಲ, ಸಾಧನೆಗೆ ಭಾಷೆಯ ಅವಶ್ಯಕತೆ ಇಲ್ಲ, ಇಂಗ್ಲಿಷ್ ಕಲಿತರೇ ಮಾತ್ರ ಸಾಧನೆ ಮಾಡಬಹುದು ಎಂಬ ಕ್ಷುಲ್ಲಕ ತನ ಬಿಡಬೇಕು, ಇಂದು ನಿಮಗೆ ಸಹಾಯ ಹಸ್ತ ಚಾಚಲು ಬಂದಿರುವ ಟೊಯೋಟಾ ಕಂಪೆನಿಯವರಿಗೆ ಜಪಾನ್ ಭಾಷೆ ಹೊರತು ಪಡಿಸಿ ಬೇರೆ ಯಾವ ಭಾಷೆಯು‌ ಬರುವುದಿಲ್ಲ, ಆದರೂ ಅವರು ಇಂದು ಜಗತ್ತಿನಾದ್ಯಂತ ತಮ್ಮ ಕಂಪೆನಿಗಳನ್ನು ತೆರೆದು ವಿಶ್ವಮಟ್ಟದಲ್ಲಿ ಖ್ಯಾತನಾಮರಾಗಿದ್ದಾರೆ ಎಂದು ರಾಮನಗರ ಜಿಲ್ಲಾ ಪಂಚಾಯತ್ ಸಿಇಓ ಮುಲ್ಲೈಮುಹಿಲನ್ ತಿಳಿಸಿದರು.


ಅವರು ನಗರದ ಎಲೆಕೇರಿ ಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳಿಗೆ ಟೊಯೋಟಾ ಕಂಪೆನಿಯವರು ನೀಡಿದ ಉಪಕರಣಗಳನ್ನು ಹಸ್ತಾಂತರಿಸಿ ಮಕ್ಕಳಿಗೆ ಹಿತವಚನ ನೀಡಿದರು.


ಮುಂದುವರಿದು ಮಾತನಾಡಿದ ಅವರು ವಿದೇಶಿಗರು ನಮ್ಮ ದೇಶದಲ್ಲಿ ಬಂಡವಾಳ ಹೂಡಿ ದೊಡ್ಡ ಪ್ರಮಾಣದ ವ್ಯವಹಾರ ನಡೆಸಿದಾಗ ಬಂದ ಲಾಭಾಂಶದ ಒಂದು ಭಾಗವನ್ನು ನಮ್ಮ ದೇಶದಲ್ಲಿನ ಸಮಾಜ ಸೇವೆಗೆ ಬಳಸುತ್ತಾರೆ, ಆ ಲಾಭಾಂಶದ ಸ್ವಲ್ಪ ಭಾಗ ಇಂದು ನಿಮಗೆ ದಕ್ಕಿದೆ, ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು.


ಟೊಯೋಟಾ ಕಂಪನಿಯ ಮುಖ್ಯ ವ್ಯವಸ್ಥಾಪಕರು ಮಾತನಾಡಿ ನಾವು ನಿಮಗೆ ಕೊಟ್ಟ ವಸ್ತುಗಳನ್ನು ಉಪಯೋಗಿಸಿಕೊಂಡು ಹೆಚ್ಚಿನ ವಿದ್ಯಾಭ್ಯಾಸ ಮಾಡಿ ನಿಮ್ಮ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಬೇಕು, ನೀವು ಶಾಲಾ ಅವಧಿಯಲ್ಲಿ ಶಿಸ್ತು, ಶ್ರದ್ಧೆ, ಛಲ ಮತ್ತು ಸಂಯಮವನ್ನು ರೂಢಿಸಿಕೊಂಡರೆ ನೀವು ಹೆಚ್ಚು ಸಾಧಿಸಲು ಅನುಕೂಲವಾಗುತ್ತದೆ, ಈ ನಿಟ್ಟಿನಲ್ಲಿ ನೀವು ಸಾಗಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.


ನಮ್ಮ ವಸತಿ ಶಾಲೆಗೆ ಉಪಕರಣಗಳನ್ನು ಟೊಯೋಟಾ ಕಂಪೆನಿಯವರು ನೀಡಲು ನೆರವಾದ ಸಿಇಓ ಮುಲ್ಲೈಮುಹಿಲನ್ ಮತ್ತು ಕಂಪೆನಿಯ ವ್ಯವಸ್ಥಾಪಕರಿಗೆ ಶಾಲೆಯ ಪ್ರಾಂಶುಪಾಲರಾದ ಜಯಲಕ್ಷ್ಮಿ ರವರು ಅಭಿನಂದಿಸಿದರು.


೧೦,ಡೆಲ್ ಕಂಪ್ಯೂಟರ್ ಡೆಸ್ಕ್ ಟಾಪ್, ೦೨ ಪ್ಪ್ರಿಂಟರ್, ಮೂರು ಕೆವಿ ವಿದ್ಯುತ್ ನ ೦೧ ಯುಪಿಎಸ್, ಒಂದು ಗಂಟೆಗೆ ೨೫೦ ಲೀ ನೀರನ್ನು ಶುದ್ದೀಕರಣ ಮಾಡುವ ವಾಟರ್ ಪ್ಯೂರಿಫೈರ್ ೦೧,  ನಾಲ್ಕು ಮಕ್ಕಳು ಕುಳಿತುಕೊಳ್ಳುವ ೫೦ ಡೆಸ್ಕ್ ಗಳು, ೧೦ ಕಂಪ್ಯೂಟರ್ ಟೇಬಲ್ ಗಳು ಮತ್ತು ೧೦ ಕಂಪ್ಯೂಟರ್ ಚೇರ್ ಗಳನ್ನು ನೀಡಲಾಯಿತು.


ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಎಸ್ ಸೀತಾರಾಮು, ಮಹದೇಶ್ವರ ನಗರದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ನಿಲಯ ಪಾಲಕ ಎನ್ ಮೋಹನ್, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಿಲಯ ಪಾಲಕ ಅರುಣಕುಮಾರ್ ಮತ್ತು ಸಹ ಶಿಕ್ಷಕರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑