ತಾಲ್ಲೂಕಿನಾದ್ಯಂತ ವಿಜೃಂಭಣೆಯಿಂದ ಆಚರಣೆಗೊಂಡ ಶಿವರಾತ್ರಿ
ಅಜ್ಞಾನದಿಂದ ಸು ಜ್ಞಾನ ದೆಡೆಗೆ ಸಾಗುವುದೇ ಶಿವರಾತ್ರಿ ಹಬ್ಬ, ಈ ಹಬ್ಬದ ದಿನದಂದು ಶಿವನ ಪ್ರತಿರೂಪದ ಎಲ್ಲಾ ದೇವಾಲಯಗಳಲ್ಲದೇ ಅನೇಕ ಬೇರೆಬೇರೆಯ ದೇವಾಲಯಗಳಲ್ಲೂ ಸಹ ವಿಶೇಷ ಪೂಜೆ ನಡೆಯುತ್ತದೆ, ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಆರಂಭಗೊಳ್ಳುವ ಪೂಜೆ ರಾತ್ರಿ ಪೂರಾ ಜಾಗರಣೆ ಮಾಡುವ ಭಕ್ತಾಧಿಗಳಿಗೆ ದೇವರ ಹಾಡು, ತತ್ವ ಪದ, ಜಾನಪದ ಗೀತೆಗಳು ಮತ್ತು ಭಜನೆಗಳ ರಸದೌತಣದೊಟ್ಟಿಗೆ ಮಾರನೆಯ ದಿನ ಮಂಗಳಾರತಿ ಮಾಡುವುದರೊಂದಿಗೆ ಮುಕ್ತಾಯಗೊಳ್ಳುತ್ತದೆ.
ನಗರದ ಮಳೂರು ಗ್ರಾಮದ ತೋಟವೊಂದರಲ್ಲಿ ಪ್ರತಿಷ್ಠಾಪನೆಗೊಂಡಿರುವ ಜಲಕಂಠೇಶ್ವರ ಹೆಸರಿನ ಲಿಂಗ ವೂ ಬಹಳ ವಿಶೇಷ ವಾದದ್ದು, ಈ ಲಿಂಗಕ್ಕೆ ಯಾವುದೇ ದೇವಸ್ಥಾನವಾಗಲಿ, ಕೊನೇಪಕ್ಷ ಮೇಲ್ಛಾವಣಿಯಾಗಲಿ ಇಲ್ಲ, ಮುಕ್ತವಾಗಿರುವ ಈ ಲಿಂಗಕ್ಕೆ ಭಕ್ತಾಧಿಗಳು ಪೂಜೆ ಸಲ್ಲಿಸಿ ಪುನೀತರಾದರು.
ಪಕ್ಕದಲ್ಲಿಯೇ ಇರುವ ಶ್ರೀ ಅರ್ಕೇಶ್ವರ ದೇವಾಲಯವೂ ಪುರಾತನ ಕಾಲದ ದೇವಸ್ಥಾನ ವಾಗಿದ್ದು ಭಕ್ತರು ದರ್ಶನಗೈದು ಪ್ರಸಾದ ಸ್ವೀಕರಿಸಿದರು.
ಕೋಟೆಯಲ್ಲಿ ಪ್ರತಿಷ್ಠಾಪನೆಗೊಂಡಿರುವ ಶ್ರೀ ಕಾಶಿ ವಿಶ್ವೇಶ್ವರ ದೇವಾಲಯವೂ ಸಹ ಪುರಾತನ ಇತಿಹಾಸ ಹೊಂದಿದ್ದು ಶ್ರೀ ಸ್ವಾಮಿಯ ವಿಗ್ರಹವನ್ನು ಕಾಶಿಯಿಂದಲೇ ತಂದು ಪ್ರತಿಷಪನೆ ಮಾಡಿರುವುದು ವಿಶೇಷ, ನಂಬಿ ಬಂದವರ ಕೈ ಬಿಡದ ಕಾಶಿ ವಿಶ್ವೇಶ್ವರ ಸ್ವಾಮಿ ಗೆ ಬೆಳಿಗ್ಗೆಯಿಂದ ರಾತ್ರಿವರೆಗೂ ಸಹಸ್ರಾರು ಭಕ್ತರು ಸಾಲಿನಲ್ಲಿ ನಿಂತು ದರ್ಶಿಸಿ ಪ್ರಸಾದ ಸ್ವೀಕರಿಸಿದರು.
ಮಹಾತ್ಮ ಗಾಂಧಿ ರಸ್ತೆಯ ಡೂಂ ಲೈಟ್ ಸರ್ಕಲ್ ನಲ್ಲಿರುವ ನೀಲಕಂಠೇಶ್ವರ ಸ್ವಾಮಿ ಕಣ್ವ ಕ್ಷೇತ್ರ ಎಂದೇ ಪ್ರಸಿದ್ಧ, ಈ ಸನ್ನಿಧಾನಕ್ಕೆ ಐದುಸಾವಿರ ವರ್ಷಗಳ ಇತಿಹಾಸ ಹಾಗೂ ದೇವಾಲಯದ ಕಟ್ಟಡಕ್ಕೆ ೧,೩೦೦ ವರ್ಷಗಳ ಇತಿಹಾಸವಿದೆ, ಈ ದೇವಸ್ಥಾನಕ್ಕೆ ಕಣ್ವ ಮಹರ್ಷಿಗಳು ನಿತ್ಯಾರಾಧನೆಗೆ ಬರುತ್ತಿದ್ದರು ಎಂಬ ಪ್ರತೀತಿ ಇದೆ ಎಂದು ಅರ್ಚಕ ರವೀಂದ್ರ ದೀಕ್ಷಿತ್ ಹೇಳುತ್ತಾರೆ, ಈ ದೇವಾಲಯಕ್ಕೂ ಸಹ ಭಕ್ತಾಧಿಗಳು ಸರತಿ ಸಾಲಿನಲ್ಲಿ ನಿಂತು ದರ್ಶನ ಮಾಡಿದರು.
ನಗರದ ಹೃದಯ ಭಾಗದಲ್ಲಿರುವ ಕೊಲ್ಲಾಪುರದಮ್ಮನ ದೇವಾಲಯದಲ್ಲಿ ಅನೇಕ ರೀತಿಯ ದೇವರ ವಿಗ್ರಹಗಳನ್ನು ತಾತ್ಕಾಲಿಕವಾಗಿ ಪ್ರತಿಷ್ಠಾಪಿಸಿದರು, ನಗರದ ಹೊರವಲಯದಲ್ಲಿನ ಮಹದೇಶ್ವರ ದೇವಸ್ಥಾನದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿಕೊಂಡಿರುವ ಜಾಗದಲ್ಲೇ ಮೂರ್ತಿಗೆ ಅಲಂಕರಿಸಿ ಪೂಜಿಸಿದರು, ಭಕ್ತಾದಿಗಳು ಪ್ರಸಾದ ಹಂಚುವ ಮೂಲಕ ತಮ್ಮ ಭಕ್ತಿ ಮೆರೆದರು.
ಶಿವಪ್ಪನ ಮಠ ಮತ್ತು ಕೂಡ್ಲೂರು ಗ್ರಾಮದ ಮಂಗಳೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಪೂಜಿಸಿ ಭಕ್ತರು ಕೃತಾರ್ಥರಾದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು