Tel: 7676775624 | Mail: info@yellowandred.in

Language: EN KAN

    Follow us :


ಜೀವನದಲ್ಲಿ ಸುಖ ದುಃಖ ಎರಡನ್ನೂ ಸಮನಾಗಿ ಸ್ವೀಕರಿಸಿ ಶ್ರೀ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ

Posted date: 05 Mar, 2019

Powered by:     Yellow and Red

ಜೀವನದಲ್ಲಿ ಸುಖ ದುಃಖ ಎರಡನ್ನೂ ಸಮನಾಗಿ ಸ್ವೀಕರಿಸಿ ಶ್ರೀ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ

ಜೀವನದಲ್ಲಿ ಸುಖ ದುಃಖ ಸರಸ ವಿರಸ ಸಮಾನವಾಗಿ ಸ್ವೀಕರಿಸಬೇಕು ಏನೇ ಆದರೂ ಹೊಂದಿಕೊಂಡು ಹೋಗಬೇಕು ಧಾರ್ಮಿಕತೆಯಲ್ಲಿ ನಂಬಿಕೆ ಉಳಿಸಿಕೊಂಡು ಜೀವನದಲ್ಲಿ ಪರಿಪಕ್ವತೆಯನ್ನು ಕಾಪಾಡಿಕೊಂಡು ಸುಖ ಸಂಸಾರವನ್ನು ಸಾಗಿಸಬೇಕು ಎಂದು ಶ್ರೀ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿಗಳು ಆಶೀರ್ವದಿಸಿದರು 


ಅವರು ಕನಕಪುರ ತಾಲ್ಲೂಕಿನ ಶಿವಗಿರಿ ಕ್ಷೇತ್ರದಲ್ಲಿ (ಶ್ರೀ ಶಿವಾಲ್ದಪ್ಪ ಬೆಟ್ಟ) ಶಿವರಾತ್ರಿ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹದಲ್ಲಿ ವಧುವಿಗೆ ಚಿನ್ನದ ಗುಂಡು ಚಿನ್ನದ ತಾಳಿ ಮೂಗುತಿ  ಕಾಲುಂಗುರ ಮತ್ತು  ಸೀರೆ ಕುಪ್ಪಸ ಮತ್ತು ವರನಿಗೆ ಅಂಗಿ ಪಂಚೆ ಹಾಗೂ ಪ್ರತಿ ಜೋಡಿಗೆ ಒಂದೊಂದು ತೆಂಗಿನ ಸಸಿಗಳನ್ನು ವಿತರಿಸಿ ಆಶೀರ್ವದಿಸಿದರು.


ಕನಕಪುರ ದೇಗುಲ ಮಠದ ಶ್ರೀ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಮಾತನಾಡಿ ಕಲ್ಲು ದೇವರು ದೇವರಲ್ಲ ಹೆಣ್ಣು ದೇವರು ದೇವರಲ್ಲ ನಿಮ್ಮ ಆತ್ಮವೇ ಗುಡಿ ಕಾಣಿರಯ್ಯ, ಎಂಬಂತೆ ತಾವು ವಾಸಿಸುವ ಮನೆಯನ್ನೇ ದೇಗುಲವೆಂದು, ತಂದೆ ತಾಯಿ ಅತ್ತೆ ಮಾವ ಅವರನ್ನೇ ದೇವರೆಂದು, ನಂಬಿ  ದಾಂಪತ್ಯ ಜೀವನವನ್ನು ಸುಖಮಯವಾಗಿ ನಡೆಸಿಕೊಂಡು ಮುಂದಿನ ಪೀಳಿಗೆಗೆ ಉತ್ತಮ ಪ್ರಜೆಗಳನ್ನು ನೀಡಬೇಕು ಎಂದು ಆಶೀರ್ವದಿಸಿದರು. 


ಮತ್ತೊಬ್ಬ ಸಂತ ಮರಳೇಗವಿ ಮಠದ ಶ್ರೀ ಶ್ರೀ ಮುಮ್ಮಡಿ ಶಿವರುದ್ರ ಮಹಾಸ್ವಾಮಿಗಳವರು ಮಾತನಾಡಿ ಪ್ರತಿಯೊಬ್ಬ ನಾಗರಿಕರು ಸರಳವಾಗಿ ಬದುಕುವುದನ್ನು ಕಲಿತುಕೊಳ್ಳಬೇಕು ಸಾಮೂಹಿಕ ಮದುವೆಗಳನ್ನು ಮಾಡಿಕೊಂಡರೆ ಸಂಪೂರ್ಣ ಖರ್ಚು ವೆಚ್ಚಗಳನ್ನು ಉಳಿಸುವುದರ ಜೊತೆಗೆ ದುಂದುವೆಚ್ಚ ಮಾಡುವ ಅಂಧರಿಗೆ ಮಾರ್ಗದರ್ಶಿಗಳಾಗಬಹುದು, ಈ ನಿಟ್ಟಿನಲ್ಲಿ ಶ್ರೀ ಶ್ರೀ ಅನ್ನದಾನೇಶ್ವರನಾಥ ಸ್ವಾಮಿಗಳವರು ಶಿವಗಿರಿ ಕ್ಷೇತ್ರದಲ್ಲಿ ಗಿರಿಜಾ ಕಲ್ಯಾಣ ಮಂಟಪವನ್ನು ನಿರ್ಮಿಸಿ ಈ ರೀತಿಯ ಕಾರ್ಯಗಳನ್ನು ಮಾಡುತ್ತಿರುವುದು ನಿಜಕ್ಕೂ ಧಾರ್ಮಿಕ ಕ್ಷೇತ್ರದಲ್ಲಿ ಒಂದು ಮೈಲಿಗಲ್ಲಾಗಿ ಉಳಿದುಕೊಳ್ಳಲು ಸಹಕಾರಿಯಾಗಿದೆ ಎಂದು ಶ್ರೀ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿಗಳು ಮತ್ತು ಶಿವಗಿರಿ ಕ್ಷೇತ್ರ ಸಮಿತಿಯ ಪದಾಧಿಕಾರಿಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. 


ಇದೇ ವೇಳೆ ರಾಮನಗರ ಜಿಲ್ಲಾಧಿಕಾರಿಯಾದ ಕ್ಯಾಪ್ಟನ್ ರಾಜೇಂದ್ರ ಅವರನ್ನು ಚನ್ನಪಟ್ಟಣ ತಾಲ್ಲೂಕಿನ ಗೇಣಿದಾರರು ಮತ್ತು ಸಾಗುವಳಿ ರೈತರಿಗೆ ಕೆಲವೇ ತಿಂಗಳುಗಳಲ್ಲಿ ಸಾಗುವಳಿ ಚೀಟಿ ನೀಡಿದ್ದಕ್ಕಾಗಿ ರೈತರ  ಪರವಾಗಿ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಇದೇ ವೇಳೆ ಶ್ರೀ ಶ್ರೀ ಶ್ರೀ ಡಾಕ್ಟರ್ ಬಾಲಗಂಗಾಧರನಾಥ ಮಹಾ ಸ್ವಾಮೀಜಿಗಳವರ ಎಪ್ಪತ್ನಾಲ್ಕನೇ ಜಯಂತ್ಯುತ್ಸವದ ಅಂಗವಾಗಿ ಶ್ರೀ ಗುರುನಮನ ಮತ್ತು ಸಾಧಕರಿಗೆ ಸನ್ಮಾನವನ್ನೂ ಏರ್ಪಡಿಸಲಾಗಿತ್ತು.


ಸಂಜೆ ವೇಳೆಗೆ ತಮ್ಮ ತಂದೆ ತಾಯಿಯ ಹೆಸರಿನಲ್ಲಿ ಶಿವಗಿರಿ ಕ್ಷೇತ್ರಕ್ಕೆ ನೂತನವಾಗಿ ನಿರ್ಮಿಸಿಕೊಟ್ಟಿರುವ ರಥವನ್ನು  ಎಳೆಯುವ ಮೂಲಕ ಸಂಸದ ಡಿಕೆ ಸುರೇಶ್ ಅವರು ರಥೋತ್ಸವಕ್ಕೆ ಚಾಲನೆ ನೀಡಿದರು ನಂತರ ಮಾತನಾಡಿದ ಅವರು ನಾನು ಮತ್ತು ನನ್ನ ಅಣ್ಣ ಶಿವಕುಮಾರ್ ಅವರು ಆಡಿ ಬೆಳೆದ ಈ ಬೆಟ್ಟಕ್ಕೆ ಚಿರಋುಣಿಯಾಗಿದ್ದೇವೆ ಇಂತಹ ಧಾರ್ಮಿಕ ಕ್ಷೇತ್ರದ ಅಭಿವೃದ್ಧಿಗೆ ನಾವು ಯಾವಾಗಲೂ ಬದ್ಧ ಎಂದು ತಿಳಿಸಿದರು.


ಇದೇ ವೇಳೆ ಹುಲಿ ವಾಹನ ಮತ್ತು ಪಲ್ಲಕ್ಕಿ ಉತ್ಸವವನ್ನು ಭಕ್ತರು ವಿಜೃಂಭಣೆಯಿಂದ ಆಚರಿಸಿದರು. ಬೆಳಗಿನ ಜಾವ ಐದು ಗಂಟೆಗೆ ಶ್ರೀ ಕ್ಷೇತ್ರದಲ್ಲಿ ಕೊಂಡೋತ್ಸವ ನೆರವೇರಿತು.


ಸಂಜೆಯ ನಂತರ ರಾಮನಗರದ ಬಿಜಿಎಸ್ ವರ್ಲ್ಡ್ ಸ್ಕೂಲ್‌ ಮತ್ತು ಇನ್ನಿತರ ಶಾಲಾ  ಮಕ್ಕಳು ಚಿಣ್ಣರ ಮೇಳ ಕಾರ್ಯಕ್ರಮದಲ್ಲಿ ನಾಟಕ, ಸಂಗೀತ ಮತ್ತು ನೃತ್ಯೋತ್ಸವವನ್ನು ನಡೆಸಿಕೊಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಮನಗರ ವತಿಯಿಂದ ಅಹೋರಾತ್ರಿ ಜಾಗರಣೆ ಕಾರ್ಯಕ್ರಮಗಳನ್ನು ಹರಿಕಥೆ ವಿದ್ವಾನ್ ಶ್ರೀಮತಿ ರಮಾಬಾಯಿ ಮತ್ತು ತಂಡದವರು ಹಾಗೂ ಭಜನಾ ಮಂಡಳಿಯವರು ನಡೆಸಿಕೊಟ್ಟರು. 


ವೇದಿಕೆಯಲ್ಲಿ ರಾಮನಗರ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ ರಾಜೇಂದ್ರ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ ರಾಜು, ರೈತ ಮುಖಂಡ ಶ್ರೀ ಪುಟ್ಟಸ್ವಾಮಿ, ಉಪನ್ಯಾಸಕ ಕಬ್ಬಾಳೇಗೌಡ, ಸಮಾಜಸೇವಕಿ ಜಯಮ್ಮ, ಹಾಗೂ ಕನಕಪುರ ತಾಲ್ಲೂಕಿನ ಸ್ಥಳೀಯ ಮುಖಂಡರು, ಸ್ಥಳೀಯ ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಸದಸ್ಯರು ಹಾಜರಿದ್ದರು. ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ಶ್ರೀ ಶಿವಗಿರಿ ಕ್ಷೇತ್ರ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತಾದಿಗಳು ನೆರವೇರಿಸಿಕೊಟ್ಟರು. ವೇದಿಕೆಯ ಕಾರ್ಯಕ್ರಮವನ್ನು ರಾಮನಗರ ನವೀನ್ ನಿರೂಪಿಸಿ ವಂದಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.



ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑