ಯಾವುದೇ ಅಡ್ಡಿ ಇಲ್ಲದೆ ಪಿಯುಸಿ ಪರೀಕ್ಷೆ, ಸೋಮವಾರ ಕೊನೇದಿನ
ರಾಜ್ಯಾದ್ಯಂತ ಇದೇ ತಿಂಗಳ ಒಂದನೇ ತಾರೀಖಿನಿಂದ ಪದವಿ ಪೂರ್ವ ಪರೀಕ್ಷೆಗಳು ನಡೆಯುತ್ತಿದ್ದು ಸೋಮವಾರ ಕೊನೆಗೊಳ್ಳಲಿದೆ.
ಹಲವಾರು ಭಾಷೆಗಳನ್ನೊಳಗೊಂಡ ಮೂವತ್ತೇಳು ವಿಷಯಗಳ ಪರೀಕ್ಷೆ ಗಳು ನಗರದ ಮೂರು ಪ್ರತಿಷ್ಠಿತ ಕಾಲೇಜುಗಳಾದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಮತ್ತು ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದಲ್ಲಿ ಬೆಳಿಗ್ಗೆ ೧೦:೧೫ ರಿಂದ ಮಧ್ಯಾಹ್ನ ೦೧:೩೦ ರ ಸಮಯದಲ್ಲಿ ನಡೆಯುತ್ತಿದ್ದು ಮಕ್ಕಳಿಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಿ ಸೂಕ್ತ ಬಂದೋಬಸ್ತ್ ನ್ನು ಏರ್ಪಡಿಸಿಲಾಗಿದೆ.
ಈ ದಿನದ ಕನ್ನಡ ವಿಷಯ ಪತ್ರಿಕೆ ಪರೀಕ್ಷೆ ನಡೆಯುತ್ತಿದ್ದು ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಜ್ಞಾನ ಸರೋವರ ಕಾಲೇಜು, ಸೇಂಟ್ ಆನ್ಸ್ ಕಾಲೇಜು, ಆಕ್ಸ್ಫರ್ಡ್ ಕಾಲೇಜು ಮತ್ತು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಒಟ್ಟು ೬೭೯ ಮಕ್ಕಳು ನೊಂದಾಯಿಸಿಕೊಂಡಿದ್ದು ೧೭ ಮಕ್ಕಳು ಗೈರುಹಾಜರಿಯಾಗಿ ೬೬೨ ಮಕ್ಕಳು ಇಂದು ಪರೀಕ್ಷೆ ಬರೆದರು.
ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಚನ್ನಾಂಬಿಕ ಕಾಲೇಜು, ಕೇಂಬ್ರಿಡ್ಜ್ ಕಾಲೇಜು ಆಲ್-ಅಮೀನ್ ಕಾಲೇಜು ಹೆಚ್ ಕೆ ವೀರಣ್ಣಗೌಡ ಕಾಲೇಜು, ಸೇಂಟ್ ಜೋಸೆಫ್ ಕಾಲೇಜು ಮತ್ತು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಒಟ್ಟು ೭೭೧ ಮಕ್ಕಳು ಪರೀಕ್ಷೆ ತೆಗೆದುಕೊಂಡಿದ್ದು ೪೦ ಮಕ್ಕಳು ಗೈರು ಹಾಜರಿದ್ದು ೭೩೧ ಮಕ್ಕಳು ಪರೀಕ್ಷೆ ಬರೆದರು.
ಒಕ್ಕಲಿಗರ ಸಾರ್ವಜನಿಕರ ವಿದ್ಯಾರ್ಥಿ ನಿಲಯದಲ್ಲಿ ಅತಿ ಹೆಚ್ಚು ಅಂದರೆ ಹನ್ನೆರಡು ಕಾಲೇಜುಗಳಾದ ಮಾಕಳಿ, ನಾಗವಾರ, ಮೈಲನಾಯಕನಹಳ್ಳಿ, ಮತ್ತಿಕೆರೆ ಶೆಟ್ಟಿಹಳ್ಳಿ, ಇಗ್ಗಲೂರು, ಜೆ ಬ್ಯಾಡರಹಳ್ಳಿ, ಅರಳಾಳುಸಂದ್ರ, ಕೋಡಂಬಳ್ಳಿ, ಅನುಸೂಯಮ್ಮ ನಂಜಪ್ಪ ಮತ್ತು ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಒಟ್ಟು ೫೬೧ ಮಕ್ಕಳು ಪರೀಕ್ಷೆ ತೆಗೆದುಕೊಂಡಿದ್ದು ೬೦ ಮಕ್ಕಳು ಗೈರುಹಾಜರಿಯಾಗಿದ್ದು ೫೦೧ ಮಕ್ಕಳು ಇಂದು ಪರೀಕ್ಷೆ ಬರೆದರು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮೂಲಸೌಕರ್ಯಗಳ ಜೊತೆಗೆ ಅನೇಕ ಇಲಾಖೆಯ ಅಧಿಕಾರಿಗಳು ಪರಿಶೀಲನಾಧಿಕಾರಿಗಳಾಗಿ, ಮೂವತ್ತು ಮಕ್ಕಳಿಗೆ ಒಬ್ಬ ಸಿಬ್ಬಂದಿ ನಿಯೋಜನೆಗೊಳಿಸುವುದರ ಜೊತೆಗೆ ಸೂಕ್ತ ಪೋಲಿಸ್ ಬಂದೋಬಸ್ತ್ ಏರ್ಪಡಿಸಿದ್ದರಿಂದ ಇದುವರೆಗೂ ಯಾವುದೇ ಲೋಪದೋಷಗಳಿಲ್ಲದೇ ನಕಲು ಮಾಡಲು ಅವಕಾಶ ಇಲ್ಲದ್ದರಿಂದ ಡಿಬಾರ್ ಸಹ ಆಗದೆ ಸುಸೂತ್ರವಾಗಿ ನಡೆಯಲು ಶಿಕ್ಷಣ ಇಲಾಖೆಯು ಮುನ್ನೆಚ್ಚರಿಕೆ ಕ್ರಮ ಶ್ಲಾಘನೀಯ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು