Tel: 7676775624 | Mail: info@yellowandred.in

Language: EN KAN

    Follow us :


ದೇಶದ ಬಹುದೊಡ್ಡ ಹಬ್ಬದಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಿ ಜಿ ಪಂ ಸಿಇಓ

Posted date: 21 Mar, 2019

Powered by:     Yellow and Red

ದೇಶದ ಬಹುದೊಡ್ಡ ಹಬ್ಬದಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಿ ಜಿ ಪಂ ಸಿಇಓ

ಜಗತ್ತಿನ ಬಹುದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ದೇಶದ ಚುನಾವಣಾ ಹಬ್ಬದಲ್ಲಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿ ಪ್ರಜಾಪ್ರಭುತ್ವವವನ್ನು ಉಳಿಸುವಲ್ಲಿ ಸಕ್ರಿಯ ಪಾತ್ರವಹಿಸಬೇಕೆಂದು ರಾಮನಗರ ಜಿಲ್ಲಾ ಪಂಚಾಯತ ಸಿಇಓ ಮುಲ್ಲೈಮುಹಿಲನ್ ಕರೆ ನೀಡಿದರು.


ಅವರು ಇಂದು ಬೆಳಿಗ್ಗೆ ನಗರದ ಕೊಲ್ಲಾಪುರದಮ್ಮ ದೇವಾಲಯದ ಆವರಣದಲ್ಲಿ ಮತದಾನ ಜಾಗೃತಿಗಾಗಿ ಹಮ್ಮಿಕೊಂಡಿದ್ದ ಜೋಡೆತ್ತಿನ ಬಂಡಿಗಳ ಜಾಥಾ ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಚುನಾವಣೆಯಲ್ಲಿ ಗೆಲ್ಲುವುದಕ್ಕೋಷ್ಕರ ಹಣ ಮತ್ತು ಇನ್ನಿತರ ವಸ್ತುಗಳನ್ನು ಹಂಚುವುದು ಮತ್ತು ತೆಗೆದುಕೊಳ್ಳುವುದು ಎರಡೂ ಅಪರಾಧವಾಗುತ್ತದೆ, ಕೊಟ್ಟವರು ಮತ್ತು ಪಡೆದವರಿಬ್ಬರಿಗೂ ದಂಡ ಮತ್ತು ಜೈಲು ಎರಡೂ ಕಟ್ಟಿಟ್ಟ ಬುತ್ತಿ, ಇದನ್ನು ಅರಿತು ಪ್ರಜಾಪ್ರಭುತ್ವ ಉಳಿಸಲೋಸುಗ ಪ್ರಾಮಾಣಿಕವಾಗಿ ನಡೆದುಕೊಳ್ಳಿ, cVIGIL ಎಂಬ ಆ್ಯಪ್ ಬಿಡುಗಡೆ ಮಾಡಿದ್ದು ಇದನ್ನು ಎಲ್ಲರು


ಡೌನ್‌ಲೋಡ್ ಮಾಡಿಕೊಂಡು ಎಲ್ಲಿ ಯಾವ ರೀತಿ ಅಕ್ರಮ ಕಂಡರೂ ಪೋಟೋ ತೆಗೆದು ಕಳುಹಿಸಿದರೆ ೧೦೦ ನಿಮಿಷಗಳಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.


ರಾಮನಗರ ಜಿಲ್ಲೆಯ ಐಕಾನ್ ಆಗಿ ನೇಮಕವಾಗಿರುವ ಭಾರತೀಯ ಅಂಧರ ಕ್ರಿಕೆಟ್ ನ ಉಪಾಧ್ಯಕ್ಷ ಚನ್ನಪಟ್ಟಣದ ಪ್ರಕಾಶ್ ಜಯರಾಮಯ್ಯ ಮಾತನಾಡಿ ಮತ ಎನ್ನುವುದು ಕೇವಲ ಒಂದು ಮತವಲ್ಲ, ದೇಶದ ವ್ಯವಸ್ಥೆಯನ್ನು ಸುಭದ್ರಗೊಳಿಸುವ ಆ ಮತವನ್ನು ಹಣ ಮತ್ತು ಹೆಂಡಕ್ಕಾಗಿ ಮಾರಿಕೊಳ್ಳದೆ ಪ್ರಜಾಪ್ರಭುತ್ವದ ಉಳಿವಿಗಾಗಿ ತಪ್ಪದೇ ಮತ ಚಲಾಯಿಸಬೇಕೆಂದರು.


ಕಲಾವಿದರು ಮತದಾನ ಜಾಗೃತಿಯ ಗೀತೆಗಳನ್ನು ಹಾಡಿದರು, ವಿದ್ಯಾರ್ಥಿನಿಯರು ಮತದಾನದ ಅರಿವು ಮೂಡಿಸುವ ಫಲಕಗಳನ್ನು ಹಿಡಿದು ಅರಿವು ಮೂಡಿಸಿದರೆ, ಹದಿನೈದಕ್ಕೂ ಹೆಚ್ಚು ಜೋಡೆತ್ತಿನ ಬಂಡಿಗಳು ಸಾಲುಸಾಲಾಗಿ ಎಂಜಿ ರಸ್ತೆ, ಡಿ ಟಿ ರಾಮು ಸರ್ಕಲ್, ಹಳೆ ಕೋಟ್೯, ಸಾತನೂರು ಸರ್ಕಲ್, ಹೆದ್ದಾರಿ ಯ ಮೂಲಕ ಹಾದು ಗಾಂಧಿಭವನ, ಜೆಸಿ ರಸ್ತೆಯ ತನಕ ಜಾಥಾ ನಡೆಸುವ ಮೂಲಕ ಜಾಗೃತಿ ಮೂಡಿಸಲಾಯಿತು.


ಜಾಥಾದಲ್ಲಿ ಜಿಲ್ಲಾ ಕೃಷಿ ಅಧಿಕಾರಿ ಅಶೋಕ, ಸಹಾಯಕ ಚುನಾವಣಾಧಿಕಾರಿ ಡಾ ಯತೀಶ್ ಉಲ್ಲಾಳ, ತಹಶಿಲ್ದಾರ್ ಶಿವಕುಮಾರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ರಾಮಕೃಷ್ಣ, ಬಿಇಓ ಸೀತರಾಮು, ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ ಜಯರಾಮು, ನೋಡಲ್ ಅಧಿಕಾರಿ ಶರೀಫ್ ಸೇರಿದಂತೆ ಅನೇಕ ಅಧಿಕಾರಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑