ಮತದಾನ ಕುಸಿತ ತಪ್ಪಿಸಲು ತಪ್ಪದೇ ಮತ ಚಲಾಯಿಸಿ ರಾಮಕೃಷ್ಣ
ವಿಧಾನಸಭೆ ಯಲ್ಲಿ ಶೇಕಡಾ ೮೫ ರಿಂದ ೯೦ ರಷ್ಟು ಮತದಾನವಾದರೆ ಲೋಕಸಭಾ ಚುನಾವಣೆಯಲ್ಲಿ ಶೇಕಡಾ ೫೨ ರಿಂದ ೬೦ ಕ್ಕೆ ಕುಸಿಯುತ್ತಿದೆ, ಪ್ರಜ್ಞಾವಂತ ಮತದಾರರು ತಪ್ಪದೇ ಮತ ಚಲಾಯಿಸುವ ಮೂಲಕ ಹಾಗೂ ನಿರಾಸಕ್ತಿ ಹೊಂದಿದ ಮತದಾರರನ್ನು ತಿಳಿ ಹೇಳಿ ಮನವೊಲಿಸುವ ಮೂಲಕ ಹೆಚ್ಚು ಮಂದಿ ಮತದಾನ ಮಾಡುವಂತೆ ಉತ್ಸಾಹಿ ಯುವಕರು ಮತ್ತು ವಿದ್ಯಾರ್ಥಿಗಳು ಪ್ರೇರೇಪಿಸಬೇಕು ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಮಕೃಷ್ಣ ತಿಳಿಸಿದರು.
ಅವರು ನಗರದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾನ ಕುರಿತು ಜಾಗೃತಿ ಮೂಡಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ದೊಡ್ಡದು ಎಂಬುದರ ಕುರಿತು ಮಾತನಾಡಿದರು.
ಎಷ್ಟೋ ಅಭ್ಯರ್ಥಿಗಳು ಒಂದು ಮತಗಳ ಮೂಲಕ ಗೆದ್ದರೆ ಅದೇ ಅಂತರದಿಂದ ಕೆಲವರು ಸೋತಿದ್ದಾರೆ, ಈ ಅಂತರ ಹೆಚ್ಚಾಗಬೇಕೆಂದರೆ ಮತದಾನವೂ ಸಹ ಶೇಕಡವಾರು ಹೆಚ್ಚಾಗಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಎಸ್ ಸೀತಾರಾಮು ರವರು ಭಾರತದ ಪ್ರಜೆಗಳಾದ ನಾವು ಪ್ರಜಾಪ್ರಭುತ್ವ ಉಳಿಸಲೋಸುಗ ಯಾವುದೇ ಆಮಿಷಕ್ಕೆ ಒಳಗಾಗದೇ, ನಿರಾಸಕ್ತಿ ತೋರದೆ, ವಂಚಿತ ಮತದಾರರನ್ನು ಮತದಾನ ಮಾಡಿಸುವ ಮೂಲಕ ಮತದಾನದಲ್ಲಿ ಪಾಲ್ಗೊಳ್ಳುತ್ತೇವೆ ಎಂಬ ಪ್ರತಿಜ್ಞಾವಿಧಿ ಬೋಧಿಸಿದರು.
ಸಹಾಯಕ ಚುನಾವಣಾಧಿಕಾರಿ ಡಾ ಯತೀಶ್ ಉಲ್ಲಾಳ ಕಾಲ್ನಡಿಗೆ ಜಾಥಾ ಕ್ಕೆ ಚಾಲನೆ ನೀಡಿ ಮಾತನಾಡುತ್ತಾ ದೇಶದ ೫೪೩ ರಾಜ್ಯದ ೨೮ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು ಈ ಕ್ಷೇತ್ರದಲ್ಲಿ ೨,೦೦೦ ಕ್ಕೂ ಹೆಚ್ಚು ಹೊಸ ಮತದಾರರಿದ್ದು ತಾವುಗಳೆಲ್ಲರೂ ಉತ್ಸಾಹದಿಂದ ಪಾಲ್ಗೊಂಡು ಮತ ಚಲಾಯಿಸಬೇಕೆಂದು ಕರೆ ನೀಡಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂರಕ್ಕೂ ಹೆಚ್ಚು ಮಕ್ಕಳು, ಕಾಲೇಜಿನ ಪ್ರಾಂಶುಪಾಲ ಡಾ ವೆಂಕಟೇಶ್, ಪ್ರಾಚಾರ್ಯ ಡಾ ಮಧುಸೂದನಚಾರ್ಯಜೋಷಿ, ಪಶು ಇಲಾಖೆಯ ಸಹಾಯಕ ಡಾ ಜಯರಾಮು, ಶಿಕ್ಷಕ ವಸಂತಕುಮಾರ, ನಗರಸಭೆಯ ರಜತ್ ಸೇರಿದಂತೆ ಅನೇಕರು ಕಾಲ್ನಡಿಗೆ ಜಾಥಾದಲ್ಲಿ ಪಾಲ್ಗೊಂಡು ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಕಾಲ್ನಡಿಗೆ ಜಾಥಾ ಕಾಲೇಜು ಆವರಣದಿಂದ ಹೆದ್ದಾರಿ, ಹೊಸ ನ್ಯಾಯಾಲಯ, ಕೋಟೆಯ ವರದರಾಜ ಸ್ವಾಮಿ ದೇವಾಲಯ, ಜೆಸಿ ರಸ್ತೆ ಮೂಲಕ ಕಾಲೇಜು ಆವರಣ ತಲುಪಿತು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು