Tel: 7676775624 | Mail: info@yellowandred.in

Language: EN KAN

    Follow us :


ಮೂಲ ಜಾನಪದ ಉಳಿಯಲು ಮೂಲ ಪರಿಕರಗಳನ್ನೇ ಬಳಸಬೇಕು ಗೋ ರಾ ಶ್ರೀನಿವಾಸ

Posted date: 27 Mar, 2019

Powered by:     Yellow and Red

ಮೂಲ ಜಾನಪದ ಉಳಿಯಲು ಮೂಲ ಪರಿಕರಗಳನ್ನೇ ಬಳಸಬೇಕು ಗೋ ರಾ ಶ್ರೀನಿವಾಸ

ಇಂದಿನ ಎಲೆಕ್ಟ್ರಾನಿಕ್ ವಾದ್ಯ ಪರಿಕರಗಳು ಮತ್ತು ಆಧುನಿಕತೆ ಬೆಳೆಸಿಕೊಂಡ ಇಂದಿನ ಜಾನಪದ ಹಾಡುಗಾರರಿಂದ ಮೂಲ ಜಾನಪದ ನಶಿಸಿ ಹೋಗುತ್ತಿದೆ, ಮೂಲ ಜಾನಪದ ಕೇವಲ ಗೀತೆಯಾಗಿರದೇ ಅದೊಂದು ಜೀವನದ ಪಾಠವಾಗಿತ್ತು, ಅದನ್ನು ಉಳಿಸಿ ಬೆಳೆಸಲು ಇಂದಿನ ಪೀಳಿಗೆ ಮುಂದಾಗಬೇಕು ಎಂದು ಬಯಲುಸೀಮೆ ಸಂಜೆ ದಿನ ಪತ್ರಿಕೆಯ ವರದಿಗಾರರಾದ ಗೋ ರಾ ಶ್ರೀನಿವಾಸ ಅಭಿಪ್ರಾಯ ಪಟ್ಟರು.


ಅವರು ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ತರಂಗ ಜಾನಪದ ಟ್ರಸ್ಟ್ ಹಮ್ಮಿಕೊಂಡಿದ್ದ ತಂಬೂರಿ ಪದ ಹಾಗೂ ಮೂಲ ಜಾನಪದ ಹಾಡುಗಾರಿಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಮುಂದುವರಿದು ಮಾತನಾಡಿದ ಅವರು ಅಂದಿನ ಬಹುತೇಕ ಎಲ್ಲಾ ವಾದ್ಯ ಪರಿಕರಗಳು ಸ್ಥಳೀಯರೇ ತಯಾರಿಸುವುದರ ಜೊತೆಗೆ ಸ್ವತಃ ನುಡಿಸುವಂತವಾಗಿದ್ದವು, ಆದರೆ ಇಂದಿನ ದಿನಗಳಲ್ಲಿ ಬಹುತೇಕ ಎಲ್ಲಾ ವಾದ್ಯಗಳು ಎಲೆಕ್ಟ್ರಾನಿಕ್ ಪರಿಕರಗಳಾಗಿದ್ದು ಮೂಲ ಜಾನಪದ ಸೊಗಡನ್ನು ಅಳಿಸುವಲ್ಲಿ ಪರಿಕರಗಳು ಮತ್ತು ಇಂದಿನ ಯುವ ಜನತೆಯೂ ಪಾಲ್ಗೊಂಡಿರುವುದು ಅತ್ಯಂತ ನೋವಿನ ಸಂಗತಿ ಎಂದು ವಿಷಾದಿಸಿದರು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಾಹಿತಿ ಡಿ ರಾಜಶೇಖರ ರವರು ಜೀವ ನಮ್ಮ ಮಾತನ್ಮು ಕೇಳುವುದಿಲ್ಲ, ಜೀವನ ನಮ್ಮ ಮಾತು ಕೇಳುತ್ತದೆ, ಅದೇ ರೀತಿ ಕಲಾವಿದರಾದವರಿಗೆ ಹಣದ ಕೊರತೆ ಬಂದರು ಬರಲಿ ಗುಣ ಮತ್ತು ಜಾನಪದ ಶೈಲಿ ಮಾತ್ರ ಕಡಿಮೆಯಾಗಬಾರದು, ಈ ನಿಟ್ಟಿನಲ್ಲಿ ಮೂಲ ಜಾನಪದವನ್ನು ಉಳಿಸಿ ಬೆಳೆಸಲು ಇಂದಿನ ನವ ಕಲಾವಿದರು ಸತತ ಪ್ರಯತ್ನಿಸಬೇಕು ಎಂದು ಯುವ ಕಲಾವಿದರಿಗೆ ಕರೆ ನೀಡಿದರು.


ನವ್ಯಸಂಗಮ ಟ್ರಸ್ಟ್ ನ ಸಂಸ್ಥಾಪಕ ಕಾರ್ಯದರ್ಶಿ ಜಯಸಿಂಹ ಮತ್ತು ಶಿಕ್ಷಕ ರವಿಕುಮಾರ್ ಮಾತನಾಡಿದರು, ಪ್ರಜ್ಞಾ ಟ್ರಸ್ಟ್ ನ ಎನ್ ಡಿ ಸಿದ್ದರಾಮು, ಲಕ್ಷ್ಮಿ ಗೋ ರಾ ಶ್ರೀನಿವಾಸ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ತರಂಗ ಜಾನಪದ ಟ್ರಸ್ಟ್ ನ ಕಾರ್ಯದರ್ಶಿ ಹೊನ್ನಿಗಾನಹಳ್ಳಿ ಸಿದ್ದರಾಜು ಸ್ವಾಗತಿಸಿ ಮೆಣಸಿಗನಹಳ್ಳಿ ಸ್ವಾಮಿ ಯವರು ನಿರೂಪಿಸಿ ವಂದಿಸಿದರು.


ಹೊಟ್ಟಿಗನಹೊಸಹಳ್ಳಿ ಚಲ್ಲಮ್ಮ ಮತ್ತು ತಂಡ ಹಾಗೂ ಮೊಳೆದೊಡ್ಡಿ ಪರಮೇಶ್ ಮತ್ತು ತಂಡ ತಂಬೂರಿ ಪದಗಳನ್ನು ಹಾಡಿದರೆ, ಸಿದ್ದರಾಜು ರಾಂಪುರ, ಎಸ್ ಬಿ ಗಂಗಾಧರ್, ಪ್ರವೀಣ್ ಕುಮಾರ್, ರಾಮನಗರ ಪ್ರಕಾಶ್ ಮತ್ತು ಹೆಚ್ ಎಸ್ ಅಭಿನಂದನ್ ಮತ್ತು ತಂಡದವರು ಮೂಲ ಜಾನಪದ ಹಾಡುಗಳನ್ನು ಹಾಡುವ ಮೂಲಕ ಕೇಳುಗರ ಮನ ಸೂರೆಗೊಳ್ಳುವಲ್ಲಿ ಯಶಸ್ವಿಯಾದವು.


ಗೋ ರಾ ಶ್ರೀನಿವಾಸ...

ಮೊ:984585619.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑