Tel: 7676775624 | Mail: info@yellowandred.in

Language: EN KAN

    Follow us :


ಬಿರುಸುಗೊಳ್ಳದ ಬೆಂಗಳೂರು ಲೋಕಸಭಾ ಕ್ಷೇತ್ರ

Posted date: 02 Apr, 2019

Powered by:     Yellow and Red

ಬಿರುಸುಗೊಳ್ಳದ ಬೆಂಗಳೂರು ಲೋಕಸಭಾ ಕ್ಷೇತ್ರ

೨೦೧೯ ರ ಬೆಂಗಳೂರು ಲೋಕಸಭಾ ಚುನಾವಣೆ ಬಿಸಿಲಿನ ಬೇಗೆಗೋ, ಕಾರ್ಯಕರ್ತರ ನಿರುತ್ಸಾಹದಿಂದಲೋ ಕಳೆಗುಂದುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ, ಪಕ್ಕದ ಮಂಡ್ಯ ಜಿಲ್ಲೆಗೆ ಹೋಲಿಸಿ‌ ನೋಡಿದರೇ ಶೇಕಡಾ ಹತ್ತರಷ್ಟು ಜಿದ್ದಾಜಿದ್ದಿ ಇಲ್ಲದಿರುವುದು‌ ಮೇಲ್ನೋಟಕ್ಕೆ ಕಂಡುಬರುತ್ತಿದೆ.


ಅಭ್ಯರ್ಥಿಗಳು ಯಾರೆಂದೂ ಘೋಷಣೆ ಆಗುವ ಮುನ್ನಾ ಇದ್ದ ಖದರು ಉತ್ಸಾಹ ಅಭ್ಯರ್ಥಿ ಘೋಷಣೆಯ ನಂತರ ಕಾರ್ಯಕರ್ತರಲ್ಲಿ‌ ಇಲ್ಲವಾಗಿದೆ, ಪಕ್ಷ ಹಾಗೂ ರಾಜಕೀಯ ನಾಯಕರ ಮೇಲೆ ಊಹಾಪೋಹಗಳು ಹರಿದಾಡುತ್ತಿವೆ, ಪ್ರಚಾರ ಎನ್ನುವುದು ಸಾಮಾಜಿಕ ಜಾಲತಾಣಗಳಿಗಷ್ಟೇ ಸೀಮೀತವಾಗಿದೆ ಎಂಬುದರಲ್ಲಿ ಅನುಮಾವೇ ಇಲ್ಲದಂತಾಗಿದೆ.


ಮೈತ್ರಿ ಪಕ್ಷದಿಂದ ಡಿ ಕೆ ಸುರೇಶ್ ಖಚಿತವಾಗಿದ್ದರೂ ಸಹ ಬಿಜೆಪಿಯಿಂದ ಯಾರೂ ? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿತ್ತು, ಚನ್ನಪಟ್ಟಣ ಸೇರಿದಂತೆ ಕೆಲವು ವಿಧಾನಸಭೆ ಕ್ಷೇತ್ರದಲ್ಲಿ ಮಾಜಿ ಶಾಸಕ ಸಿ ಪಿ ಯೋಗೇಶ್ವರ್ ರವರೇ ಅಭ್ಯರ್ಥಿ ಎಂದು ಬಿಂಬಿತವಾದರೂ ಸಹ ಒಳಗೊಳಗೆ ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಶ್, ಮಾಜಿ ಶಾಸಕಿ ತೇಜಶ್ವಿನಿಗೌಡ ಸೇರಿದಂತೆ ಆಕಾಂಕ್ಷಿಗಳು ವರಿಷ್ಠರಿಗೆ ದುಂಬಾಲು ಬಿದ್ದಿದ್ದರ ಜೊತೆಗೆ ಸಿ ಪಿ ಯೋಗೇಶ್ವರ್ ತನ್ನ ತಂತ್ರವನ್ನು ಬಳಸಿ ಮಗಳು ನಿಶಾ ಗೆ ಟಿಕೆಟ್ ಕೊಡಿಸಲು ಮುಂದಾಗಿದ್ದರು.


ಈ ಎಲ್ಲಾ ಗೊಂದಲಗಳನ್ನು ಸರಿಸಿ ಬಿಜೆಪಿ ವರಿಷ್ಠರು ಅಶ್ವಥ್ ನಾರಾಯಣ ರವರಿಗೆ ಟಿಕೆಟ್ ಘೋಸಿಸಿದ ನಂತರ ಸಿ ಪಿ ಯೋಗೇಶ್ವರ್ ಮತ್ತು ರುದ್ರೇಶ್ ರವರು ಏನೋ ಪಕ್ಷದ ಪರ ಪ್ರಚಾರ ಮಾಡಬೇಕು ಮಾಡೋಣ ಎಂಬಂತೆ ಕಾಟಚಾರಕ್ಕೆ ಮಾಡುತ್ತಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ.

ಅಲ್ಲೊಂದು ಇಲ್ಲೊಂದು ಸುದ್ದಿಗೋಷ್ಠಿ ಬಿಟ್ಟರೆ ಎರಡೂ ಪಕ್ಷದ ಅಭ್ಯರ್ಥಿಗಳು ಪ್ರಚಾರಕ್ಕಿಳಿಯದೇ ಇರುವುದು ಕಾರ್ಯಕರ್ತರಲ್ಲಿ ಅಚ್ಚರಿಯ ಗೊಂದಲ ಉಂಟುಮಾಡುತ್ತಿದೆ.


ಯೋಗೇಶ್ವರ್ ಅಭ್ಯರ್ಥಿಯಾಗಿದ್ದರೆ ಡಿ ಕೆ ಸುರೇಶ್ ಗೆ ಪ್ರಬಲ ಪ್ರತಿಸ್ಪರ್ಧಿ ಆಗಿರುತ್ತಿದ್ದರು, ಈಗ ಅಶ್ವಥ್ ನಾರಾಯಣ ರವರಿಗೆ ಮೋದಿ ಹೆಸರು ಮತ್ತು ಹಿಂದೂ ಪರ ಯುವಕರ ಮತ ಮಾತ್ರ ಸಿಗುವ ಅವಕಾಶವಿದ್ದು ಮೂಲ ಕಾಂಗ್ರೆಸ್ ಮತ್ತು ಜೆಡಿಎಸ್ ನ ಮತಗಳನ್ನು ಸೆಳೆಯಲು ವಿಫಲವಾಗುತ್ತಿದೆ. ಬೆಂಗಳೂರಿನ ಉತ್ತರಹಳ್ಳಿ, ರಾಜರಾಜೇಶ್ವರಿ ನಗರ ಮತ್ತು ಆನೇಕಲ್ ಗಳಲ್ಲಿ ಬಿಜೆಪಿ ಹೆಚ್ಚು ಮತಗಳಿಸಿಕೊಳ್ಳಬಹುದೇ ವಿನಹ ರಾಮನಗರ, ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಹೆಚ್ಚು ಮತಗಳಿಕೆ ಮಾಡಿಕೊಳ್ಳುವಲ್ಲಿ ಮುಂದಿದ್ದಾರೆ, ಕುಣಿಗಲ್ ಕ್ಷೇತ್ರ ಎರಡಕ್ಕೂ ಸಮ ಸಮ ಬರಬಹುದು ಎಂದು ಅಲ್ಲಿಯ ದಾಯಾದಿ ನಾಯಕರ ಒಗ್ಗಟ್ಟಿನಿಂದ ಗೋಚರಿಸುತ್ತದೆ.


ಸಿ ಪಿ ಯೋಗೇಶ್ವರ್ ಈ ಬಾರಿ ಚುನಾವಣಾ ಕಣದಿಂದ ದೂರ ಸರಿಯಲು ಕಾಂಗ್ರೆಸ್ ಮತ್ತು ಜೆಡಿಎಸ್ ನ ನಾಯಕರೇ ಕಾರಣ ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ, ಒಂದು ಮೂಲದ ಪ್ರಕಾರ ಸ್ವಾಮೀಜಿ ಯೊಬ್ಬರ ಕಡೆಯಿಂದ ಹೇಳಿಸಿದರೆ ಕಾಂಗ್ರೆಸ್ ಪಕ್ಷದ ವರಿಷ್ಠ ರೇ ಎಂ ಎಲ್ ಸಿ ಮಾಡುವುದಾಗಿ ಭರವಸೆ ನೀಡಿರುವುದರಿಂದ ತಟಸ್ಥವಾಗಿದ್ದಾರೆ ಎಂಬ ಮಾತು ಚಾಲ್ತಿಯಲ್ಲಿದೆ.


ಏನೇ ಆಗಲಿ ಅಭ್ಯರ್ಥಿ ಘೋಷಣೆ ಆಗುವ ಮುನ್ನಾ ಕಾರ್ಯಕರ್ತರಲ್ಲಿದ್ದ ಹುಮ್ಮಸ್ಸು ಈಗ ಇಲ್ಲದಿರುವುದು ಸಹ ಕೆಲ ಮತದಾರರಲ್ಲಿ ಆತಂಕ ಮೂಡಿಸಿದೆ !?


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑