ಚನ್ನಪಟ್ಟಣದ ಜನತೆ ಅದೃಷ್ಟವಂತರು ಎಂದು ಹೇಳಿ ಪ್ರಚಾರ ಆರಂಭಿಸಿದ ಮೈತ್ರಿ ಅಭ್ಯರ್ಥಿ
ಚನ್ನಪಟ್ಟಣದ ಜನತೆ ಬಹಳ ಅದೃಷ್ಟವಂತರು ನೀವು ಕೇವಲ ಒಬ್ಬ ಶಾಸಕನನ್ನು ಮಾತ್ರ ಹೊಂದಿಲ್ಲ ನಾಡಿನ ಮುಖ್ಯಮಂತ್ರಿ ಯನ್ನೇ ಪಡೆದಿದ್ದೀರಿ, ಅದಕ್ಕಾಗಿಯೇ ಸಾವಿರಾರು ಕೋಟಿ ಅನುದಾನವನ್ನು ಸಹ ಚನ್ನಪಟ್ಟಣ ತಾಲ್ಲೂಕಿನ ಅಭಿವೃದ್ಧಿಗಾಗಿ ಪಡೆದುಕೊಂಡಿದ್ದೀರಿ ಎಂದು ರಾಮನಗರ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ ತಮ್ಮ ಪ್ರಚಾರ ಭಾಷಣದಲ್ಲಿ ಹೇಳಿದರು.
ಅವರು ಲೋಕಸಭಾ ಚುನಾವಣಾ ಬೆಂಗಳೂರು ಗ್ರಾಮಾಂತರದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಿ ಕೆ ಸುರೇಶ್ ರವರ ಪರ ಹೊಂಗನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮತಯಾಚನೆ ಮಾಡುವ ಸಂದರ್ಭದಲ್ಲಿ ನೆರೆದಿದ್ದ ಮತದಾರರನ್ನು ಕುರಿತು ಮಾತನಾಡಿದರು.
ಇಪ್ಪತ್ತು ವರ್ಷಗಳ ಕಾಲ ನೆನೆಗುದಿಗೆ ಬಿದ್ದಿದ್ದ ಎಲ್ಲಾ ಕಾಮಗಾರಿಗಳನ್ನು ತ್ವರಿತವಾಗಿ ಮಾಡಲಾಗುತ್ತಿದೆ, ರಸ್ತೆ, ಚರಂಡಿ, ಕುಡಿಯುವ ನೀರು ಹೀಗೆ ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ, ಈ ಕ್ಷೇತ್ರ ಮತ್ತಷ್ಟು ಅಭಿವೃದ್ಧಿ ಹೊಂದಬೇಕೆಂದರೆ ನಮ್ಮ ಮೈತ್ರಿ ಅಭ್ಯರ್ಥಿ ಡಿ ಕೆ ಸುರೇಶ್ ರವರಿಗೆ ಮತ ನೀಡಬೇಕೆಂದು ಮನವಿ ಮಾಡಿದರು.
ಅನಿತಾ ಕುಮಾರಸ್ವಾಮಿ ಯವರ ಮಾತನ್ನೇ ಪುಷ್ಟೀಕರಿಸಿದ ಮೈತ್ರಿ ಅಭ್ಯರ್ಥಿ ಡಿ ಕೆ ಸುರೇಶ್ ಚನ್ನಪಟ್ಟಣದ ಜನತೆ ನಿಜಕ್ಕೂ ಅದೃಷ್ಟವಂತರೇ ! ನಾಡಿನ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಯವರನ್ನು ಆರಿಸಿ ಕಳುಹಿಸಿದ್ದೀರಿ, ನೀವುಗಳು ಯೋಗವಂತರು ಎಂದರು.
ಚನ್ನಪಟ್ಟಣವೂ ಸೇರಿದಂತೆ ರಾಮನಗರ ಜಿಲ್ಲೆಗೆ ೧,೮೦೦ ಕೋಟಿ ಹಣ ಬಿಡುಗಡೆ ಮಾಡಲಾಗಿದೆ, ೧,೦೦೦ ಕೋಟಿ ಹಣವನ್ನು ಮೂಲಭೂತ ಸೌಕರ್ಯಗಳಿಗಾಗಿ ನೀಡಲಾಗಿದೆ, ಮೂಲಭೂತ ಸೌಕರ್ಯಗಳ ಕಾಮಗಾರಿಗಳು ಚಾಲನೆಯಲ್ಲಿವೆ, ನಿರ್ಗತಿಕರಿಗೆ ಮನೆ ಮಂಜೂರು ಮಾಡಲಾಗಿದೆ, ಡಿ ಕೆ ಶಿವಕುಮಾರ್ ರವರು ಎಲ್ಲಾ ರೈತರಿಗೆ ಉಚಿತ ಟ್ರಾನ್ಸ್ ಫಾರ್ಮರ್ ನೀಡಿದ್ದಾರೆ, ಸತ್ತೇಗಾಲದಿಂದ ಚನ್ನಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆ ಈಗಾಗಲೇ ಚಾಲನೆ ಪಡೆದುಕೊಂಡಿದೆ ಎಂದರು.
ಬಿಜೆಪಿ ಕೇವಲ ಓಟಿಗಾಗಿ ಮಾತ್ರ ಬರುತ್ತಾರೆ, ಅವರಿಂದ ಯಾವುದೇ ಅಭಿವೃದ್ಧಿ ಕೆಲಸವಾಗಿಲ್ಲ, ರೈತರ ಸಾಲಮನ್ನಾ ಮಾಡಿಲ್ಲಾ, ಅದೇ ಕುಮಾರಸ್ವಾಮಿ ಯವರು ನಾಲ್ಕೂವರೆ ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದಾರೆ.
ಇಲ್ಯಾರೋ ಸರ್ಕಾರ ಬಿದ್ದೋಗುತ್ತೆ, ನಾನು ಮಂತ್ರಿ ಆಗ್ತಿನಿ ಅಂತ ಬೊಬ್ಬೆ ಹಾಕ್ತಿದ್ದಾರೆ ಅವರೇನು ಆಗಲ್ಲ, ಅವರ ಮಾತಿಗೆ ಮರುಳಾಗಬೇಡಿ ಎಂದು ಯೋಗೇಶ್ವರ್ ಹೆಸರು ಹೇಳದೆ ಟಾಂಗ್ ನೀಡಿದರು.
ವಂದಾರಗುಪ್ಪೆ ಗ್ರಾಮ ಪಂಚಾಯತಿ ಯಿಂದ ಪ್ರಾರಂಭವಾದ ಪ್ರಚಾರವು ಹೊಂಗನೂರು, ಕೋಡಂಬಳ್ಳಿ, ಸಿಂಗರಾಜಪುರ, ಇಗ್ಗಲೂರು ಪಂಚಾಯತಿ ಮುಂತಾದ ಕಡೆ ಪ್ರಚಾರ ಮಾಡುವುದಾಗಿ ತಿಳಿದುಬಂದಿದೆ.
ಪ್ರಚಾರದಲ್ಲಿ ಚಲನಚಿತ್ರ ನಟಿ ಅಭಿನಯ, ಮಾಜಿ ಶಾಸಕ ಅಶ್ವಥ್, ರಾಮನಗರ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಸಿಂ ಲಿಂ ನಾಗರಾಜು, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ವೀಣಾಕುಮಾರಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಯಮುತ್ತು, ಬಮೂಲ್ ನಿರ್ದೇಶಕ ಲಿಂಗೇಶಕುಮಾರ್, ಹಾಪ್ ಕಾಮ್ಸ್ ನಿರ್ದೇಶಕ ರಂಗನಾಥ, ವಕೀಲ ಹನುಮಂತು ಹಾಗೂ ಸ್ಥಳೀಯ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಪ್ರಚಾರದಲ್ಲಿ ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು