ಮಹಿಳಾ ಜನ ಜಾಗೃತಿ ತರಬೇತಿ ಶಿಬಿರ, ನೋಂದಾಯಿಸಿಕೊಳ್ಳಲು ಕರೆ
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆಶ್ರಯದಲ್ಲಿ ೨೨ ನೇ ರಾಜ್ಯ ಮಟ್ಟದ ಮಹಿಳಾ ಜನ ಜಾಗೃತಿ ತರಬೇತಿ ಶಿಬಿರವನ್ನು ಮೇ ೦೧ ರ ಬುಧವಾರ ದಿಂದ ಮೇ ೧೦ ರ ಶುಕ್ರವಾರ ದ ವರೆಗೆ ಹಮ್ಮಿಕೊಂಡಿದ್ದು ಆಸಕ್ತ ಮಹಿಳೆಯರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಮಹಿಳಾ ಸಂಘ ಸಂಸ್ಥೆಯವರು ಇದೇ ತಿಂಗಳ ೩೦ ನೇ ತಾರೀಖಿನೊಳಗೆ ನೊಂದಾಯಿಸಿಕೊಳ್ಳುವಂತೆ ರಾಮನಗರ ದ ಅರ್ಚಕರಹಳ್ಳಿ ಯ ಶಾಖಾ ಮಠದ ಕಾರ್ಯದರ್ಶಿಗಳಾದ ಶ್ರೀ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಬಿರದಲ್ಲಿ ಹದಿಮೂರು ವರ್ಷಗಳ ಮೇಲ್ಪಟ್ಟ ಎಲ್ಲಾ ವಯೋಮಾನದ ಮಹಿಳೆಯರು ಭಾಗವಹಿಸಬಹುದಾಗಿದೆ, ಭಾಗವಹಿಸುವವರು ಉಡುಪು, ಹೊದಿಕೆ, ತಟ್ಟೆ ಲೋಟ, ದಿನನಿತ್ಯದ ಅಗತ್ಯ ವಸ್ತುಗಳ ಜೊತೆಗೆ ಯೋಗಾಸನದ ಉಡುಪುಗಳನ್ನು ಮಾತ್ರ ತರಬೇಕು.
ಉಳಿದುಕೊಂಡ ಎಲ್ಲಾ ಶಿಬಿರಾರ್ಥಿಗಳಿಗೆ ಊಟ, ವಸತಿ, ಲೇಖನ ಸಾಮಾಗ್ರಿಗಳು ಮತ್ತು ಸಂಸ್ಕಾರ ಸೌರಭ ಎಂಬ ಪುಸ್ತಕ ವನ್ನು ಕೊಡಲಾಗುವುದು.
ತರಬೇತಿ ಶಿಬಿರದಲ್ಲಿ ಪರಿಸರ ನೈರ್ಮಲ್ಯ, ದೈನಂದಿನ ವ್ಯಾಯಾಮ ಆರೋಗ್ಯ ರಕ್ಷಣೆಯ ಅರಿವು, ಸಂಸ್ಕೃತಿ, ಸದಾಚಾರ, ಪ್ರಾರ್ಥನೆ, ಧ್ಯಾನ, ನೀತಿಸಂಹಿತೆ, ಯೋಗಾಭ್ಯಾಸ, ಜ್ಯೋತಿಷ್ಯ, ಭಜನೆ, ಪೂಜಾರಿಗಳು ಹಾಗೂ ರಾಷ್ಟ್ರೀಯ ಭಾವೈಕ್ಯತೆಯ ಬಗ್ಗೆ ಪರಿಣಿತ ವಿದ್ಯಾಂಸರಿಂದ ಉಪನ್ಯಾಸ ನೀಡಲಾಗುವುದು.
ಮೇ ೦೧ ರ ಬುಧವಾರ ದಂದು ಪರಮಪೂಜ್ಯ ಜಗದ್ಗುರು ಡಾ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಗಳ ಸಾನಿಧ್ಯದಲ್ಲಿ ಎಲ್ಲಾ ಮಠದ ಸ್ವಾಮೀಜಿಗಳು, ವಿದ್ವಾಂಸರು, ಹಾಗೂ ನಾಡಿನ ಖ್ಯಾತ ಸಾಹಿತಿಗಳ ಸಮ್ಮುಖದಲ್ಲಿ ಉದ್ಘಾಟಿಸಿಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಶ್ರೀ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಗಳು ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು