ಮುಖ್ಯಮಂತ್ರಿಗಳ ಸ್ವಕ್ಷೇತ್ರದಲ್ಲಿ ಬಿಜೆಪಿಯ ಅಬ್ಬರದ ಪ್ರಚಾರ
ಮುಖ್ಯಮಂತ್ರಿಗಳ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ತಾಲೂಕಿನಾದ್ಯಂತ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಹಾಗೂ ಬಿಜೆಪಿಯ ವಕ್ತಾರ ಹಾಗೂ ಬೆಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಶ್ವಥ್ ನಾರಾಯಣ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಇಂದು ಹಲವಾರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಹಿರಂಗ ಸಭೆ ನಡೆಸಿ ಹೆಚ್ ಡಿಕೆ ಮತ್ತು ಡಿಕೆ ಸಹೋದರರಿಗೆ ಟಾಂಗ್ ನೀಡುವ ಮೂಲಕ ಮತದಾರ ಪ್ರಭುಗಳ ಬಳಿ ಮತಯಾಚನೆ ಮಾಡಿದರು.
ಹೊಂಗನೂರು ಗ್ರಾಮದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಯವರ ವಿರುದ್ಧ ಏಕವಚನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಮುಖ್ಯಮಂತ್ರಿಗಳು ಕ್ಷೇತ್ರ ವನ್ನು ಮರೆತಿದ್ದಾರೆ, ಚನ್ನಪಟ್ಟಣ ತಾಲ್ಲೂಕು ಎಲ್ಲಿದೆ ? ಹೇಗಿದೆ ಎಂಬುದನ್ನು ಸಹ ಮರೆತಿದ್ದಾರೆ ! ಯಾವುದೇ ಅಭಿವೃದ್ಧಿ ಮಾಡದ ಇಂತಹವರನ್ನು ಚುನಾವಣೆಯಲ್ಲಿ ಗೆಲ್ಲಿಸಿದ್ದೀರಿ, ತಾಲ್ಲೂಕಿನ ಒಂದು ಊರಿನ ಹೆಸರು ಸಹ ಅವರಿಗೆ ಗೊತ್ತಿಲ್ಲ, ಅವರು ವಾಮ ಮಾರ್ಗದಲ್ಲಿ ಗೆದ್ದದ್ದೇ ವಿನ: ನಿಜವಾದ ಗೆಲುವಲ್ಲ ಎಂದರು.
ಕಾಲ ಬದಲಾಗುತ್ತಿರುತ್ತದೆ, ಚನ್ನಪಟ್ಟಣದ ಜನತೆ ನನ್ನ ಮತ್ತು ಬಿಜೆಪಿ ಪಕ್ಷದ ಪರ ಇದ್ದಾರೆ, ದೀನ ದಲಿತರು, ಬಡವರು, ಹಿಂದುಳಿದ ವರ್ಗಗಳ ಮಂದಿಯೂ ನಮ್ಮ ಜೊತೆ ಇದ್ದಾರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಕ್ಕಿಂತ ಹೆಚ್ಚು ಮತಗಳನ್ನು ಬಿಜೆಪಿ ಪಕ್ಷಕ್ಕೆ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು. ಮೋದಿಯವರ ನಾಮಬಲ ಹಾಗೂ ದೇಶದ ನವ ನಿರ್ಮಾಣಕ್ಕಾಗಿ ಬಿಜೆಪಿ ಪಕ್ಷಕ್ಕೆ ಎಲ್ಲರೂ ಮತ ನೀಡುತ್ತಾರೆ.
ಮುಖ್ಯಮಂತ್ರಿಗಳು ಗೆದ್ದು ಹೋದ ನಂತರ ಒಂದು ಸಭೆ ಹೊರತು ಪಡಿಸಿ ಅಭಿವೃದ್ಧಿಗಾಗಿ ಒಂದು ದಿನವೂ ತಾಲ್ಲೂಕು ಪ್ರವಾಸ ಮಾಡಿಲ್ಲ, ಮಗನನ್ನು ಗೆಲ್ಲಿಸಿಕೊಳ್ಳುವುದಕ್ಕೋಷ್ಕರ ಮಂಡ್ಯದಲ್ಲಿ ಹಗಲು ರಾತ್ರಿ ಕಳೆಯುತ್ತಿದ್ದಾರೆ, ನಾವು ಗೆಲ್ಲಿಸಿರುವುದು ನಮ್ಮ ತಾಲೂಕನ್ನು ಅಭಿವೃದ್ಧಿ ಮಾಡಲು ಎಂದು ಅವನನ್ನು ನೀವು ಕೇಳಬೇಕು ಎಂದು ಏಕವಚನದಲ್ಲಿಯೇ ಮಾತನಾಡಿದರು. ಅಧಿಕಾರದಲ್ಲಿ ಇರುವವರೇ ಏನು ಮಾಡುತ್ತಿಲ್ಲ, ಇನ್ನು ವಿರೋಧ ಪಕ್ಷದವರು ಏನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ಇದೇ ವೇಳೆ ಬಿಜೆಪಿಯ ಹಿರಿಯ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಅಭ್ಯರ್ಥಿ ಅಶ್ವಥ್ ನಾರಾಯಣ ಮಾತನಾಡಿದರು.
ಜಿಲ್ಲಾಧ್ಯಕ್ಷ ಎಂ ರುದ್ರೇಶ್, ತಾಲ್ಲೂಕು ಅಧ್ಯಕ್ಷ ಎಂ ಆನಂದಸ್ವಾಮಿ, ಹಾಗೂ ಸ್ಥಳೀಯ ನಾಯಕರು ಜೊತೆಯಲ್ಲಿದ್ದರು.
ವಿಧಾನಸಭೆ ಚುನಾವಣೆ ಯ ನಂತರ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಸಿ ಪಿ ಯೋಗೇಶ್ವರ್ ಹಳೆಯ ಸೇಡನ್ನು ತೀರಿಸಿಕೊಳ್ಳಲು ಮೈತ್ರಿ ಪಕ್ಷಕ್ಕಿಂತಲೂ ಹೆಚ್ಚು ಮತ ಕ್ರೋಢಿಕರಿಸಿದರೆ ಚುನಾವಣೆ ಯ ನಂತರ ರಾಜ್ಯದಲ್ಲಿ ಬದಲಾವಣೆಗಳಾದರೆ, ಸೂಕ್ತ ಸ್ಥಾನಮಾನ ಸಿಗಬಹುದು ಎಂಬ ಆಲೋಚನೆ ಇಟ್ಡುಕೊಂಡೇ ಅಖಾಡಕ್ಕೆ ಇಳಿದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿತ್ತು.
ಇದೇ ವೇಳೆ ವಂದಾರಗುಪ್ಪೆ,ಹೊಂಗನೂರು, ಕೋಡಂಬಳ್ಳಿ, ಅಕ್ಕೂರು, ಇಗ್ಗಲೂರು, ಕೂಡ್ಲೂರು ಮತ್ತು ಮಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಹಿರಂಗ ಮತಯಾಚನೆ ಮಾಡುವುದಾಗಿ ತಿಳಿದು ಬಂತು.
ಸಿ ಪಿ ಯೋಗೇಶ್ವರ್ ರವರ ಹಿಂದೆ ನೂರಾರು ಬೈಕ್ ಸವಾರರು ಸಹ ಬಿಜೆಪಿಯ ಬಾವುಟ ಮತ್ತು ಟೋಪಿ ಧರಿಸಿ ಸಾಥ್ ನೀಡಿದರು, ಬೈಕ್ ಸವಾರರು ಪೆಟ್ರೋಲ್ ತುಂಬಿಸಲು ಬಂದಿದ್ದರಿಂದ ಅಂಬೇಡ್ಕರ್ ನಗರದ ಲ್ಲಿ ಇರುವ ಪೆಟ್ರೋಲ್ ಬಂಕ್ ನಲ್ಲಿ ದಿನನಿತ್ಯದ ವಾಹನ ಸವಾರರಿಗೆ ಅವಕಾಶ ಇಲ್ಲವಾಗಿತ್ತು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು