ಗೌಡರ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡಿದ ಸಿಪಿವೈಗೆ ಎಚ್ಚರಿಕೆ ನೀಡಿದ ಜೆಡಿಎಸ್ ನಾಯಕರು
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಯವರ ಬಗ್ಗೆ ಏಕವಚನದಲ್ಲಿ ಮಾತನಾಡಲು ಹಾಗೂ ದೊಡ್ಡಗೌಡರ ಕುಟುಂಬದ ಬಗ್ಗೆ ಹಗುರವಾಗಿ ಹಾಗೂ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಲು ಮಾಜಿ ಶಾಸಕ ಸಿ ಪಿ ಯೋಗೇಶ್ವರ್ ಗೆ ನೈತಿಕ ಹಕ್ಕಿಲ್ಲ ಎಂದು ಚನ್ನಪಟ್ಟಣ ನಗರ ಘಟಕದ ಅಧ್ಯಕ್ಷ ರಾಂಪುರ ರಾಜಣ್ಣ ಸಿಪಿವೈಗೆ ತಿರುಗೇಟು ನೀಡಿದರು.
ಅವರು ನಗರದಲ್ಲಿರುವ ಜೆಡಿಎಸ್ ಪಕ್ಷದ ಕಛೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಬಿಜೆಪಿ ಪರ ಮತಯಾಚನೆ ಮಾಡುವ ಸಂದರ್ಭದಲ್ಲಿ ಸಿ ಪಿ ಯೋಗೇಶ್ವರ್ ಮುಖ್ಯಮಂತ್ರಿಗಳನ್ನು ಏಕವಚನದಲ್ಲಿ ಸಂಬೋಧಿಸಿದ್ದಾರೆ, ತಾಲ್ಲೂಕು ಎಲ್ಲಿದೆ ಎಂದಾಗಲಿ,ತಾಲ್ಲೂಕಿನ ಗ್ರಾಮದ ಹೆಸರಾಗಲಿ ಗೊತ್ತಿದೆಯೇ ಎಂದು ಹಗುರವಾಗಿ ಮಾತನಾಡಿದ್ದಾರೆ, ಇಪ್ಪತೈದು ವರ್ಷಗಳ ಹಿಂದೆಯೇ ಅವರು ಈ ಭಾಗದ ಹೆಸರುಗಳನ್ನು ಮುಖಂಡರ ಹೆಸರನ್ನು ಕರಗತ ಮಾಡಿಕೊಂಡಿದ್ದಾರೆ ಎಂದರು.
ನೀರಾವರಿ ಹರಿಕಾರ ದೇವೇಗೌಡ ರ ಕೊಡುಗೆ ಬಗ್ಗೆ ಮಾತನಾಡುತ್ತಾರೆ, ಇಪ್ಪತ್ತು ವರ್ಷಗಳ ಕಾಲ ಇವರ ಕೊಡುಗೆ ಏನು ಎಂದು ಪ್ರಶ್ನಿಸಿದರು, ದೇವೇಗೌಡ ಮತ್ತು ವರದೇಗೌಡ ಪಟ್ಟು ಹಿಡಿದು ಮಾಡಿದ ನೀರಾವರಿ ಕೆಲಸಕ್ಕೆ ಕೇವಲ ಪೈಪುಗಳನ್ನು ಹಾಕಿಸಿದ್ದಷ್ಟೇ ಇವರ ಸಾಧನೆಯೇ ? ಎಂದು ಸಾರ್ವಜನಿಕರಿಗೆ ತಿಳಿಸಬೇಕೆಂದು ಹೇಳಿದರು.
ನಗರಸಭೆಯ ಹಿರಿಯ ಸದಸ್ಯ ಉಮಾಶಂಕರ್ ಮಾತನಾಡಿ ಯೋಗೇಶ್ವರ್ ಹದ್ದುಮೀರಿ ಮಾತನಾಡುತ್ತಿದ್ದಾರೆ, ಅವರ ಇಪ್ಪತ್ತು ವರ್ಷಗಳ ಅವಧಿಯಲ್ಲಿ ಖಾಸಗಿ ಬಸ್ ನಿಲ್ದಾಣ, ಅಂಬೇಡ್ಕರ್ ಭವನ, ಯುಜಿಡಿ ಕಾಮಗಾರಿಗಳನ್ನು ಮಾಡಲಾಗಿಲ್ಲ, ಇನ್ನಾರು ತಿಂಗಳಲ್ಲಿ ಈ ಎಲ್ಲಾ ಕೆಲಸಗಳನ್ನು ಮಾಡಿ ತೋರಿಸುತ್ತೇವೆ, ಕುಡಿಯಲು ಕಾವೇರಿ ನೀರು ಒದಗಿಸುತ್ತೇವೆ, ಇನ್ನು ಮುಂದೆ ಎಚ್ಚರಿಕೆಯಿಂದ ಮಾತನಾಡದೇ ಹೋದರೆ ಸಿ ಪಿ ಯೋಗೇಶ್ವರ್ ವಿರುದ್ಧ ಬಹಿರಂಗ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಗುತ್ತಿಗೆದಾರ ಗೋವಿಂದಳ್ಳಿ ನಾಗರಾಜು, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಮುದ್ದುಕೃಷ್ಣ ಮಾತನಾಡಿ ಡಿ ಕೆ ಸಹೋದರ ಹಣ ದ್ವಿಗುಣಗೊಂಡಿದೆ ಎಂದು ಹೇಳುತ್ತಾರೆ ಇವರ ಹಣ ಮತ್ತು ಆಸ್ತಿ ಕಡಿಮೆಯಾಗಿದೆಯೇ ಎಂದು ತಿರುಗೇಟು ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಎಲೆಕೇರಿ ರವೀಶ್, ವೆಂಕಟಾಚಲಯ್ಯ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು