ಇಪ್ಪತ್ತು ಗಂಟೆಗಳಲ್ಲಿಯೇ ಅದೇ ಜಾಗದಲ್ಲಿ ಡಿಕೆಶಿಗೆ ಪ್ರತ್ಯುತ್ತರಿಸಿ ಶಿವಕುಮಾರ್ ದುಡ್ಡು ಬಿಜೆಪಿಗೆ ಓಟು ಎಂದ ಸಿಪಿವೈ
ನನ್ನನ್ನು ಗಂಡಸಾ ! ಎಂದು ಕೇಳಿದ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ನಿಜವಾದ ಗಂಡಸಾಗಿದ್ರೆ ನಮ್ಮ ತಾಲ್ಲೂಕಿನ ಎಲ್ಲಾ ಕೆರೆಗಳಿಗೂ ನಾನು ಬರಗಾಲ ದಲ್ಲಿ ತುಂಬಿಸಿದ ಹಾಗೆ ನೀರು ತುಂಬಿಸಲಿ, ಆಗ ಅವರನ್ನು ನಾನು ಗಂಡಸು ಎಂದು ಒಪ್ಪಿಕೊಳ್ಳುತ್ತೇನೆ ಎಂದು ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಸವಾಲು ಹಾಕಿದರು, ನಿನ್ನೆ ದಿನ ಸಂಜೆ ೦೬:೩೦ ರಲ್ಲಿ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ನಗರದ ಅಂಬೇಡ್ಕರ್ ನಗರದಲ್ಲಿ ಹಾಕಿದ ಸವಾಲಿಗೆ ಇಂದು ಮಧ್ಯಾಹ್ನ ೦೩:೦೦ ಗಂಟೆಯ ವೇಳೆಗೆ ಇದೇ ಅಂಬೇಡ್ಕರ್ ನಗರದಲ್ಲಿ (ವೀರೇಗೌಡನದೊಡ್ಡಿ) ಪ್ರತಿ ಸವಾಲು ಹಾಕಿದರು.
ಯಾರೋ ಒಬ್ಬ ತಲೆ ಕೆಟ್ಟವನು (ಕೇಂದ್ರ ಸಚಿವ ಅನಂತಕುಮಾರ್ ಹೆಗ್ಗಡೆ) ಸಂವಿಧಾನ ಬದಲಾಯಿಸ್ತಿನಿ ಎಂದ ಮಾತ್ರಕ್ಕೆ ಸಂವಿಧಾನ ಬದಲಾಗುವುದಿಲ್ಲ, ಡಾ ಬಿ ಆರ್ ಅಂಬೇಡ್ಕರ್ ಒಬ್ಬ ಮಹಾ ಮಾನವತವಾದಿ, ಅವರ ಹೆಸರಿನಲ್ಲಿ ಬಿಜೆಪಿ ಸರ್ಕಾರ ದಲಿತರಿಗೆ ಏನೇನೂ ಕೊಡುಗೆ ನೀಡಿದೆಯೋ ಅದನ್ನೆಲ್ಲಾ ಈ ಸಂಸದರು ಈ ಕ್ಷೇತ್ರದ ದಲಿತರಿಗೆ ತಲುಪಿಸಿದ್ದಾರೆಯೇ ಎಂದು ಪ್ರಶ್ನಿಸಿದರು.
ಅಧಿಕಾರಕ್ಕೆ ಬಂದ ಇಪ್ಪತ್ನಾಲ್ಕು ಗಂಟೆಗಳಲ್ಲಿ ರೈತರ ಮತ್ತು ಸ್ತ್ರೀ ಶಕ್ತಿ ಗುಂಪುಗಳ ಸಾಲ ಮನ್ನಾ ಮಾಡ್ತೀವಿ ಎಂದ ಮುಖ್ಯಮಂತ್ರಿ ಹತ್ತು ತಿಂಗಳಾದರೂ ಇನ್ನೂ ಮಾಡಿಲ್ಲ, ಯಾಕೆ ? ಮುಖ್ಯಮಂತ್ರಿ ಮತ್ತು ಸಂಸದರ ಹಣ ವರ್ಷ ವರ್ಷವೂ ಏರುತ್ತಲೆ ಇದೆ ಹೇಗೆ ? ಒಬ್ಬ ಸಂಸದನ ಆದಾಯ ಕೇವಲ ಐದು ವರ್ಷದಲ್ಲಿ ೩೫೦ ಕೋಟಿ ಹೇಗೆ ಏರಿಕೆ ಆಯ್ತು ಎಂದು ಸಾರ್ವಜನಿಕವಾಗಿ ತಿಳಿಸಬೇಕು ಎಂದರು.
ನನ್ನ ಗಂಡಸುತನದ ಬಗ್ಗೆ ಮಾತನಾಡುವ ಡಿ ಕೆ ಶಿವಕುಮಾರ್ ವಿಠಲೇನಹಳ್ಳಿ ಗೋಲಿಬಾರ್ ನಲ್ಲಿ ಎಲ್ಲಿ ಅವಿತು ಕುಳಿತಿದ್ದರು ಎಂದು ಕೇಳಿ, ನಾನು ಕರೆದುಕೊಂಡು ಹೋಗಿ ಮನೆಗೆ ಬಿಟ್ಟಿದ್ದೇನೆ,
ಅವರ ತಮ್ಮನನ್ನು ಗೆಲ್ಲಿಸಲು ಈ ಗಂಡಸಿನ ಕಾಲಿಗೆ ಬಂದು ಬಿದ್ದರು ಎಂದರು, ತಾಲ್ಲೂಕು ಈಗ ನಾಯಕರಿಲ್ಲದೆ ಅನಾಥವಾಗಿದೆ, ನಮ್ಮ ತಾಲ್ಲೂಕಿಗೆ ಒಬ್ಬ ಉತ್ತಮ ನಾಯಕ ಬೇಕಾಗಿದ್ದಾನೆ, ಹಾಗಾಗಿ ಬಿಜೆಪಿ ಅಭ್ಯರ್ಥಿ ಅಶ್ವಥ್ ನಾರಾಯಣ ರವರಿಗೆ ಮತ ನೀಡಿ ಗೆಲ್ಲಿಸುವ ಮೂಲಕ ಉತ್ತಮ ನಾಯಕನನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.
ಭಾರತದಲ್ಲಿ ಕಾಂಗ್ರೆಸ್ ಪಕ್ಷ ಇರುವವರೆಗೂ ದಲಿತರಿಗೆ ನ್ಯಾಯ ಸಿಗುವುದಿಲ್ಲ ಎಂದು ಸ್ವತಃ ಅಂಬೇಡ್ಕರ್ ರವರೇ ಹೇಳಿದರು ಎಂದು ಸ್ಮರಿಸಿದರು.
*ಇದೇ ಸಂದರ್ಭದಲ್ಲಿ ಡಿ ಕೆ ಶಿವಕುಮಾರ್ ದುಡ್ಡು ಬಿಜೆಪಿ ಗೆ ಓಟು* ಎಂದು ಹಲವಾರು ಬಾರಿ ಕೂಗಿ ಜನರ ಬಾಯಲ್ಲೂ ಹೇಳಿಸುವ ಮೂಲಕ ಸಫಲರಾದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶ್ವಥ್ ನಾರಾಯಣ ಮಾತನಾಡಿ ಬಿಜೆಪಿ ಸರ್ಕಾರ ದಲಿತರಿಗೆ ಪ್ರಧಾನಮಂತ್ರಿ ಆವಾಸ ಯೋಜನೆಯಲ್ಲಿ ಮನೆಗಳನ್ನು ಕೊಟ್ಟಿದೆ, ಆದರೆ ಈ ಸಂಸದರು ಈ ಕ್ಷೇತ್ರಕ್ಕೆ ಕೊಡದೆ ತಮ್ಮ ಸ್ವಂತ ಕ್ಷೇತ್ರಕ್ಕೆ ತೆಗೆದುಕೊಂಡು ಹೋಗಿದ್ದಾರೆ, ಪ್ರತಿಯೊಂದಕ್ಕೂ ಸಂವಿಧಾನ ಬದಲಾವಣೆ ಎಂಬ ಉಡಾಫೆ ಉತ್ತರ ನೀಡುತ್ತಾರೆ, ಡಾ ಬಿ ಆರ್ ಅಂಬೇಡ್ಕರ್ ರವರನ್ನು ಕಾಂಗ್ರೆಸ್ ಕುತಂತ್ರದಿಂದ ಸೋಲಿಸಿದ ಸಂದರ್ಭದಲ್ಲಿ ಅಂದಿನ ಜನಸಂಘ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಿತ್ತು.
ಮಧ್ಯ ಪ್ರದೇಶದಲ್ಲಿ ಅವರ ಸ್ಮಾರಕವನ್ನು ನಿರ್ಮಾಣ ಮಾಡಿದ್ದು ಬಿಜೆಪಿ ಸರ್ಕಾರ, ಲಂಡನ್ ನಲ್ಲಿ ಅವರು ಉಳಿದುಕೊಂಡಿದ್ದ ಮನೆಯನ್ನು ಖರೀದಿಸಿ ಭಾರತೀಯ ವಿದ್ಯಾರ್ಥಿಗಳಿಗೆ ವಸತಿ ನಿಲಯ ಮಾಡಿಕೊಟ್ಟಿದ್ದು ನಮ್ಮ ಬಿಜೆಪಿ ಸರ್ಕಾರ, ನಾಗಪುರದಲ್ಲಿ ಸ್ಮಾರಕ ಮತ್ತು ದೆಹಲಿಯಲ್ಲಿ ಚೈತನ್ಯ ಭವನ ನಿರ್ಮಾಣ ಮಾಡಿದ್ದು ಸಹ ಬಿಜೆಪಿ ಸರ್ಕಾರವೇ ವಿನ ಕಾಂಗ್ರೆಸ್ ಸರ್ಕಾರ ಅಲ್ಲಾ, ಹಾಗಾಗಿ ಡಾ ಬಿ ಆರ್ ಅಂಬೇಡ್ಕರ್ ಮತ್ತು ದಲಿತರಿಗೆ ಹೆಚ್ಚು ಹತ್ತಿರವಾಗಿರುವ ಬಿಜೆಪಿ ಅಧಿಕಾರಕ್ಕೆ ಬರಲು ನಿಮ್ಮ ಮತ ನಮಗೆ ಅತ್ಯವಶ್ಯಕ, ನೀವೆಲ್ಲರೂ ತಪ್ಪದೇ ನನಗೆ ಮತ ನೀಡಬೇಕೆಂದು ಮನವಿ ಮಾಡಿದರು.
ಇದೇ ವೇಳೆ ಬಿಜೆಪಿ ಮುಖಂಡ ಸದಾನಂದ, ಜಯರಾಮು, ಮಹಿಳಾ ಮುಖಂಡೆ ವೀಣಾ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಮತಯಾಚನೆ ಸಂದರ್ಭದಲ್ಲಿ ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು