Tel: 7676775624 | Mail: info@yellowandred.in

Language: EN KAN

    Follow us :


ಕಳಪೆ ಕಾಮಗಾರಿ ಪರಿಶೀಲನೆ, ಕಿರಿಯ ಇಂಜಿನಿಯರ್ ಶಂಕರ್ ಮೇಲೆ ತೂಗುಗತ್ತಿ

Posted date: 25 Apr, 2019

Powered by:     Yellow and Red

ಕಳಪೆ ಕಾಮಗಾರಿ ಪರಿಶೀಲನೆ, ಕಿರಿಯ ಇಂಜಿನಿಯರ್ ಶಂಕರ್ ಮೇಲೆ ತೂಗುಗತ್ತಿ

ಹರಿಸಂದ್ರ ಗೇಟ್ ನ ತಂಗುದಾಣ ಪರಿಶೀಲನೆ

ತಾಲ್ಲೂಕಿನ ಲಾಳಾಘಟ್ಟ ಗ್ರಾಮದ ಶಾಲಾ ಆವರಣದಲ್ಲಿ ನಿರ್ಮಿಸಿರುವ ಮಕ್ಕಳ ಸೈಕಲ್ ನಿಲ್ದಾಣ ಮತ್ತು ಸಾತನೂರು ರಸ್ತೆಯ ಹರಿಸಂದ್ರ ಮತ್ತು ನೀಲಸಂದ್ರ ಗ್ರಾಮದ ಬಸ್ ತಂಗುದಾಣದಲ್ಲಿ ನಡೆದಿರುವ ಕಾಮಗಾರಿಗಳು ಮೇಲ್ನೋಟಕ್ಕೆ ಕಳಪೆ ಗುಣಮಟ್ಟದ ಕಾಮಗಾರಿಗಳು ಎಂದು ತಿಳಿಯುತ್ತಿದೆ, ಕಾಮಗಾರಿ, ಅಂದಾಜು ಪಟ್ಟಿ ಹಾಗೂ ಬಿಲ್ ಪರಿಶೀಲಿಸಿ ವರದಿಯನ್ನು ಸಿಇಓ ರವರಿಗೆ ಒಪ್ಪಿಸುತ್ತೇನೆ, ತಪ್ಪು ಎಂಬುದು ಸಾಬೀತಾದರೆ ಅಧಿಕಾರಿಗಳು ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದು ರಾಮನಗರ ಜಿಲ್ಲಾ ಪಂಚಾಯತಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಕುಮಾರ್ ತಿಳಿಸಿದರು.


ಅವರು ಕಳಪೆ ಕಾಮಗಾರಿ ದೂರು ಆಧರಿಸಿ ಕಾಮಗಾರಿಗಳ ಸ್ಥಳ ತನಿಖೆ ಪರಿಶೀಲನೆ ವೇಳೆ ಮಾತನಾಡಿದರು.


Sanmitra.Co.In ಪತ್ರಿಕೆಯ ಫಲಶೃತಿ

ಚನ್ನಪಟ್ಟಣ ತಾಲ್ಲೂಕಿನ ಲಾಳಾಘಟ್ಟ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ೫,೦೦,೦೦೦ ರೂಪಾಯಿಗಳ ಜಿಲ್ಲಾ ಪಂಚಾಯತಿ ಅನುದಾನದಲ್ಲಿ ಅಂದಾಜು ಕನಿಷ್ಠ ೫೦,೦೦೦ ರೂಪಾಯಿಗಳ ಖರ್ಚಿನಲ್ಲಿ ಅತೀ ಕಳಪೆ ಸೈಕಲ್ ನಿಲ್ದಾಣ ಹಾಗೂ ಸಾತನೂರು ರಸ್ತೆಯ ಹರಿಸಂದ್ರ ಗ್ರಾಮ ಮತ್ತು ನೀಲಸಂದ್ರ ಗ್ರಾಮದ ಹಾಲಿ ಇರುವ ತಂಗುದಾಣಗಳಿಗೆ ದುರಸ್ತಿ ಕಾಮಗಾರಿಗಳ ಹೆಸರಿನಲ್ಲಿ ಯಾವುದೇ ರೀತಿಯ ಕೆಲಸ ಮಾಡದೇ ತಲಾ ೨,೦೦,೦೦೦ ರೂಪಾಯಿಯಂತೆ ಎರಡು ತಂಗುದಾಣಗಳಿಂದ ೪,೦೦,೦೦೦ ರೂಪಾಯಿಗಳ ಬಿಲ್ ತೆಗೆದುಕೊಂಡಿರುವುದರ ಕುರಿತು ನಮ್ಮ  ಪತ್ರಿಕೆಯಲ್ಲಿ http://sanmitra.co.in/category/search?token=804 ಫೆಬ್ರವರಿ ೧೫ ಮತ್ತು ಫೆಬ್ರವರಿ ೨೦ ನೇ ತಾರೀಖಿನಂದು ವರದಿಯಾಗಿತ್ತು.


ಮಾಹಿತಿ ಹಕ್ಕು ಕಾರ್ಯಕರ್ತ ವಂದಾರಗುಪ್ಪೆ ಕೃಷ್ಣೇಗೌಡ ಎಂಬುವವರು ಈ ಕಳಪೆ ಕಾಮಗಾರಿಗಳ ವಿರುದ್ಧ ದಾಖಲೆಗಳ ಸಮೇತ ಜಿಲ್ಲಾ ಪಂಚಾಯತಿ ಸಿಇಓ ಮುಲ್ಲೈ ಮುಹಿಲನ್ ಮತ್ತು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ ರಾಜೇಂದ್ರ ರವರಿಗೆ ಲಿಖಿತ ದೂರು ನೀಡಿದ್ದರು.


ನಮ್ಮ ಪತ್ರಿಕೆಯಲ್ಲಿ ವರದಿಯಾದ ನಂತರ ಎಚ್ಚೆತ್ತ ಗುತ್ತಿಗೆದಾರ ಮತ್ತು ಇಂಜಿನಿಯರ್ ಈ ಎರಡು ತಂಗುದಾಣಗಳಿಗೆ ಬೇಕಾಬಿಟ್ಟಿ ಟೈಲ್ಸ್ ಅಂಟಿಸಿ ಮತ್ಯಾವುದೇ ಕೆಲಸ ಮಾಡದೇ ತಟಸ್ಥವಾಗಿದ್ದು ಆ ಟೈಲ್ಸ್ ಗಳು ಆಗಲೇ ಒಡೆದು ಚೂರಾಗುತ್ತಿವೆ.


ತಾಲ್ಲೂಕಿನಾದ್ಯಂತ ಇಂತಹ ಕಳಪೆ ಕಾಮಗಾರಿಗಳು ಬಹಳಷ್ಟಿದ್ದು ಎಲ್ಲಾ ಕಾಮಗಾರಿಗಳ ಸಂಪೂರ್ಣ ವರದಿಯನ್ನು ಮೇಲಿನ ಅಧಿಕಾರಿಗಳಿಗೆ ನೀಡಲಾಗಿದೆ, ಪಕ್ಷಪಾತ ಮಾಡದೇ ಕಾಮಗಾರಿಗಳನ್ನು ಪರಿಶೀಲಿಸಿ ಅಂದಿನ ಎಇಇ ಕುಮಾರಸ್ವಾಮಿ, ಕಿರಿಯ ಇಂಜಿನಿಯರ್ ಶಂಕರ್ ಹಾಗೂ ಸಂಬಂಧಿಸಿದ ತಪ್ಪಿತಸ್ಥರ ವಿರುದ್ಧ ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಾಹಿತಿ ಹಕ್ಕು ಕಾರ್ಯಕರ್ತ ಕೃಷ್ಣೇಗೌಡ ಇದೇ ಸಮಯದಲ್ಲಿ ಅಧಿಕಾರಿಗಳಿಗೆ ಒತ್ತಾಯಿಸಿದರು.


ಕಳಪೆ ಕಾಮಗಾರಿಗಳಿಗೆ ಬಿಲ್ ಮಾಡಿದ ಇಂಜಿನಿಯರ್ ಶಂಕರ್ ಗೆ ಮೇಲಾಧಿಕಾರಿಗಳು ಪರಿಶೀಲನೆ ವೇಳೆ ಎಲ್ಲಾ ದಾಖಲೆಗಳನ್ನು ತಂದು ಹಾಜರಿರಬೇಕೆಂದು ಹೇಳಿದ್ದರೂ ಸಹ ಯಾವುದೇ ರೀತಿಯ ದಾಖಲೆಗಳನ್ನು ತರದೇ ಬಂದಿದ್ದು ಅವರ ಬೇಜಾವಾಬ್ದಾರಿ ವರ್ತನೆ ಎಂಬುದಕ್ಕೆ ಸಾಕ್ಷಿಯಾಗಿತ್ತು.


ಕಳಪೆ ಗುಣಮಟ್ಟದ ಕಾಮಗಾರಿಗಳ ಪರಿಶೀಲನೆ ವೇಳೆ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಚನ್ನಪ್ಪ, ಅಸಿಸ್ಟೆಂಟ್ ಇಂಜಿನಿಯರ್ ಭರತ್ ಕಿರಿಯ ಇಂಜಿನಿಯರ್ (ಕಳಪೆ ಕಾಮಗಾರಿಗಳಿಗೆ ಬಿಲ್ ಮಾಡಿದವರು) ಶಂಕರ್ ಮತ್ತು ಪ್ರಥಮ ದರ್ಜೆ ಸಹಾಯಕ ವೆಂಕಟಸ್ವಾಮಿ ಹಾಜರಿದ್ದು ಪರೀಶೀಲಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑