ಪುಟ್ಪಾತ್ ಇಲ್ಲದ ರಾಜ್ಯದ ಹೆದ್ದಾರಿ ? ಸಿಎಂ ಕ್ಷೇತ್ರದಲ್ಲಿ ರಸ್ತೆ ಅಗಲೀಕರಣ ಅಸಾಧ್ಯವೇ ?
- Sಮುಖ್ಯಮಂತ್ರಿಗಳ ಕ್ಷೇತ್ರ ಎಂದರೆ ಅಭಿವೃದ್ಧಿಗಳ ಆಗರ ಎಂದೇ ಎಲ್ಲರೂ ಭಾವಿಸುತ್ತಾರೆ, ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಯವರ ವಲಸೆ ಕ್ಷೇತ್ರವಾದ ಚನ್ನಪಟ್ಟಣ ಯಾವ ಅಭಿವೃದ್ಧಿಯನ್ನು ಕಾಣದೆ ಸಾಮಾನ್ಯ ಶಾಸಕರ ಕ್ಷೇತ್ರಕ್ಕಿಂತಲೂ ಕುಂಠಿತವಾಗಿದೆ.
ಬದಲಾವಣೆಗಾಗಿ ನನ್ನನ್ನು ಚುನಾಯಿಸಿ ಎಂದು ಮನವಿ ಮಾಡಿ ಗೆದ್ದು ನಂತರ ಮುಖ್ಯಮಂತ್ರಿಯಾದರೂ ಸಹ ತಾಲ್ಲೂಕಿನಲ್ಲಿ ಯಾವ ಬದಲಾವಣೆಯೂ ಆಗಲಿಲ್ಲ, ಕೆರೆ ತುಂಬಿಸುವುದಾಗಲಿ, ಅಂಬೇಡ್ಕರ್ ಭವನವಾಗಲಿ, ಹೊಸದಾಗಿ ರಸ್ತೆ ನಿರ್ಮಾಣವಾಗಲಿ, ಅಧಿಕಾರಿಗಳು ಚುರುಕಾಗಿ ಕೆಲಸ ಮಾಡುವುದಾಗಲಿ ಯಾವ ಕೆಲಸವೂ ಸಹ ಸಂಪೂರ್ಣವಾಗಲೇ ಇಲ್ಲ.
ಅದೇ ರೀತಿ ಭವಿಷ್ಯದ ರಾಷ್ಟ್ರೀಯ ಹೆದ್ದಾರಿ ಸದ್ಯದ ರಾಜ್ಯ ಹೆದ್ದಾರಿ ಆಗಿರುವ ಸಾತನೂರು ಮತ್ತು ಹಲಗೂರು ರಸ್ತೆಯ ಅಗಲೀಕರಣದ ಬಗ್ಗೆ ಸ್ಪಷ್ಟ ನಿಲುವು ಇಲ್ಲದಿರುವುದು ಹಾಗೂ ಮೊದಲು ಎಷ್ಟು ಅಗಲ ರಸ್ತೆ ಇತ್ತೋ ಅಷ್ಟಕ್ಕೇ ಡಾಂಬರು ಹಾಕಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.
ನಗರಕ್ಕೆ ಹೊಂದಿಕೊಂಡಂತೆ ಹಾಗೂ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಗೆ ಸೇರುವ ಸಾತನೂರು ರಸ್ತೆಯು ಸಾತನೂರು ಸರ್ಕಲ್ ನಿಂದ ಮಹದೇಶ್ವರ ದೇವಸ್ಥಾನ ದ ವರೆಗೆ ಸ್ವಲ್ಪ ಮಟ್ಟಿಗೆ ರಸ್ತೆ ಅಗಲೀಕರಣ ಮಾಡಿ ಇತ್ತೀಚೆಗೆ ರಸ್ತೆ ವಿಭಜಕಗಳನ್ನು ಕಟ್ಟಿದ್ದಾರೆ.
ಆದರೆ ಎರಡೂ ಬದಿಯಲ್ಲಿಯೂ ಸಹ ಪಾದಚಾರಿ ರಸ್ತೆಯನ್ನೇ ಅಗಲೀಕರಿಸಿ ರಸ್ತೆಯನ್ನು ಮಾಡಿ ಪುಟ್ಪಾತ್ ಇಲ್ಲದಂತೆ ಮಾಡಿರುವುದೇ ಇಲಾಖೆಯ ಸಾಧನೆ ?
ಸಾತನೂರು ಸರ್ಕಲ್ ನಿಂದ ಕಾವೇರಿ ನೀರು ಸರಬರಾಜು ಕಛೇರಿಯ ತನಕ ಎರಡೂ ಭಾಗದಲ್ಲಿಯೂ ಅಂಗಡಿ ಮಾಲೀಕರು ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದರೆ, ಅರಳಿ ಕಟ್ಟೆಯ ದೇವಾಲಯ ಮತ್ತು ಮುಸ್ಲಿಮರ ಸ್ಮಶಾನ ತೆರವುಗೊಳಿಸದೇ ಅಗಲೀಕರಣ ಎಂಬುದು ಕೇವಲ ಸಬೂಬು ಹಾಗೂ ಓಟಿನ ರಾಜಕಾರಣ ಎಂಬುದು ಮನದಟ್ಟಾಗುತ್ತಿದೆ.
ಮುಖ್ಯಮಂತ್ರಿಗಳ ಕ್ಷೇತ್ರವಾಗಿರುವ ಚನ್ನಪಟ್ಟಣ ತಾಲ್ಲೂಕಿನ ಹೆಚ್ಚು ಭಾರವುಳ್ಳ ಈ ರಸ್ತೆಯನ್ನು ದೃಢ ನಿರ್ಧಾರ ಮಾಡಿ ಶೀಘ್ರವಾಗಿ ರಸ್ತೆ ಅಗಲೀಕರಣದ ಜೊತೆಗೆ ಪಾದಚಾರಿ ರಸ್ತೆ ನಿರ್ಮಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಪ್ರಯಾಣಿಕರು ಮನವಿ ಮಾಡಿಕೊಂಡಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು