ರಕ್ತಕೊಡುವುದನ್ನೇ ಉದ್ಯೋಗ ಮಾಡಿಕೊಂಡವರಿಂದ ರಕ್ತ ಸಂಗ್ರಹಿಸಬೇಡಿ- ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ
ಇಂದು ಚಂದ್ರು ಡಯಾಗ್ನೋಸ್ಟಿಕ್ ಸೆಂಟರ್ ನಲ್ಲಿ ಜೀವಾಮೃತ ಬ್ಲಡ್ ಬ್ಯಾಂಕ್ನ್ನು ರಾಮನಗರ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ ರಾಜೇಂದ್ರ ರವರು ಉದ್ಘಾಟಿಸಿದರು. ರಕ್ತನಿಧಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿಗಳಾದ ಡಾ. ಕೆ. ರಾಜೇಂದ್ರ ಅವರು ರಕ್ತ ಕೊಡುವುದನ್ನೇ ಉದ್ಯೋಗ ಮಾಡಿಕೊಂಡಿರುವವರಿಂದ ರಕ್ತ ಸಂಹ್ರಹಿಸ ಬೇಡಿ ಆರೋಗ್ಯವಂತ ಯುವಕರು ಮತ್ತು ಸಂಘಸಂಸ್ಥೆಗಳ ಸದಸ್ಯರಿಂದ ರಕ್ತ ಸಂಗ್ರಹಿಸಿ ಎಂದು ಸಲಹೆ ನೀಡಿದರು.
ಮುಂದುವರಿದು ಮಾತನಾಡಿದ ಅವರು ಆರೋಗ್ಯವಂತ ಸಾರ್ವಜನಿಕರಿಂದ ರಕ್ತವನ್ನು ಪಡೆಯಿರಿ. ತುಂಬಾ ಅವಶ್ಯಕತೆ ಉಳ್ಳವರಿಗೆ ರಕ್ತವನ್ನು ಕೊಡಿ. ಬೆಂಗಳೂರು ಮಂಡ್ಯ ನಡುವೆ ಒಂದು ಸುಸಜ್ಜಿತ ರಕ್ತ ನಿಧಿ ಕೇಂದ್ರ ಸ್ಥಾಪನೆ ಮಾಡಿರುವುದು ಸ್ವಾಗತಾರ್ಹವಾದ ಸಂಗತಿಯಾಗಿದೆ ಎಂದರು.
ಮೂರು ವರ್ಷಗಳ ಹಿಂದೆ ನನಗೆ ಒಂದು ಸಾರಿ ಡೆಂಗ್ಯೂ ಬಂದಾಗ ರಕ್ತಕ್ಕಾಗಿ ಹಾಗೂ ಪ್ಲೇಟ್ಲೆಟ್ಗಾಗಿ ಪಟ್ಟ ಬವಣೆಯನ್ನು ಸಭೆಯ ಮುಂದೆ ಪ್ರಸ್ತಾಪ ಮಾಡಿ ನಾನು ಐ.ಎ.ಎಸ್ ಅಧಿಕಾರಿಯಾಗಿಯೇ ಅಷ್ಟೊಂದು ಬವಣೆ ಪಟ್ಟಿರ ಬೇಕಾದರೆ ಇನ್ನು ಜನ ಸಾಮ್ಯಾನರ ಗತಿ ಏನು ಎಂದು ಹೇಳಿ ಈ ಬ್ಲಡ್ ಬ್ಯಾಂಕ್ಗೆ ಯಾವುದೇ ಕಳಂಕ ತಟ್ಟದ ರೀತಿಯಲ್ಲಿ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಸ್ತ ಚಿಕಿತ್ಸಕ ಡಾ. ವಿಜಯ ನರಸಿಂಹ, ಹಾಗೂ ಕೆನರಾ ಬ್ಯಾಂಕಿನ ಮೇನೆಜರ್ ಅಮರ್ನಾಥ್ ಅವರು ಶುಭ ಕೋರಿದರು.
ಬ್ಲಡ್ ಬ್ಯಾಂಕಿನ ಸ್ಥಾಪಕರಾದ ಚಂದ್ರು ಅವರು ಮಾತನಾಡಿ ನಾನು ೨೦೧೧ರಿಂದಲೂ ಇಲ್ಲಿ ಬ್ಲಡ್ ಬ್ಯಾಂಕ್ ಸ್ಥಾಪನೆಗೆ ಪ್ರಯತ್ನ ಪಡುತ್ತಲೇ ಇದ್ದೆ. ಆದರೆ ಕಾಲ ಕೂಡಿಬಂದಿರಲಿಲ್ಲ. ಸೂಕ್ತ ಕಾಲದಲ್ಲಿ ಒಂದು ಬಾಟಲ್ ರಕ್ತ ಸಿಗದೆ ಹೆರಿಗೆ ಸಂದರ್ಭದಲ್ಲಿ ಸಾವನ್ನಪ್ಪಿದ ಮಹಿಳೆಯನ್ನು ನೋಡಿದ್ದೇನೆ, ಅಷ್ಟೆ ಅಲ್ಲದೆ ಬೇರೆ ಬೇರೆ ಸಂದರ್ಭಗಳಲ್ಲಿ ರಕ್ತ ಸಿಗದೆ ಸಾವು ನೋವುಗಳನ್ನು ಕಂಡಿದ್ದೇನೆ, ಹಾಗಾಗಿ ಈ ಬ್ಲಡ್ ಬ್ಯಾಂಕ್ನ್ನು ಮಾಡಲೇ ಬೇಕು ಎಂಬ ಛಲದಿಂದ ಮಾಡಿದ್ದೇನೆ. ಇದರ ಸದ್ಬಳಕೆಯನ್ನು ಜನರು ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು