ತಾಲ್ಲೂಕು ಜೆಡಿಎಸ್ ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದಕ್ಕೆ ಮೂರನೇ ವ್ಯಕ್ತಿ ಸ್ಪರ್ಧೆಯೇ ಸಾಕ್ಷಿ
ಬಮೂಲ್ ನ ನಿರ್ದೇಶಕರ ಸ್ಥಾನಕ್ಕೆ ಜೆಡಿಎಸ್ ಪಕ್ಷದಿಂದ ಹಾಲಿ ನಿರ್ದೇಶಕ ಎಸ್ ಲಿಂಗೇಶ್ ಕುಮಾರ್ ಮತ್ತು ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಜಯಮುತ್ತು ಸ್ಪರ್ಧಿಸುವುದು ಖಚಿತ ಎಂಬುದನ್ನು ಮನಗಂಡ ಮಾಜಿ ಸಚಿವ ಸಿ ಪಿ ಯೋಗೇಶ್ವರ್, ಅವರ ಸಹೋದರ ಅಥವಾ ಬೆಂಬಲಿಗರಲ್ಲೊಬ್ಬರನ್ನು ಕಣಕ್ಕೆ ಇಳಿಸುವುದಾಗಿ ಈಗಾಗಲೇ ಘೋಷಿಸಿದ್ದಾರೆ, ಇದರ ನಡುವೆಯೇ ಜೆಡಿಎಸ್ ನ ಮತ್ತೊಬ್ಬ ಯುವ ಮುಖಂಡ ಪಕ್ಷದ ಮೂರನೇ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಜ್ಜಾಗಿರುವುದು ತಾಲ್ಲೂಕು ಜೆಡಿಎಸ್ ನ ಮುಖಂಡರ ಮುಸುಕಿನ ಗುದ್ದಾಟವನ್ನು ತೋರಿಸುತ್ತದೆ.
ತಾಲೂಕಿನ ಬಮೂಲ ಚುನಾವಣೆಗೆ ಮೂರನೇ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ ಎಂದು ಮಾಜಿ ಪ್ರಧಾನಿ ಹೇಳಿದ ಬೆನ್ನಲ್ಲೇ ಜೆಡಿಎಸ್ ಪಕ್ಷದ ವತಿಯಿಂದ ಹೊಸ ಅಭ್ಯರ್ಥಿಗಳು ಸ್ಪರ್ಧಿಸಲು ಆಸಕ್ತಿ ತೋರಿಸುತ್ತಿದ್ದಾರೆ.
ಹಾಲಿ ನಿರ್ದೇಶಕ ಲಿಂಗೇಶ್ಕುಮಾರ್ ಹಾಗೂ ಪಕ್ಷದ ಅಧ್ಯಕ್ಷ ಜಯಮುತ್ತು ನಡುವೆ ಇದೀಗ ಮತ್ತೋರ್ವ ಜೆಡಿಎಸ್ ಮುಖಂಡ, ಸಮಾಜ ಸೇವಕ ಉದ್ಯಮಿ ಬೆಳಕೆರೆ ಕುಮಾರ್ ಅಭ್ಯರ್ಥಿಯಾಗಲು ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಈಗಾಗಲೇ ಜೆಡಿಎಸ್ ಪಕ್ಷದ ಇಬ್ಬರೂ ನಾಯಕರಾದ ಬಮುಲ್ ಹಾಲಿ ನಿರ್ದೇಶಕ ಲಿಂಗೇಶ್ಕುಮಾರ್ ಹಾಗೂ ತಾಲೂಕು ಅಧ್ಯಕ್ಷ ಎಚ್.ಸಿ ಜಯಮುತ್ತು ಅಭ್ಯರ್ಥಿಗಳಾಗಲೂ ತೀವ್ರ ಕಸರತ್ತು ನಡೆಸುತ್ತಿದ್ದು, ಉಭಯ ನಾಯಕರು ಪಕ್ಷದ ವರಿಷ್ಠರ ಬಳಿ ತೀವ್ರ ಲಾಭಿ ನಡೆಸುತ್ತಿದ್ದಾರೆ.
ಕಳೆದ ವಾರವಷ್ಟೇ ಇಬ್ಬರೂ ನಾಯಕರು ತಮ್ಮ ತಮ್ಮ ಬೆಂಬಲಿಗರ ಜೊತೆ ತೆರಳಿ ಪಕ್ಷದ ವರಿಷ್ಠ ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರನ್ನು ಬೇಟಿ ಮಾಡಿ ಅವಕಾಶ ಮಾಡಿಕೊಂಡುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಪಕ್ಷದ ವರಿಷ್ಠ ದೇವೇಗೌಡ ಬಮೂಲ ಚುನಾವಣೆಯಿಂದ ತಾಲೂಕಿನಲ್ಲಿ ಪಕ್ಷದ ಸಂಘಟನೆಗೆ ಹಿನ್ನಡೆಯಾಗುತ್ತಿದೆ. ನಿಮ್ಮಿಬ್ಬರಲ್ಲಿ ಯಾರಾದರೂ ಒಬ್ಬರು ಅಭ್ಯರ್ಥಿಯಾಗಲು ನೀವೆ ನಿರ್ಧರಿಸಿ ಇಲ್ಲವಾದಲ್ಲಿ ನಾವೇ ಮೂರನೇ ಅಭ್ಯರ್ಥಿ ಪ್ರಕಟಿಸುತ್ತೇವೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ ಎಂಬುದನ್ನು ಸ್ಮರಿಸಬಹುದು.
ಪಕ್ಷದ ವರಿಷ್ಠ ದೇವೇಗೌಡರ ಹೇಳಿಕೆ ತಾಲೂಕಿನ ಪಕ್ಷದ ವಲಯದಲ್ಲಿ ಸಂಚಲನ ಮೂಡಿಸಿದ್ದು, ಮೂರನೇ ಅಭ್ಯರ್ಥಿಯಾಗಿ ವಿಧ್ಯಾರ್ಥಿ ದೆಸೆಯಿಂದಲೇ ಜೆಡಿಎಸ್ ಕಾರ್ಯಕರ್ತನಾಗಿ, ಪಕ್ಷದ ಸ್ಥಳೀಯ ಪ್ರಭಾವಿ ಮುಖಂಡರಾಗಿ, ಗುರುತಿಸಿಕೊಂಡಿರುವ ಬೆಳಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ, ಉದ್ಯಮಿ ಬೆಳಕೆರೆ ಕುಮಾರ್ ಸ್ಪರ್ದಿಸಲು ಉತ್ಸುಕರಾಗಿದ್ದಾರೆ.
ಪಕ್ಷ ಅವಕಾಶ ನೀಡಿದರೆ ಸಿದ್ದ:
ಈ ಕುರಿತು ಪತ್ರಿಕೆಯ ಜೊತೆ ಮಾತನಾಡಿರುವ ಬೆಳಕೆರೆ ಕುಮಾರ್, ಹಲವಾರು ವರ್ಷಗಳಿಂದ ಪಕ್ಷದ ಸಂಘಟನೆಯಲ್ಲಿ ಸಕ್ರಿಯನಾಗಿದ್ದೇನೆ. ಇದುವರೆಗೂ ಯಾವುದೇ ಹುದ್ದೆಯ ಆಕಾಂಕ್ಷಿಯಾಗಿಲ್ಲ. ನಾನು ವೃತ್ತಿಯಲ್ಲಿ ಉದ್ಯಮಿ ಯಾಗಿದ್ದು, ಕೃಷಿ ಹಾಗೂ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದೇನೆ. ರೈತರ ಕಷ್ಟಸುಖಗಳನ್ನು ಬಹಳ ಹತ್ತಿರದಿಂದ ಕಂಡಿದ್ದೇನೆ. ವರಿಷ್ಠರು ನನಗೆ ಆಶೀರ್ವಾದ ಮಾಡಿದರೆ ಹಾಲು ಉತ್ಪಾದಕರ ಹಿತ ಕಾಯಲು ಸಿದ್ದವಾಗಿದ್ದೇನೆ. ಈಗಾಗಲೇ ಪಕ್ಷದ ವರಿಷ್ಠರನ್ನು ಬೇಟಿ ಮಾಡಿ ಅವಕಾಶ ಕೋರಿದ್ದೇನೆ ಪಕ್ಷದ ಆದೇಶಕ್ಕೆ ಬದ್ದನಾಗಿದ್ದೇನೆ ಎಂದು ತಿಳಿಸಿದ್ದಾರೆ.
ಒಟ್ಟಾರೆ ತಾಲೂಕಿನ ಹಾಲಿನ ರಾಜಕಾರಣ ಜೆಡಿಎಸ್ ಪಕ್ಷದಲ್ಲಿ ಸಂಚಲನ ಮೂಡಿಸಿದೆ. ಇಬ್ಬರೂ ಪ್ರಮುಖ ಆಕಾಂಕ್ಷಿತರ ನಡುವೆ ಇದೀಗ ಮತ್ತೋರ್ವ ಮುಖಂಡ ಆಖಾಡಕ್ಕೆ ಇಳಿಯಲು ಸಜ್ಜಾಗಿರುವುದು ಜೆಡಿಎಸ್ ವರಿಷ್ಠರ ಕೃಪೆ ಯಾರಿಗೆ ಒಲಿಯಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಮುಂದಿನ ಬಮೂಲ್ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳು ಹೆಚ್ಚಾದಷ್ಟು ಕೆಲವು ಮತದಾರರು ಕೊಬ್ಬಿದ ಕುದುರೆಗಳಾಗುವುದರಲ್ಲಿ ಅನುಮಾನವೇ ಇಲ್ಲ, ಬಹುತೇಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಮೂಲ ಡೈರಿಗಿಂತ ಡೈರಿಯಲ್ಲಿ ಕೆಲಸ ನಿರ್ವಹಿಸುವ ಕಾರ್ಯದರ್ಶಿಗಳೇ ಉದ್ದಾರವಾಗಿರುವುದು ಕಂಡುಬರುತ್ತಿದೆ, ಗೆದ್ದು ಬಂದ ನಾಯಕರು ಅಧ್ಯಕ್ಷ ಮತ್ತು ಕಾರ್ಯದರ್ಶಿ ಗಳ ಹಿತ ಕಾಯುವ ಬದಲು ಹೈನುಗಾರಿಕಾ ರೈತರನ್ನು ಉಳಿಸಿ ಬೆಳೆಸುವ ಕೆಲಸ ಮಾಡಲಿ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು