Tel: 7676775624 | Mail: info@yellowandred.in

Language: EN KAN

    Follow us :


ಚನ್ನಪಟ್ಟಣ ಎಸ್ ಎಸ್ ಎಲ್ ಸಿ ಯಲ್ಲಿ ಸರ್ಕಾರಿ ಶಾಲೆಯೇ ಮೇಲುಗೈ

Posted date: 30 Apr, 2019

Powered by:     Yellow and Red

ಚನ್ನಪಟ್ಟಣ ಎಸ್ ಎಸ್ ಎಲ್ ಸಿ ಯಲ್ಲಿ ಸರ್ಕಾರಿ ಶಾಲೆಯೇ ಮೇಲುಗೈ

ಚನ್ನಪಟ್ಟಣ:೨೦೧೮/೧೯ ನೇ ಸಾಲಿನ ಎಸ್‌ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಮನಗರ ಜಿಲ್ಲೆ ರಾಜ್ಯದಲ್ಲಿಯೇ ದ್ವಿತೀಯ ಸ್ಥಾನ ಪಡೆದರೆ, ಚನ್ನಪಟ್ಟಣ ತಾಲ್ಲೂಕು ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ಅದರಲ್ಲೂ ಬಹುತೇಕ ಪೋಷಕರು ಮೂಗು ಮುರಿಯುವ ಸರ್ಕಾರಿ ಶಾಲೆಗಳೇ ಮೇಲುಗೈ ಸಾಧಿಸಿರುವುದು ಶಿಕ್ಷಣ ಇಲಾಖೆಯ ಸಾಧನೆ ಎನ್ನಲಡ್ಡಿಯಿಲ್ಲ.


ಚನ್ನಪಟ್ಟಣ ತಾಲ್ಲೂಕಿನಾದ್ಯಂತ ೨,೯೩೬ ಮಕ್ಕಳು ಪರೀಕ್ಷೆ ಬರೆದಿದ್ದು ೨,೫೮೮ ಮಕ್ಕಳು ಉತ್ತೀರ್ಣರಾಗಿದ್ದು ೩೪೮ ಮಕ್ಕಳು ಮಾತ್ರ ನಪಾಸಾಗಿದ್ದಾರೆ.


ಇಡೀ ತಾಲ್ಲೂಕಿನ ಅರವತ್ತು ಶಾಲೆಗಳಲ್ಲಿ ಶೇಕಡಾ ೮೮.೧೫ ರಷ್ಟು ಫಲಿತಾಂಶ ಬಂದಿದ್ದು ೨೯ ಸರ್ಕಾರಿ ಶಾಲೆಗಳಲ್ಲಿ ೦೯ ಶಾಲೆಗಳು, ೧೪ ಅನುದಾನಿತ ಶಾಲೆಗಳಲ್ಲಿ ೦೪ ಶಾಲೆಗಳು ಮತ್ತು ೧೭ ಅನುದಾನ ರಹಿತ ಶಾಲೆಗಳಲ್ಲಿ ೦೬ ಶಾಲೆಗಳು ಶೇಕಡಾ ನೂರು ಫಲಿತಾಂಶ ಬಂದಿದೆ.


ಸೇಂಟ್ ಮೈಕೆಲ್ ಶಾಲೆಯ ಚೇತನ್ ಸಿ ೬೨೫/೬೧೧ ಅಂಕ ಪಡೆದು ಪ್ರಥಮ ಸ್ಥಾನ ಪಡೆದರೆ ಸೆಂಟ್ ಮೈಕೆಲ್ ಶಾಲೆಯ ಸ್ಕಂದ ೬೦೩ ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ.

ಸೆಂಟ್ ಮೈಕೆಲ್ ಶಾಲೆಯ ಸಮತಾ ಮತ್ತು ಬಾಲು ಪಬ್ಲಿಕ್ ಶಾಲೆಯ ಪೂಜಾಶ್ರೀ ೬೦೦ ಅಂಕ ಪಡೆದು ತೃತೀಯ ಸ್ಥಾನ ಪಡೆದರೆ ಸಾಧನಾ ವಿದ್ಯಾಲಯದ ಹೇಮಂತ್ ೫೯೮ ಅಂಕ ಪಡೆದು ನಾಲ್ಕನೇ ಸ್ಥಾನ ಪಡೆದಿದ್ದಾರೆ.


ಬಿಇಓ ಇಸಿಓ ಸಂದೇಶ


ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಎಸ್ ಸೀತಾರಾಮು ಮತ್ತು ಇಸಿಓ ತಮ್ಮಣ್ಣ ಮಾತನಾಡಿ ಪರೀಕ್ಷೆಯಲ್ಲಿ ಅನುತ್ತೀರ್ಣ ಆದ ಮಕ್ಕಳು ಮತ್ತು ಪೋಷಕರು ಆತಂಕ ಪಡದೆ, ಧೈರ್ಯದಿಂದ ಇರಬೇಕು, ಪೋಷಕರು ಸಹ ಮಕ್ಕಳಿಗೆ ಸಾಂತ್ವನ ಹೇಳಿ ಮುಂದಿನ ಪರೀಕ್ಷೆ ಗೆ ತಯಾರಾಗುವಂತೆ ಪ್ರೇರೇಪಿಸಬೇಕು, ಇದೇ ಜೀವನವಲ್ಲ, ಇಂದು ಸೋತವರು ನಾಳೆ ಗೆದ್ದೇ ಗೆಲ್ಲುತ್ತಾರೆ, ಯಾರೂ ಸಹ ದುಡುಕದೇ ಮುಂದಿನ ಪರೀಕ್ಷೆ ಗೆ ತಯಾರಿ ಮಾಡಿಕೊಳ್ಳಿ ಎಂದು ಕರೆ ನೀಡಿದರು.


ಸಿ ಪುಟ್ಟಸ್ವಾಮಿ ಶ್ಲಾಘನೆ


ಇಡೀ ರಾಜ್ಯದಲ್ಲಿ ರಾಮನಗರ ಜಿಲ್ಲೆ ದ್ವಿತೀಯ ಸ್ಥಾನ ಹಾಗೂ ಜಿಲ್ಲೆಯಲ್ಲಿ ಚನ್ನಪಟ್ಟಣ ಪ್ರಥಮ ಸ್ಥಾನ ಗಳಿಸಲು ಶ್ರಮಿಸಿದ  ಜಿಲ್ಲಾಡಳಿತ, ತಾಲ್ಲೂಕು ಆಡಳಿತ, ಜಿಲ್ಲಾ ಶಿಕ್ಷಣಾಧಿಕಾರಿ, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ, ಸಿಬ್ಬಂದಿಗಳು ಮತ್ತು ಆಯಾಯ ಶಾಲೆಗಳ ಅಧ್ಯಾಪಕರು, ಪೋಷಕರು ಮತ್ತು ಮಕ್ಕಳಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ವರ್ಷ ರಾಮನಗರ ಜಿಲ್ಲೆಯು ಪ್ರಥಮ ಸ್ಥಾನ ಗಳಿಸಲಿ ಎಂದು ಆಶಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑