ಜೀವನದ ಕಷ್ಟ ಸುಖದ ತಿರುಳು ಮಂಕುತಿಮ್ಮನ ಕಗ್ಗದ ರಸಧಾರೆ ಸಿ.ಬಿ ಅಶೋಕ್
ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು|
ಕಲ್ಲಾಗು ಕಷ್ಟಗಳ ಮಳೆ ವಿಧಿ ಸುರಿಯೇ||
ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಗೆ|
ಎಲ್ಲರೊಳಗೊಂದಾಗು ಮಂಕುತಿಮ್ಮ||
ಕವಿಯಲ್ಲ, ವಿಜ್ಞಾನಿಯಲ್ಲ, ಬರಿ ತಾರಾಡಿ
ಅವನರಿವಿಗೆಟುಕುವೊಲೊಂದಾತ್ಮನಯವ
ಹವಣಿಸಿದನಿದನು ಪಾಮರಜನರ ಮಾತಿನಲಿ
ಕವನ ನೆನಪಿಗೆ ಸುಲಭ-ಮಂಕುತಿಮ್ಮ
ಎಂಬ ಈ ಎರಡು ರೀತಿಯ ಎಂಟು ಸಾಲುಗಳೇ ಮನುಷ್ಯನಾದವನು ಜೀವನದಲ್ಲಿ ಹೇಗಿರಬೇಕೆಂಬ ಪಾಠಗಳನ್ನು ಉಲ್ಲೇಖಿಸುತ್ತದೆ ಎಂದು ಮಾಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಇಸಿಓ ಸಿ.ಬಿ ಅಶೋಕ್ ತಮ್ಮ ಉಪನ್ಯಾಸದಲ್ಲಿ ತಿಳಿಸಿಕೊಟ್ಟರು.
ಅವರು ಆದಿಚುಂಚನಗಿರಿ ಮಹಾಸಂಸ್ಥಾನದ ಅರ್ಚಕರಹಳ್ಳಿ ಶಾಖಾ ಮಠದಲ್ಲಿ ನಡೆಯುತ್ತಿರುವ ೨೨ ನೇ ಮಹಿಳಾ ಜನ ಜಾಗೃತಿ ತರಬೇತಿ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.
ಇದು ದರ್ಶನವೂ ಹೌದು, ಸುಭಾಷಿತ, ಮತ್ತು ಉತ್ತಮ ಸಾಹಿತ್ಯ. ಜೀವನದ ಮೂಲ ಸಮಸ್ಯೆಗಳ ಬಗ್ಗೆ ಚಿಂತನೆ, ಮತ್ತು ವರ್ಣನೆಯೂ ಹೌದು. ಎಲ್ಲ ಜನರಿಗೂ ಎಲ್ಲಾ ಕಾಲಕ್ಕೂ ಉಪಯುಕ್ತವಾಗಬಲ್ಲ ವಿಷಯಗಳಿರುವ ಸುಭಾಷಿತ- ಇಡೀ ಜನಾಂಗದ ಚಿಂತನಧಾರೆಯನ್ನು ಮೇಲ್ಮಟ್ಟಕ್ಕೆ ಎತ್ತಬಲ್ಲ ಸತ್ವ ಇದರಲ್ಲಿದೆ. ಇದೇ ಸಾಹಿತ್ಯದಲ್ಲಿ ನಾವುಗಳು ಗಮನಿಸಬೇಕಾದ ಮುಖ್ಯ ಲಕ್ಷಣಗಳು ; ಮತ್ತು ಗುಣಗಳು ಎಂದು ಅವರು ವ್ಯಾಖ್ಯಾನಿಸಿದರು.
ಎಲ್ಲರೊಳಗೊಂದಾಗು ಮಂಕುತಿಮ್ಮ ಹಾಗೂ ಇನ್ನಿತರ ಡಿ ವಿ ಗುಂಡಪ್ಪನವರ ಅನೇಕ ಗೀತೆಗಳನ್ನು ಹಾಡಿ, ಹಾಡಿಸಿ ಮಕ್ಕಳಲ್ಲಿ ಉತ್ಸಾಹ ತುಂಬಿದರು.
ಎಂದಿನಂತೆ ಮಹಿಳಾ ಜನ ಜಾಗೃತಿ ಶಿಬಿರದಲ್ಲಿ ಯೋಗಾಭ್ಯಾಸ, ಭಜನೆ, ಇನ್ನಿತರ ಕಾರ್ಯಕ್ರಮಗಳು ನಡೆದವು.
ಶಾಖಾ ಮಠದ ಕಾರ್ಯದರ್ಶಿಗಳಾದ ಶ್ರೀ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿಯವರು ಸಾನಿಧ್ಯ ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ಈ ಟಿವಿ ಭಾರತ ವಾಹಿನಿಯ ಪ್ರಕಾಶ್, ವಿಜಯವಾಣಿ ಪತ್ರಿಕೆಯ ಜಿಲ್ಲಾ ವರದಿಗಾರ ಗಂಗಾಧರ್ ಭೈರಾಪಟ್ಟಣ, ಪ್ರಜಾವಾಣಿ ಪತ್ರಿಕೆಯ ಜಿಲ್ಲಾ ವರದಿಗಾರ ಜಿತೇಂದ್ರ, ವಿಜಯ ಕರ್ನಾಟಕ ಪತ್ರಿಕೆಯ ಕಚುವನಹಳ್ಳಿ ಶ್ರೀಧರ್ ಮತ್ತು ಶಿಬಿರದ ನಿರ್ದೇಶಕರಾದ ಶ್ರೀ ನರಸಿಂಹಯ್ಯ ರವರು ಉಪಸ್ಥಿತರಿದ್ದರು.
ಶಿಬಿರಾರ್ಥಿ ಕುಮಾರಿ ಯಮುನಾ ನಿರೂಪಿಸಿ ವಂದಿಸಿದರು
ರಾಜ್ಯದ ಅನೇಕ ಜಿಲ್ಲೆಗಳ ಎಂಟು ನೂರಕ್ಕೂ ಹೆಚ್ಚು ಹೆಣ್ಣು ಮಕ್ಕಳು ಈ ಶಿಬಿರದಲ್ಲಿ ಪಾಲ್ಗೊಂಡಿದ್ದರು.
ಗೋ ರಾ ಶ್ರೀನಿವಾಸ...
ಮೊ9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು