ವಿದ್ಯಾರ್ಥಿಯನ್ನು ಗುರಿಯೆಡೆಗೆ ಕರೆದೊಯ್ಯಲು ಗುರುಗಳಿಂದ ಮಾತ್ರ ಸಾಧ್ಯ, ಚಿಕ್ಕವೀರಯ್ಯ
ನುಗ್ಗಿ ನಡೆ ಮುಂದೆ ನುಗ್ಗಿ ನಡೆ ಮುಂದೆ ಜಗ್ಗದೆಯೆ ಕುಗ್ಗದೆಯೆ ಹಿಗ್ಗಿ ನಡೆ ಮುಂದೆ* ಎಂಬ ಕುವೆಂಪು ರವರ ಗೀತೆಯ ಸಾಲುಗಳೇ ಗುರಿಯೆಡೆಗೆ ತಲುಪಿಸುವ ಮಾರ್ಗವನ್ನು ಉಲ್ಲೇಖಿಸಿವೆ,
ವಿದ್ಯೆ ಆಗಲಿ, ಸಂಸ್ಕಾರ ಆಗಲಿ, ಗುರುವಿನ ಮಾರ್ಗದರ್ಶನದಲ್ಲಿ ಶಿಕ್ಷಿತವಾಗಿ ಮುನ್ನಡೆದರೆ ಗುರಿ ಸಾಧ್ಯ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಚಿಕ್ಕವೀರಯ್ಯ ತಿಳಿಸಿದರು.
ಅವರು ಆದಿಚುಂಚನಗಿರಿ ಮಹಾಸಂಸ್ಥಾನ ದ ರಾಮನಗರ ಶಾಖಾ ಮಠದಲ್ಲಿ ಆಯೋಜಿಸಿದ್ದ ೨೨ ನೇ ರಾಜ್ಯ ಮಟ್ಟದ ಮಹಿಳಾ ಜನ ಜಾಗೃತಿ ತರಬೇತಿ ಶಿಬಿರಾರ್ಥಿಗಳಿಗೆ ನೈತಿಕ ಮೌಲ್ಯ ಹಾಗೂ ವಚನ ಸಾಹಿತ್ಯ ಪರಿಚಯ ಕುರಿತು ಉಪನ್ಯಾಸ ನೀಡಿದರು.
ಮನುಷ್ಯ ಜಾತಿ ತಾನೊಂದೆ ವಲಂ, ಎಂಬ ಪಂಪ ನ ಕಾವ್ಯ ಉಲ್ಲೇಖಿಸಿದ ಅವರು ಆ ಶತಮಾನದಲ್ಲಿಯೇ ಜಾತಿಯ ಬಗ್ಗೆ ದಿಟ್ಟ ಕಾವ್ಯಗಳನ್ನು ರಚಿಸಿದ್ದರು, ಹನ್ನೆರಡನೆಯ ಶತಮಾನದಲ್ಲಿ ಬಸವಣ್ಣ ನವರು ಮತ್ತು ಅಕ್ಕಮಹಾದೇವಿ ಯವರು ತಮ್ಮ ವಚನಗಳ ಮೂಲಕ ಅರಿವು ಮೂಡಿಸುವ ಹಾಗೂ ಜಾತಿ ಪದ್ದತಿಯನ್ನು ಹೋಗಲಾಡಿಸಲು ಅನೇಕ ವಚನಗಳನ್ನು ರಚಿಸಿ ಜಾಗೃತಿ ಮೂಡಿಸಿದ್ದರು.
ಪಾಶ್ಚಾತ್ಯ ದೇಶಗಳಲ್ಲಿ ಬಟ್ಟೆ ಹಾಕುವುದು ಗೊತ್ತಿಲ್ಲದ ಸಮಯದಲ್ಲಿ ನಮ್ಮ ದೇಶ ಆಚಾರ ಸಂಸ್ಕಾರವನ್ನು ಜಗತ್ತಿಗೆ ತಿಳಿಸುವಷ್ಟು ಬೆಳೆದಿತ್ತು, ರಾಮಕೃಷ್ಣ ಪರಮಹಂಸರು, ಸ್ವಾಮೀ ವಿವೇಕಾನಂದರು, ವಿಶ್ವೇಶ್ವರಯ್ಯ, ಸುಭಾಷ್ ಚಂದ್ರ ಬೋಸ್ ರಂತವರು ನಮ್ಮ ದೇಶದ ಶಿಸ್ತು ಸಂಯಮ, ಆಚಾರ ವಿಚಾರಗಳನ್ನು ಜಗತ್ತಿಗೆ ಸಾರಿದ ಮಹನೀಯರು ಎಂದು ಬಣ್ಣಿಸಿದರು. ವಿದ್ಯಾರ್ಥಿಗಳು ನಿಧಾನವೇ ಪ್ರಧಾನ ಎಂಬುದನ್ನು ಅರಿತು ಶಿಕ್ಷಕರ ಮಾರ್ಗದರ್ಶನದಲ್ಲಿ ಮುನ್ನಡೆದರೆ ಗುರಿ ಸಾಧಿಸಲು ಸಾಧ್ಯವಾಗುತ್ತದೆ ಎಂದರು.
ಕಕಜವೇ ರಾಜ್ಯಾಧ್ಯಕ್ಷ ರಮೇಶ್ ಗೌಡ ಮಾತನಾಡಿ ಅಂಧ ಮತ್ತು ವಿಕಲಚೇತನ ಮಕ್ಕಳನ್ನು ಸಾಕಿ ಸಲುಹಿ ವಿದ್ಯಾವಂತರನ್ನಾಗಿ ಮಾಡಿ ಜೀವನಕ್ಕೆ ದಾರಿ ತೋರಿಸುತ್ತಿರುವ ಸ್ವಾಮಿಜಿಗಳ ಕಾರ್ಯ ಜಗತ್ತೇ ಮೆಚ್ಚುವಂತದ್ದು ಎಂದು ಬಣ್ಣಿಸಿದರು.
ಆರಂಭ ಪತ್ರಿಕೆಯ ಸಂಪಾದಕ ಅಬ್ಬೂರು ರಾಜಶೇಖರ ಮಾತನಾಡಿ ಪತ್ರಿಕೆ ಹಂಚುತ್ತಿದ್ದ ಹುಡುಗ ಇಂದು ಜಗತ್ತಿನ ಬಹುದೊಡ್ಡ ಶ್ರೀಮಂತ, ಆತ ಅಷ್ಟು ಶ್ರೀಮಂತನಾಗಿದ್ದರೂ ಬಾಲ್ಯದಲ್ಲಿ ನೆರವು ನೀಡಿದ್ದವರನ್ನು ಮರೆಯದೇ ಅವರನ್ನು ಹುಡುಕಿಕೊಂಡು ಸಹಾಯ ಮಾಡಲು ಹೋದಾಗ ಅವರು ನಿರಾಕರಿಸಿದರು, ಅಂದರೆ ಪ್ರಪಂಚದಲ್ಲಿ ದುಡ್ಡಿದ್ದವರು ಶ್ರೀಮಂತರಲ್ಲ, ಹೃದಯವಂತರು ಮಾತ್ರ ಶ್ರೀಮಂತರು ಎಂದು ಬಿಲ್ ಗೇಟ್ಸ್ ಕುರಿತು ಮಕ್ಕಳಿಗೆ ತಿಳಿಸಿಕೊಟ್ಟರು
ಕಾರ್ಯಕ್ರಮದಲ್ಲಿ ಶಿಬಿರದ ನಿರ್ದೇಶಕ ನರಸಿಂಹಯ್ಯ, ಪ್ರಜಾವಾಣಿ ಚಂದ್ರು, ಹೊಸದಿಗಂತ ಪತ್ರಿಕೆಯ ಶಿವರಾಜು, ರಾಜ್ ನ್ಯೂಸ್ ನ ಚೇತನ್, ಬಿ ಟಿ ವಿ ಯ ರವಿಕುಮಾರ್ ಆರಂಭ ಪತ್ರಿಕೆಯ ಮಂಜು, ರೂಪೇಶ್ ಕುಮಾರ್, ರಮೇಶ್ ಸಾಧು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:984856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು