ಮಾವು ಬೆಳೆಗಾರರ ಹಿತ ಕಾಯಲು ಬದ್ದ ನಿರ್ದೇಶಕ ಡಾ ವೆಂಕಟೇಶ್
ರೈತ ಬೆಳೆದ ಮಾವಿನ ಹಣ್ಣುಗಳಿಗೆ ನೇರ ಮತ್ತು ಮುಕ್ತ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ತೋಟಗಾರಿಕೆ ನಿರ್ದೇಶಕ ಡಾ ಎಂ ಎ ವೆಂಕಟೇಶ್ ಹೇಳಿದರು.
ಅವರು ರಾಮನಗರ ಚನ್ನಪಟ್ಟಣ ಹೆದ್ದಾರಿಯಲ್ಲಿರುವ ಜಾನಪದ ಲೋಕದ ಬಳಿ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ತೋಟಗಾರಿಕೆ ಕ್ಷೇತ್ರದಲ್ಲಿ ಬೆಳೆಸುವ ಕಸಿ ಹಣ್ಣಿನ ಸಸಿಗಳ ಮಾರಾಟ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಾಲಿನ ಮಾವು ಹಣ್ಣಿಗೆ ಹಲವಾರು ಕಡೆ ಮಾರುಕಟ್ಟೆ ಒದಗಿಸಲಾಗಿದೆ, ಜಾನಪದ ಲೋಕದಲ್ಲಿ ಐದು ದಿನಗಳ ಕಾಲ ಪ್ರದರ್ಶನ ಮತ್ತು ಮೇಳ ನಡೆಯಲಿದ್ದು ನಾಳೆಯಿಂದ ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿಯೂ ಸಹ ಮೇಳವನ್ನು ಆಯೋಜಿಸಲಾಗಿದೆ, ಲಾಲ್ ಬಾಗ್ ನಲ್ಲಿ ಒಂದು ತಿಂಗಳ ಕಾಲ ನಡೆಯಲಿದೆ, ಆಸಕ್ತ ರೈತರು ಬಂದು ಭಾಗವಹಿಸಿ ಹಣ್ಣುಗಳನ್ನು ಮಾರಾಟ ಮಾಡಬಹುದು ಎಂದು ತಿಳಿಸಿದರು. ರೈತರಿಂದ ಬೇಡಿಕೆ ಬಂದರೆ ಮತ್ತಷ್ಟು ದಿನ ಮೇಳವನ್ನು ಮುಂದುವರೆಸಲಾಗುವುದು ಎಂದು ಅವರು ಭರವಸೆ ನೀಡಿದರು.
ಮುಂದಿನ ವರ್ಷಗಳಲ್ಲಿ ಮಾವು ಬೆಳೆ ಇಲ್ಲದಿರುವ ಜಿಲ್ಲೆಗಳಲ್ಲಿಯೂ ಸಹ ಪ್ರದರ್ಶನ ಮಾರಾಟ ಮೇಳವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ, ಬೆಂಗಳೂರಿನ ಮೆಜೆಸ್ಟಿಕ್ ಮತ್ತು ಮೆಟ್ರೋ ರೈಲು ನಿಲ್ದಾಣಗಳು ಸೇರಿದಂತೆ ಅನೇಕ ಜನ ನಿಬಿಡ ಪ್ರದೇಶಗಳಲ್ಲಿ ಆಯೋಜಿಸುವ ಸಂಬಂಧ ಮಾತುಕತೆ ನಡೆದಿದೆ.
ರೈತರು ಹಣ್ಣು ಮಾಡಲು ಯಾವ ರಾಸಾಯನಿಕವನ್ನು ಬಳಸದೇ ಹಣ್ಣು ಮಾಡಿ ತಂದು ಮಾರಾಟ ಮಾಡಬೇಕೆಂದು ರೈತರಿಗೆ ಕಿವಿಮಾತು ಹೇಳಿದರು.
ಗ್ರಾಹಕರು ಯಾವುದೇ ರೀತಿಯ ಆತಂಕಕ್ಕೆ ಕಿವಿ ಗೊಡದೆ ಸ್ವತಃ ಪರೀಕ್ಷಿಸಿ ಹಣ್ಣುಗಳನ್ನು ನಿರ್ಭೀತಿಯಿಂದ ಕೊಂಡುಕೊಳ್ಳಬಹುದು ಎಂದು ತಿಳಿಸಿದರು.
ರಾಮನಗರ ಜಿಲ್ಲಾ ತೋಟಗಾರಿಕೆ ಸಹಾಯಕ ನಿರ್ದೇಶಕ ಗುಣವಂತ ರವರು ಮಾತನಾಡಿ ರೈತರಿಗೆ ನಾವು ಎಲ್ಲಾ ಜಾತಿಯ ಹಣ್ಣಿನ ಗಿಡಗಳನ್ನು ರಿಯಾಯಿತಿ ದರದಲ್ಲಿ ಕೊಡುತ್ತಿದ್ದೆವೆ, ಮಳೆಗಾಲ ಆಗಿರುವುದರಿಂದ ರೈತರು ಗಿಡಗಳನ್ನು ನಾಟಿ ಮಾಡಲು ಇದು ಸಕಾಲ, ಹೆಚ್ಚಿನ ಗಿಡಗಳು ಬೇಕಾದರೆ ತೋಟಗಾರಿಕೆ ಕ್ಷೇತ್ರಕ್ಕೆ ಬಂದು ಪಡೆಯಬಹುದು.
ರೈತರು ಬೀಜ ಸಂಗ್ರಹಿಸಿ ಕೊಟ್ಟರೆ ಆ ಬೀಜಗಳನ್ನು ಬಿತ್ತನೆ ಮಾಡಿ ಸಸಿಗಳನ್ನು ಕಡಿಮೆ ಪದದ ದರದಲ್ಲಿ ಬೆಳೆಸಿಕೊಡಲಾಗುವುದು, ರೈತರು ಸದುಪಯೋಗ ಪಡಿಸಿಕೊಳ್ಳಬೇಕೆಂದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಮನಗರ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ ರಾಜೇಂದ್ರ, ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಣಾ ಅಧಿಕಾರಿ ಮುಲ್ಲೈಮುಹಿಲನ್, ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ, ಮಾವು ಬೆಳೆಗಾರ ಸಂಘದ ಚಿಕ್ಕಭೈರೇಗೌಡ, ಧರಣೀಶ ರಾಂಪುರ, ಪ್ರಗತಿ ಪರ ರೈತರು ಮತ್ತು ಮಾರಾಟಗಾರರು ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು