ಬೇಸಿಗೆ ಶಿಬಿರದ ಮುಕ್ತಾಯ ಸಮಾರಂಭ - 2019
ಸಾರ್ವಜನಿಕ ಶಿಕ್ಷಣ ಇಲಾಖೆ, ರಾಮನಗರ ಮತ್ತು ಬಾಷ್ ಲಿಮಿಟೆಡ್ ಇವರ ಸಹಯೋಗದೊಂದಿಗೆ ಬಾಷ್ ಇಂಡಿಯಾ ಪ್ರತಿಷ್ಠಾನ, ಯೆಲ್ಲೊ ಆಂಡ್ ರೆಡ್ ಫೌಂಡೇಷನ್ಸ್, ಅಗಸ್ತ್ಯ ಫೌಂಡೇಷನ್ ಸಹಯೋಗದಿಂದ ಶ್ಯಾನುಮಂಗಲ, ಜೋಡಿಕರೇನಹಳ್ಳಿ ಮತ್ತು ಅರಳಾಳುಸಂದ್ರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಳೆದ ೨೦ ದಿನಗಳಿಂದ ಆಯೋಜಿಸಲಾಗಿದ್ದ ಬೇಸಿಗೆ ಶಿಬಿರದ ಮುಕ್ತಾಯ ಸಮಾರಂಭವು ಅರಳಾಳುಸಂದ್ರ ಶಾಲೆಯಲ್ಲಿ ದಿನಾಂಕ: ೨೨/೦೫/೨೦೧೯ ರಲ್ಲಿ ಜರುಗಿತು.
ಈ ಕಾರ್ಯಕ್ರಮಕ್ಕೆ ಬಿಡದಿ ಇಂಡಸ್ಟ್ರಿಯಲ್ ಅಸೋಸಿಯೇಷನ್ ನ ಶ್ರೀಧರ್, ಇಂಡಿಯಾ ಫೌಂಡೇಶನ್ ನ ಕ್ಷೇತ್ರ ನಿರ್ದೇಶಕರಾದ ಪುಂಡಲೀಕ ಕಾಮತ್ ರವರು, ಗೇಲ್ ಇಂಡಿಯಾ ಲಿಮಿಟೆಡ್ ನ ಡೆಪ್ಯೂಟಿ ಮ್ಯಾನೇಜರ್ ಆದಂತಹ ರಾಜೀವ್ ಶರ್ಮ, ಯೆಲ್ಲೊ ಅಂಡ್ ರೆಡ್ ಫೌಂಡೇಷನ್ಸ್ ನ ಆನಂದ ಶಿವ ಹಾಗೂ ಅರಳಾಳುಸಂದ್ರ ಶಾಲೆಯ ಹಿರಿಯ ಶಿಕ್ಷಕರಾದ ಅನಿಲ್ , ಎಸ್ ಡಿ ಎಂ ಸಿ ಅಧ್ಯಕ್ಷರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ನಂತರ ಮಾತನಾಡಿದ ಬಿಡದಿ ಇಂಡಸ್ಟ್ರಿಯಲ್ ಅಸೋಸಿಯೇಷನ್ ನ , ಶ್ರೀಧರ್ ರವರು ಈ ಬೇಸಿಗೆ ಶಿಬಿರವು ಕೇವಲ ಮಕ್ಕಳಿಗೆ ಚಟುವಟಿಕೆಗಳನ್ನು ಕಲಿಸುವುದು ಮಾತ್ರವಲ್ಲದೆ ಜಾನಪದ ಕಲೆಗಳ ಮಹತ್ವವನ್ನು ಮಕ್ಕಳಿಗೆ ತಿಳಿಸಿ, ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವ ಒಂದು ಸದುದ್ದೇಶವನ್ನು ಇಟ್ಟುಕೊಂಡು ಈ ಬೇಸಿಗೆ ಶಿಬಿರವನ್ನು ಆಯೋಜಿಸಿರುವ ಬಾಷ್ ಇಂಡಿಯಾ ಫೌಂಡೇಷನ್ಸ್ ಹಾಗೂ ಯೆಲ್ಲೊ ಅಂಡ್ ರೆಡ್ ಫೌಂಡೇಷನ್ಸ್ ಕಾರ್ಯ ವೈಖರಿಯು ಶ್ಲ್ಯಾಘನೀಯವಾದದ್ದು ಎಂದರು .
ಗೇಲ್ ಇಂಡಿಯಾ ಲಿಮಿಟೆಡ್ ನ ರಾಜೀವ್ ಶರ್ಮ ರವರು ಮಕ್ಕಳು ಬೇಸಿಗೆ ರಜೆಯಲ್ಲಿ ಹೆಚ್ಚಾಗಿ ಮೊಬೈಲ್ ನ್ನು ಬಳಸುವಲ್ಲಿ ಮಗ್ನರಾಗುತ್ತಿದ್ದಾರೆ ಇದರಿಂದ ಮಕ್ಕಳ ಸೃಜನಾತ್ಮಕವಾಗಿ ಚಿಂತನೆ ಮಾಡುವ ಶಕ್ತಿ ಕಡಿಮೆಯಾಗುತ್ತಿದೆ ಈ ಸಂದರ್ಭದಲ್ಲಿ ಬೇಸಿಗೆ ಶಿಬಿರದ ಆಯೋಜನೆಯು ಮಕ್ಕಳ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಬೆಳವಣಿಗೆಗೆ ಉತ್ತಮ ವೇದಿಕೆಯಾಗಿದೆ ಮತ್ತು ರಜೆ ಸಮಯದಲ್ಲಿ ಮಕ್ಕಳು ಸ್ವಲ್ಪ ಸಮಯವಾದರೂ ಮೊಬೈಲ್ನಿಂದ ದೂರ ಉಳಿದು ಎಲ್ಲಾ ಮಕ್ಕಳ ಜೊತೆಗೂಡಿ ಸಂತೋಷದಿಂದ ಕಲಿಕೆಯಲ್ಲಿ ಪಾಲ್ಗೊಂಡಿರುವುದು ಎಲ್ಲಾ ಪೋಷಕರಿಗೂ ಖುಷಿಯ ವಿಷಯವಾಗಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು.
ಶಿಬಿರದಲ್ಲಿ ಪಾಲ್ಗೊಂಡು ಮಕ್ಕಳೇ ತಯಾರಿಸಿದ ಕರ ಕುಶಲ ಮತ್ತು ವಿಜ್ಞಾನ ಮಾದರಿಗಳ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ನಂತರ ಕರಾಟೆ, ನವ ದುರ್ಗೆಯರ ನೃತ್ಯ, ನಾಟಕ , ಜಾನಪದ ಕಲೆಗಳಾದ, ಜಡೆಕೋಲಾಟ , ಕಂಸಾಳೆ , ಹಾಲಕ್ಕಿ ನೃತ್ಯ, ಪಟ್ಟಕುಣಿತ, ಡೊಳ್ಳು ನೃತ್ಯವನ್ನು ಪ್ರದಶನ ಮಾಡುವ ಮೂಲಕ ಮಕ್ಕಳು ೨೦ ದಿನಗಳಿದ ಪಡೆದ ತರಬೇತಿ ಸಾರ್ಥಕವಾಯಿತೆಂಬ ಸಂತೋಷ ಎಲ್ಲಾ ಮಕ್ಕಳಲ್ಲೂ ಕಾಣುತಿತ್ತು.
ಇದೆ ಸಂಧರ್ಭದಲ್ಲಿ ಮಕ್ಕಳಿಗೆ ತರಬೇತಿ ನೀಡಿದ ಎಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ, ಶಾಲೆಯಲ್ಲಿ ಶಿಬಿರಕ್ಕೆ ಸಹಕಾರ ನೀಡಿದ ಎಲ್ಲಾ ಶಿಕ್ಷಕರಿಗೆ ಹಾಗೂ ಈ ಶಿಬಿರ ಯಶ್ವಸಿಯಾಗಲು ಕಾರಣರಾದ ಬಾಷ್ ಇಂಡಿಯಾ ಪ್ರತಿಷ್ಠಾನದ ಎಲ್ಲಾ ಗಣ್ಯರಿಗೂ , ಸದಸ್ಯರಿಗೂ ಮತ್ತು ಯೆಲ್ಲೊ ಅಂಡ್ ರೆಡ್ ಫೌಂಡೇಷನ್ಸ್ ನ ಎಲ್ಲಾ ಸದಸ್ಯರಿಗೂ ಸನ್ಮಾನ ಮಾಡುವ ಮೂಲಕ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಬಾಷ್ ಇಂಡಿಯಾ ಫೌಂಡೇಶನ್ ನ ಸುದರ್ಶನ್, ಪ್ರಶಾಂತ್ ಹಾಗೂ ಎಲ್ಲಾ ಸದಸ್ಯರು, ಶಿಬಿರದ ರೂವಾರಿಯದಂತಹ ಯೆಲ್ಲೊ ಅಂಡ್ ರೆಡ್ ಫೌಂಡೇಷನ್ಸ್ ನ ಆನಂದ ಶಿವ ಹಾಗೂ ಎಲ್ಲಾ ಸದಸ್ಯರು ಮತ್ತು ಅಗಸ್ತ್ಯ ಫೌಂಡೇಷನ್ ನ ಸದಸ್ಯರು, ಪಾಲ್ಗೊಂಡಿದ್ದರು.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು